ರಸ್ತೆ ದಾಟುವಾಗ ಕಾರು ಡಿಕ್ಕಿ- ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

Public TV
1 Min Read
DWD ACCIDENT DEATH COLLAGE

ಧಾರವಾಡ: ರಸ್ತೆ ದಾಟುವಾಗ ಮಹಾರಾಷ್ಟ್ರ ಮೂಲದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕರೇಪ್ಪ ನಾಯ್ಕರ(18) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ವಿದ್ಯಾರ್ಥಿ. ಈ ಘಟನೆ ನಡೆದ ನಂತರ ಮುಮ್ಮಿಗಟ್ಟಿ ಗ್ರಾಮಸ್ಥರು ಟಯರಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

DWD ACCIDENT DEATH 2

ಘಟನೆಯ ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗ್ರಾಮಸ್ಥರ ಹಾಗೂ ಮೃತ ವಿದ್ಯಾರ್ಥಿಯ ಕುಟುಂಬದ ಸದಸ್ಯರ ಮನವೊಲಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಆದಾದ ನಂತರ ಪೊಲೀಸರು ರಸ್ತೆ ತೆರವು ಮಾಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಈ ಬಗ್ಗೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *