ಮಹಿಳೆ ಮೇಲೆ ಹಾಡಹಗಲೇ ಹಲ್ಲೆ, ಅತ್ಯಾಚಾರಕ್ಕೆ ಯತ್ನ!

Public TV
1 Min Read
MND HALLE COLLAGE

ಮಂಡ್ಯ: ಜಮೀನು ವಿವಾದದ ಹಿನ್ನೆಲೆಯಲ್ಲಿ ರೈತ ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಿಬಿ ಕಾವಲು ಗ್ರಾಮದ ಬಳಿ ನಡೆದಿದೆ.

ಪ್ರೇಮಮ್ಮ(55) ದೌರ್ಜನ್ಯಕ್ಕೊಳಗಾದ ಮಹಿಳೆಯಾಗಿದ್ದು, ಇವರ ಮೇಲೆ ಆರೋಪಿಗಳಾದ ಕಾಳೇಗೌಡ(60), ಚೇತನ್(30) ಮತ್ತು ಪ್ರವೀಣ್(28) ರಿಂದ ಈ ಕೃತ್ಯ ಎಸಗಿದ್ದಾರೆ.

ಹಲ್ಲೆಗೊಳಗಾದ ಮಹಿಳೆಗೆ ಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಬಿ ಕಾವಲು ಗ್ರಾಮದ ತಮ್ಮ ಜಮೀನಿನ ಬಳಿ ಕೆಲಸ ಪ್ರೇಮಮ್ಮ ಕೆಲಸ ಮಾಡುತ್ತಿದ್ದರು. ಈ ವೇಳೆ ಅಪ್ಪ-ಮಕ್ಕಳು. ಪ್ರೇಮಮ್ಮ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿ ಎಳೆದಾಡಿದ್ದಾರೆ. ಈ ಮೂಲಕ ಅತ್ಯಾಚಾರಕ್ಕೂ ಯತ್ನಿಸಿದ್ದಾರೆ. ಜಮೀನು ವಿವಾದದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಮೂವರು ಆರೋಪಿಗಳ ವಿರುದ್ಧ ಕೆ.ಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *