Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವಕ-ಯುವತಿಯರೇ ಗೈಡ್‍ಗಳಾಗಿ: ಟೂರಿಸಂ ಅಭಿವೃದ್ಧಿಗೆ ಬಜೆಟ್‍ನಲ್ಲಿ ಸಿಕ್ಕಿದ್ದು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುವಕ-ಯುವತಿಯರೇ ಗೈಡ್‍ಗಳಾಗಿ: ಟೂರಿಸಂ ಅಭಿವೃದ್ಧಿಗೆ ಬಜೆಟ್‍ನಲ್ಲಿ ಸಿಕ್ಕಿದ್ದು ಏನು?

Bengaluru City

ಯುವಕ-ಯುವತಿಯರೇ ಗೈಡ್‍ಗಳಾಗಿ: ಟೂರಿಸಂ ಅಭಿವೃದ್ಧಿಗೆ ಬಜೆಟ್‍ನಲ್ಲಿ ಸಿಕ್ಕಿದ್ದು ಏನು?

Public TV
Last updated: July 5, 2018 3:21 pm
Public TV
Share
3 Min Read
BUDGET TOURISM
SHARE

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಮೂಲಕ ಉದ್ಯೋಗ ಸೃಷ್ಟಿ ಮಾಡಲು ವಿಫುಲವಾದ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಪ್ರವಾಸೋದ್ಯಮ ವ್ಯವಸ್ಥೆಯಲ್ಲಿ ಕೆಲವು ಅಂಶಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಅನೇಕ ಪ್ರವಾಸಿ ಸ್ಥಳಗಳಿಗಲ್ಲಿ ಪ್ರವಾಸಿಗರಿಗೆ ಸ್ಥಳದ ವಿವರಣೆಯನ್ನು ನೀಡುವ ಮಾರ್ಗದರ್ಶಿಗಳು ಇರುವುದಿಲ್ಲ. ಕೆಲೆವೆಡೆ ಇರುವ ಪ್ರವಾಸಿ ಮಾರ್ಗದರ್ಶಿಗಳು ಕನ್ನಡ ಹೊರತುಪಡಿಸಿ ಇತರೆ ಭಾರತೀಯ ಭಾಷೆಗಳಲ್ಲಿ ಪ್ರವಾಸಿ ಸ್ಥಳಗಳ ಬಗ್ಗೆ ವಿವರಿಸುವ ಸಾಮಥ್ರ್ಯ ಹೊಂದಿರುವುದಿಲ್ಲ. ವಿದೇಶಿ ಪ್ರವಾಸಿಗಳಿಗೆ ಅವರ ಭಾಷೆಯಲ್ಲಿ ವಿವರಗಳನ್ನು ತಿಳಿಸಲು ಆಯಾ ಭಾಷೆಗಳಲ್ಲಿ ಪಾಂಡಿತ್ಯವಿರುವ ಮಾರ್ಗದರ್ಶಿಗಳು ಲಭ್ಯವಿಲ್ಲ. ಅನೇಕ ಪ್ರವಾಸಿ ಸ್ಥಳಗಳಲ್ಲಿ ಸಂಜೆಯಾದ ನಂತರ ನೋಡುವಂತಹ ಹಾಗೂ ನಮ್ಮ ಸ್ಕೃತಿ ಸಂಸ್ಕೃತಿಯನ್ನು ಬಿಂಬಿಸುವಂತಹ ಯಾವುದೇ ಸಾಂಸ್ಕೃತಿಕ ಪ್ರದರ್ಶನಗಳು ಸಹ ಇರುವುದಿಲ್ಲ. ರಾಜ್ಯದ ಹಲವಾರು ಪ್ರವಾಸಿ ತಾಣಗಳಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಹೊಟೇಲ್ ಒದಗಿಸುವ ಅವಕಾಶವಿದೆ ಎಂದು ಭಾಷಣದಲ್ಲಿ ತಿಳಿಸಿದರು.

caption

ನಮ್ಮ ಸರ್ಕಾರವು ಈ ವರ್ಷ ಬೇಲೂರು, ಹಂಪಿ ಮತ್ತು ವಿಜಯಪುರದಲ್ಲಿ ವಿವಿಧ ಭಾಷೆಗಳಲ್ಲಿ ಪ್ರವಾಸಿ ಮಾರ್ಗದರ್ಶಿಗಳಾಗಿ ಕೆಲಸ ಮಾಡಲು ಮುಂದೆ ಬರುವ ಯುವಕ-ಯುವತಿಯರಿಗೆ ತರಬೇತಿ ನೀಡಲು ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಕ್ರಮ ಕೈಗೊಳ್ಳಲಿದೆ. ಎರಡು ವರ್ಷದ ಡಿಪ್ಲೆಮೋ ತರಬೇತಿ ನೀಡಲು ಈ ಮೂರು ಸ್ಥಳಗಳಲ್ಲಿ ಮುಂದೆ ಬರುವ ಖಾಸಗಿ ತರಬೇತಿ ಸಂಸ್ಥೆಗಳಿಗೆ ತಲಾ 60 ಲಕ್ಷ ರೂಪಾಯಿಗಳನ್ನು ಷೇರು ಬಂಡಾವಾಳದ ರೂಪದಲ್ಲಿ ನೀಡಲಾಗುವುದು.

ಪ್ರವಾಸೋದ್ಯಮಕ್ಕೆ ಸಂಬಂಧಪಟ್ಟಂತಹ ವಿಷಯಗಳಲ್ಲಿ ಎರಡು ವರ್ಷಗಳ ಡಿಪ್ಲೊಮಾವನ್ನು ಆರಂಭಿಸಲು ಉದ್ದೇಶಿಸಿದೆ. ಈ ಮೇಲೆ ಹೇಳಿದ ಮೂರು ಪ್ರವಾಸಿ ಕೇಂದ್ರಗಳಲ್ಲಿ ಪರಿಸರ ಹಾಗೂ ಆಹಾರದ ಶುದ್ಧತೆಯನ್ನು ಕಾಪಾಡುವ ಸಲುವಾಗಿ ಅಗತ್ಯ ಸರ್ಕಾರಿ ಸ್ಥಳೀಯ ಸಂಸ್ಥೆಗಳಿಗೆ ನೆರವಾಗಲು 20 ಕೋಟಿ ರೂಪಾಯಿಗಳನ್ನು ನಿಗಧಿಪಡಿಸಲಾಗಿದೆ.

500 ಕೊಠಡಿಗಳ ಸೌಲಭ್ಯವಿರುವ `3 ಸ್ಟಾರ್ ಹೋಟೆಲ್’ಗಳನ್ನು ತೆರೆಯಲು ಮುಂದೆ ಬರುವ ಖಾಸಗಿ ಕಂಪನಿಗಳಿಗೆ 3 ಕೋಟಿ ರೂಪಾಯಿಗಳ ಷೇರು ಬಂಡವಾಳವನ್ನು ಕೊಡಲಾಗುವುದು. ಸರ್ವಿಸ್ ಅಪಾರ್ಟ್‍ಮೆಂಟ್ ಗಳನ್ನು ಕಟ್ಟಲು ಮುಂದೆ ಬಂದಲ್ಲಿ ಆ ಸಂಸ್ಥೆಗಳಿಗೆ ಶೇ.30ರಷ್ಟು ಷೇರು ಬಂಡವಾಳವನ್ನು ಟೆರ್ಮ್ ಶೀಟ್ ಆಧಾರದ ಮೇಲೆ ನೀಡಲಾಗುವುದು.

barachukki and gaganachukki

`ಅಮ್ಯೂಸ್‍ಮೆಂಟ್ ಪಾರ್ಕ್’, `ಜಲಕ್ರೀಡೆ’ ರೀತಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಖಾಸಗಿ ಕಂಪನಿಗಳಿಗೆ ಶೇ. 30ರಷ್ಟು ಷೇರು ಬಂಡವಾಳ ಹೂಡಲಾಗುವುದು. ಪ್ರವಾಸಿ ಉದ್ಯಮಗಳಲ್ಲಿ ಹೂಡಿಕೆ ಮಾಡಲು ಈ ವರ್ಷ 80 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಎಲ್ಲಾ ಹೂಡಿಕೆಗಳನ್ನು 4 ವರ್ಷದ ನಂತರ ಹಿಂತೆಗೆದುಕೊಂಡು ಮತ್ತೆ ಸರ್ಕಾರಕ್ಕೆ ಜಮಾ ಮಾಡಲಾಗುತ್ತದೆ.

ಈ ಪ್ರದೇಶದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೂಡಿಕೆ ಮಾಡಲು ಮುಂದರೆ ಬರುವ ಉದ್ದಿಮೆದಾರರು ಸ್ಥಳೀಯ ಕಾನೂನುಗಳು ಹಾಗೂ ಎಲ್ಲಾ ಪ್ರಾಧಿಕಾರಿಗಳ ಅನುಮೋದನೆ ಪಡೆಯುವುದು ಅವಶ್ಯಕ. ಕರ್ನಾಟಕ ಸರ್ಕಾರವು ಈಗಾಗಲೇ (KITVEN) ಫಂಡ್ ಮ್ಯಾನೇಜರ್ ಗಳನ್ನು ಹೂಡಿಕೆಗೆ ನೆರವು ನೀಡಲು ನೇಮಕಾತಿ ಮಾಡಿರುವುದರಿಂದ ಅವುಗಳನ್ನು ಹೂಡಿಕೆದಾರರು ಉಪಯೋಗಿಸಿಕೊಳ್ಳಬಹುದು. ಹಾಗೆಯೇ ಕೆ.ಎಸ್.ಟಿ.ಡಿ.ಸಿ. ಸಂಸ್ಥೆಗೆ ಹೋಟೆಲ್ ಸೌಲಭ್ಯ ಕಲ್ಪಿಸಲು 80 ಕೋಟಿ ರೂಪಾಯಿ ನೀಡಲು ಆಯೋಜಿಸಿದೆ.

ಪ್ರಮುಖ ಹೆದ್ದಾರಿಗಳಲ್ಲಿ ಪ್ರವಾಸಿಗರು ವಿಶ್ರಾಂತಿ ಪಡೆದು ಊಟ ತಿಂಡಿ ಮಾಡಿಕೊಂಡು ಪ್ರಯಾಣ ಮುಂದುವರೆಸಲು ಅನುಕೂಲವಾಗುವ ರೀತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮೂರು ಮಾದರಿ ರಸ್ತೆ ಬದಿ ಸೌಲಭ್ಯಗಳನ್ನು (Model way side facilities) ನಿರ್ಮಿಸಲು ಉದ್ದೇಶಿದೆ.

Fun Ride Coating an Amusement Park

ಪ್ರವಾಸೋದ್ಯಮ ವಲಯದ ಆತಿಥ್ಯ ಕ್ಷೇತ್ರದಲ್ಲಿ ಉದ್ಯೋಗವಕಾಶಗಳನ್ನು ಸೃಜಿಸಲು ಕೌಶಲ್ಯಾಭಿವೃದ್ಧಿ, ಪ್ರವಾಸಿ ಮಾರ್ಗದರ್ಶಿ ತರಬೇತಿ ಕಾರ್ಯಕ್ರಮ ಹಾಗೂ ಪ್ರವಾಸಿ ಟ್ಯಾಕ್ಸಿ ಚಾಲಕರಿಗೆ `ರಿಫ್ರೆಷರ್ ಕೋರ್ಸ್’ಗಳ ಮೂಲಕ ತರಬೇತಿ ನೀಡಲು ಉದ್ದೇಶಿಸಿದೆ.

ಚಾಮರಾಜನಗರ ಜಿಲ್ಲೆಯಲ್ಲಿರುವ ಭರಚುಕ್ಕಿ ಜಲಪಾತ ಮತ್ತು ಮಂಡ್ಯ ಜಿಲ್ಲೆಯಲ್ಲಿರುವ ಗಗನಚುಕ್ಕಿ ಜಲಪಾತಗಳು ಪ್ರವಾಸಿಗರ ಆಕರ್ಷಣೀಯ ತಾಣಗಳಾಗಿರುತ್ತವೆ. ಈ ತಾಣಗಳಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುವರು. ಆದ್ದರಿಂದ ಪ್ರವಾಸಿಗರಿಗೆ ಅನುಕೂಲವಾಗುವ ಹೆಚ್ಚುವರಿ ಪ್ರವಾಸಿ ಸೌಲಭ್ಯಗಳನ್ನು ಗಗನಚುಕ್ಕಿ ಮತ್ತು ಭರಚುಕ್ಕಿ ಪ್ರದೇಶಗಳಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲು ಯೋಜನೆ ಸಿದ್ದಪಡಿಸಿದೆ.

ರಾಮನಗರ ಜಿಲ್ಲೆಯಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಮತ್ತಷ್ಟು ಸಧೃಢಗೊಳಿಸಲು ರಾಮನಗರದ ಬಳಿ `ಆಟ್ಸ್ ಅಂಡ್ ಕ್ರಾಫ್ಟ್ ವಿಲೇಜ್’ ಅನ್ನು ಮತ್ತು ಕಣ್ವ ಜಲಾಶಯದ ಪ್ರದೇಶದಲ್ಲಿ `ಚಿಲ್ಡ್ರನ್ಸ್ ವಲ್ರ್ಡ್’ ಯೋಜನೆಯನ್ನು ಖಾಸಗೀ ಸಹಭಾಗಿತ್ವದೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶೀಸಲಾಗಿದೆ.

cover10

TAGGED:bengalurubudgetPublic TVTourism Departmentಪಬ್ಲಿಕ್ ಟಿವಿಪ್ರವಾಸೋದ್ಯಮ ಇಲಾಖೆಬಜೆಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
26 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
52 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
1 hour ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?