Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನದು ಸ್ವಾತಿ ನಕ್ಷತ್ರ, ನನಗೆ ಮಾಟ ಮಾಡಿಸಿದ್ರೆ ಅವರಿಗೆ ತಿರುಗುಬಾಣವಾಗುತ್ತೆ: ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ನನ್ನದು ಸ್ವಾತಿ ನಕ್ಷತ್ರ, ನನಗೆ ಮಾಟ ಮಾಡಿಸಿದ್ರೆ ಅವರಿಗೆ ತಿರುಗುಬಾಣವಾಗುತ್ತೆ: ರೇವಣ್ಣ

Hassan

ನನ್ನದು ಸ್ವಾತಿ ನಕ್ಷತ್ರ, ನನಗೆ ಮಾಟ ಮಾಡಿಸಿದ್ರೆ ಅವರಿಗೆ ತಿರುಗುಬಾಣವಾಗುತ್ತೆ: ರೇವಣ್ಣ

Public TV
Last updated: July 8, 2018 7:26 pm
Public TV
Share
3 Min Read
REVANNA HD
SHARE

ಹಾಸನ: ನನ್ನದು ಸ್ವಾತಿ ನಕ್ಷತ್ರ. ನನಗೆ ಯಾರಾದರೂ ಮಾಟ ಮಾಡಿಸಲು ಪ್ರಯತ್ನಿಸಿದರೆ ಅವರಿಗೆ ತಿರುಗುಬಾಣವಾಗುತ್ತೆ ಎಂದು ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಸಿಗದ ಕಾರಣ ಪ್ರತಿನಿತ್ಯ ಹೊಳೆನರಸೀಪುರದಿಂದ ಬೆಂಗಳೂರಿಗೆ ಹೋಗಿ ಬರುತ್ತಿದ್ದೇನೆ. ಬಂಗಲೆ ಸಿಕ್ಕ ತಕ್ಷಣ ಅಲ್ಲಿಯೇ ವಾಸ್ತವ್ಯ ಹೂಡುತ್ತೇನೆ ಎಂದು ಹೇಳಿದರು.

ಬಿಜೆಪಿಯಿಂದ ಅಡ್ಡಿ: ಬಜೆಟ್ ಕುರಿತು ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಎರಡು-ಮೂರು ದಿನ ಕಾಯಿರಿ. ಯಾವ ಜಿಲ್ಲೆಗೆ ಎಷ್ಟು ಅನುಕೂಲವಾಗಿದೆ ಎಂಬುದನ್ನು ಹೇಳುತ್ತೇನೆ. ರಾಜ್ಯದ ರೈತರ ಸಾಲಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆಸಿದ್ದರು. ಮೋದಿಯವರು ಹಣ ನೀಡುವ ಭರವಸೆಯನ್ನೂ ನೀಡಿದ್ದರು. ಆದರೆ ರಾಜ್ಯದ ಬಿಜೆಪಿ ನಾಯಕರು ಹಣ ನೀಡದಂತೆ ಅಡ್ಡಿಪಡಿಸಿದರು ಎಂದು ಆರೋಪಿಸಿದರು. ಇದನ್ನು ಓದಿ: ಪ್ರತಿನಿತ್ಯ ಬೆಂಗಳೂರು ಟು ಹೊಳೆನರಸೀಪುರ- ಹೆಚ್‍ಡಿ ರೇವಣ್ಣ ಜರ್ನಿಯ ಹಿಂದಿದೆ ರಹಸ್ಯ!

ಸಮಸ್ಯೆ ಸರಿಯಾಗುತ್ತೆ: ವಿದ್ಯಾರ್ಥಿಗಳಿಗೆ ಉಂಟಾಗಿರುವ ಉಚಿತ ಬಸ್ ಪಾಸ್ ಸಮಸ್ಯೆಯನ್ನು ತಕ್ಷಣ ಸರಿಮಾಡಲಾಗುವುದು. ಸಿಎಂ ಕುಮಾರಸ್ವಾಮಿ ಅದನ್ನು ಕೂಡಲೇ ಸರಿಪಡಿಸಲಿದ್ದಾರೆ. ಆದರೆ ಬಿಜೆಪಿ ನಾಯಕರಿಗೆ ಹಾಸನ ಅಭಿವೃದ್ಧಿ ಬೇಡವಾಗಿದೆ. ನನಗೆ ರಾಜಕೀಯ ಮುಖ್ಯವಲ್ಲ, ಜಿಲ್ಲೆಯ ಅಭಿವೃದ್ಧಿ ಮುಖ್ಯ. ಮಾಜಿ ಸಿಎಂ ಯಡಿಯೂರಪ್ಪನವರೇ ಬಂದು ಈ ಕುರಿತು ಸರ್ವೆ ಮಾಡಲಿ ಎಂದು ಸವಾಲು ಹಾಕಿದರು.

hd revanna

ಜಾತಿ ತಾರತಮ್ಯವಿಲ್ಲ: ರೈತರ ಸಾಲಮನ್ನಾ ವಿಷಯದಲ್ಲಿ ಜಾತಿ ತಾರತಮ್ಯವಿಲ್ಲ. ಸರಿಯಾದ ಮಾಹಿತಿಯಿಲ್ಲದೆ ಕೆಲವರು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಸಾಲಮನ್ನಾದಿಂದ ಬಡಕುಟುಂಬಗಳಿಗೆ ಅನುಕೂಲವಾಗಿದೆ. ಇದರಲ್ಲಿ ಜಾತಿ ಹೆಸರು ಸೇರ್ಪಡೆ ಮಾಡುತ್ತಿರುವುದು ಸರಿಯಲ್ಲ ಎಂದರು.

ಪಕ್ಷ ಭೇದ ಮಾಡಲ್ಲ: ಹಾಸನ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷದಿಂದ ಮಳೆ ಬಾರದ ಹಾಗೂ ಮಳೆ ಹೆಚ್ಚಾಗಿರುವ ಭಾಗದ ರೈತರ ಬೆಳೆ ಕುರಿತು ಮಾಹಿತಿ ನೀಡುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿಮಾ ಯೋಜನೆ ಬಗ್ಗೆ ರೈತರಿಗೆ ಸರಿಯಾಗಿ ಮಾಹಿತಿ ನೀಡಬೇಕು ಎಂದು ಹೇಳಿದ್ದೇನೆ. ಕಳೆದ ಹತ್ತು ವರ್ಷದಿಂದ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಮಾಜಿ ಸಿಎಂ ಯಡಿಯೂರಪ್ಪನವರು ಅವರ ಪಕ್ಷದ ಶಾಸಕರೊಂದಿಗೆ ಬಂದು ಕಳೆದ ಹತ್ತು ವರ್ಷಗಳಿಂದ ಯಾವ ಯೋಜನೆಗಳು ಮಂಜೂರಾಗಿವೆ ಎಂಬುದನ್ನು ಪರಿಶೀಲಿಸಿ ಮಾತನಾಡಲಿ. ನಾವು ಅಭಿವೃದ್ಧಿಯಲ್ಲಿ ಪಕ್ಷ ಭೇದ ಮಾಡಲ್ಲ. ಹಾಸನದಲ್ಲಿ ಬಿಜೆಪಿ ಶಾಸಕರು ಕೂಡ ಆಯ್ಕೆಯಾಗಿದ್ದಾರೆ. ಅವರು ಬೇಡ ಅಂದರೆ ಯೋಜನೆಗಳನ್ನು ವಾಪಾಸ್ ಪಡೆಯುತ್ತೇವೆ ಎಂದರು.

ಏಕಾಂಗಿಯಾಗಿ ಪ್ರಮಾಣವಚನ: ಗ್ರಹ, ಕಾಲ ನೋಡಿಯೇ ಮುಂದುವರಿಯುವ ಎಚ್.ಡಿ.ರೇವಣ್ಣ ಅವರು ಸರ್ಕಾರ ಮತ್ತು ಜೆಡಿಎಸ್ ಮಹತ್ವದ ಕಾರ್ಯಕ್ರಮಗಳಿಗೆ ಸರಿಯಾದ ಸಮಯವನ್ನು ನಿಗದಿ ಮಾಡುತ್ತಾರೆ. ವಿಧಾನಸಭೆಯಲ್ಲಿ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ವೇಳೆ ತಮಗೆ ಶುಭಕಾಲದಲ್ಲೇ ಪ್ರಮಾಣವಚನ ನೀಡಲು ಸ್ಪೀಕರ್ ಬೋಪಯ್ಯ ಅವರಿಗೆ ಚೀಟಿ ನೀಡಿದ್ದರು. ಈ ವೇಳೆ ಕುಳಿತುಕೊಳ್ಳಿ ಸಂಜೆ 4 ಗಂಟೆ ಯವರೆಗೆ ಸಮಯಾವಕಾಶವಿದೆ. ನಿಗದಿತ ಪಟ್ಟಿಯಂತೆ ಪ್ರಮಾಣವಚನ ನಡೆಯುತ್ತದೆ ಎಂದು ತಿಳಿಸಿದರು. ಇದನ್ನು ಓದಿ:  ವಾಸ್ತು ಪ್ರಕಾರ ಪೂಜೆ ಮಾಡ್ತಿಲ್ಲ ಅಂತಾ ಸಚಿವ ರೇವಣ್ಣರಿಂದ ಅರ್ಚಕರಿಗೆ ಕ್ಲಾಸ್

ಈ ವೇಳೆ ರೇವಣ್ಣ ಪತ್ರಕರ್ತರ ಗ್ಯಾಲರಿಗೆ ಬಂದಾಗ ಮಾಧ್ಯಮದವರು ಉತ್ತಮ ಗಳಿಗೆಯನ್ನು ನೋಡಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರಾ ಎಂದು ಕೆಣಕಿದರು. ನನ್ನದು ಸ್ವಾತಿ ನಕ್ಷತ್ರ ಯಾವುದೇ ಗಳಿಗೆ ಇಲ್ಲ. ಯಾವಾಗ ಬೇಕಾದರೂ ಪ್ರಮಾಣವಚನ ಸ್ವೀಕರಿಸಬಹುದು ಎಂದು ಹೇಳಿ ರೇವಣ್ಣ ಹೊರ ನಡೆದಿದ್ದರು. ಆರಂಭದಲ್ಲಿ 5 ಮಂದಿ ನಂತರ 10 ಮಂದಿ ಬಳಿಕ ಇಬ್ಬರಂತೆ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ರೇವಣ್ಣ ಒಬ್ಬಂಟಿಯಾಗಿ ಮಧ್ಯಾಹ್ನ 12.50ಕ್ಕೆ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

TAGGED:hassanHD RevannaKumaraswamynarendra modiPublic TVyeddyurappaಎಚ್‍ಡಿ ರೇವಣ್ಣಕುಮಾರಸ್ವಾಮಿನರೇಂದ್ರ ಮೋದಿಪಬ್ಲಿಕ್ ಟಿವಿಯಡಿಯೂರಪ್ಪಹಾಸನ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
1 minute ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
5 minutes ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
23 minutes ago
Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
38 minutes ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
39 minutes ago
T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?