Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವರುಣನ ರೌದ್ರಾವತಾರಕ್ಕೆ ತುಂಬಿದ ಕೆರೆ-ಕುಂಟೆ – ದಕ್ಷಿಣ ಕನ್ನಡ, ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ

Public TV
Last updated: July 9, 2018 8:25 am
Public TV
Share
2 Min Read
OVER RAIN
SHARE

ಬೆಂಗಳೂರು: ದಿನೇ ದಿನೇ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಕೆರೆ, ಕುಂಟೆ ಮತ್ತು ನದಿಗಳು ತುಂಬಿ ಹರಿಯುತ್ತಿದೆ. ಇದರಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ.

ಕರಾವಳಿಯಲ್ಲಿ ಸ್ವಲ್ಪ ಬಿಡುವು ಕೊಟ್ಟ ವರುಣ ಈಗ ಉಡುಪಿ, ಮಡಿಕೇರಿ, ಚಿಕ್ಕಮಗಳೂರು ಭಾಗಗಳಲ್ಲಿ ಅಬ್ಬರಿಸುತ್ತಿದ್ದಾನೆ. ಎಲ್ಲಿ ನೋಡಿದರು ನೀರು ನಿಂತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ನಾಲ್ಕು ದಿನ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು, ಉಡುಪಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ರಾತ್ರಿಯಿಂದ ಸುರಿದ ಧಾರಾಕಾರ ಮಳೆ- ಜನ ಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ!

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಎನ್‍ಡಿಆರ್ ತಂಡ ಆಯಕಟ್ಟಿನ ಜಾಗಗಳಲ್ಲಿ ನಿಯೋಜನೆಗೊಂಡಿದೆ. ಮೂಲ್ಕಿ ಭಾಗದಲ್ಲಿ ನೆರೆಗೆ ಕಾರಣವಾಗಿದ್ದ ಶಾಂಭವಿ ನದಿಯಲ್ಲಿ ನೀರು ಇಳಿಕೆಯಾಗಿದೆ. ಆದರು ಇಲ್ಲಿನ ಕೃಷಿ ಜಮೀನು, ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ್ದ ನೀರು ಕಡಿಮೆಯಾಗಿಲ್ಲ. ಹೀಗಾಗಿ ಶಿಬರೂರು, ಕಿಲೆಂಜೂರು ಭಾಗದ ಸಂತ್ರಸ್ತರಿಗಾಗಿ ಪ್ರಾಥಮಿಕ ಶಾಲೆಗಳಲ್ಲಿ ತಾತ್ಕಾಲಿಕ ಗಂಜಿ ಕೇಂದ್ರ ಆರಂಭಿಸಲಾಗಿದೆ.

RAIN 1

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳು, ಕೆರೆಗಳು ತುಂಬಿ ಹರಿಯುತ್ತಿದ್ದು, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕೆಆರ್‍ಎಸ್ ಭರ್ತಿಗೆ ಇನ್ನು 15.45 ಅಡಿ ಬಾಕಿ ಇದ್ದು, ಒಳಹರಿವು 10,124 ಕ್ಯೂಸೆಕ್ ಇದ್ದರೆ, ಹೊರ ಹರಿವು 3,494 ಕ್ಯೂಸೆಕ್ ಇದೆ. ಬರೋಬ್ಬರಿ 15 ವರ್ಷಗಳ ಬಳಿಕ ಒಂದೇ ತಿಂಗಳಲ್ಲಿ ತುಂಗಭದ್ರಾ ಡ್ಯಾಂನಲ್ಲಿ 42 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಹಾರಂಗಿ ಜಲಾಶಯ ಭರ್ತಿಯಾಗಿದ್ದು ಒಳ ಹರಿವು ಹೆಚ್ಚಳವಾಗಿದೆ.

ನಿರಂತರ ಮಳೆಯಿಂದಾಗಿ ಪಶ್ಚಿಮ ಘಟ್ಟದಿಂದ ಹರಿದು ಬರುವ ಬಹುತೇಕ ನದಿಗಳು ತುಂಬಿಕೊಂಡಿದೆ. ಗಡಿನಾಡು ಕಾಸರಗೋಡು ಜಿಲ್ಲೆಯ ಇತಿಹಾಸ ಪ್ರಸಿದ್ಧ ಮಧೂರು ಸಿದ್ಧಿವಿನಾಯಕ ಕ್ಷೇತ್ರಕ್ಕೆ ನದಿಯ ನೆರೆ ನೀರು ನುಗ್ಗಿದೆ. ದೇವಸ್ಥಾನದ ಅಂಗಣದ ಒಳಭಾಗದಲ್ಲಿ ಭಾನುವಾರ ರಾತ್ರಿಯಿಂದ ಎರಡು ಅಡಿಯಷ್ಟು ನೀರು ನಿಂತಿತ್ತು. ಬೆಳಗ್ಗೆ ಮತ್ತು ಮಧ್ಯಾಹ್ನದ ಪೂಜೆಗಳು ನೀರಿನ ಮಧ್ಯೆಯೇ ನಡೆದಿದೆ. ಭಕ್ತರು ನೀರಿನಲ್ಲಿ ನಿಂತೇ ದೇವರ ಸೇವೆ ಪೂರೈಸಿದ್ದಾರೆ. ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ಹೊಳೆಯಲ್ಲಿ ನೀರಿನ ಪ್ರಮಾಣ ಏರಿಕೆಯಾದಾಗ ಪ್ರತಿವರ್ಷವೂ ನೆರೆ ನೀರು ದೇಗುಲಕ್ಕೆ ನುಗ್ಗುತ್ತದೆ.

RAIN 2

ಉಡುಪಿ ಜಿಲ್ಲೆಯಲ್ಲಿ ಮೂರು ದಿನ ನಿರಂತರ ಮುಂಗಾರು ಮಳೆ ಆರ್ಭಟಿಸಿದ್ದು ಸ್ವರ್ಣಾ ನದಿ ಉಕ್ಕಿ ಹರಿದಿದೆ. ನದಿಯ ರಭಸಕ್ಕೆ ಬಜೆ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ. ಕಾರ್ಕಳ, ಉಡುಪಿಯಲ್ಲಿ ಸುರಿದ ಧಾಕಾರಾರ ಮಳೆ ಪರಿಣಾಮ ಅಣೆಕಟ್ಟು ಮೇಲಿಂದ ನದಿ ತುಂಬಿ ಹರಿಯುತ್ತಿದೆ. ಸುತ್ತ ಮುತ್ತಲಿನ ತೋಟಗಳಿಗೆ ನದಿ ನೀರು ನುಗ್ಗಿದೆ. ಪುನರ್ವಸು ಮಳೆಗೆ ಉಡುಪಿ ಜಿಲ್ಲೆ ತತ್ತರಗೊಂಡಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಉಡುಪಿನಗರ, ಮಲ್ಪೆ, ಬ್ರಹ್ಮಾವರ ಮತ್ತು ಕೋಟ ಭಾಗಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿವೆ. ಕುಂದಾಪುರದ ಖಾರ್ವಿಕೆರೆಯಲ್ಲಿ ಮೂರು ಮನೆಗಳು ಕುಸಿದಿವೆ. ಕೊಲ್ಲೂರಿನಲ್ಲಿ ಮಳೆಯಿಂದಾಗಿ ಜನಜೀವನ ಅಕ್ಷರಶಃ ಅಸ್ತವ್ಯಸ್ತಗೊಂಡಿತು. ಇನ್ನು ಕಾರ್ಕಳ ತಾಲೂಕಿನಲ್ಲೂ ಅತಿ ಹೆಚ್ಚು ಮಳೆಯಾಗಿದೆ. ಕಟಪಾಡಿಯ ಕಲ್ಲಾಪುವಿನಲ್ಲಿ ರಾಷ್ಡ್ರೀಯ ಹೆದ್ದಾರಿಯಲ್ಲಿ ನೆರೆ ನೀರು ಆವರಿಸಿದೆ. ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ತುರ್ತು ಕಾಮಗಾರಿಗೆ ಆದೇಶ ನೀಡಿದ್ದಾರೆ.

TAGGED:collegedakshina kannadaDamageKodaguPublic TVrainriverschooludupiVacationಉಡುಪಿಕಾಲೇಜುಕೊಡಗುದಕ್ಷಿಣ ಕನ್ನಡನದಿಪಬ್ಲಿಕ್ ಟಿವಿಮಳೆರಜೆಶಾಲಾಹಾನಿ
Share This Article
Facebook Whatsapp Whatsapp Telegram

You Might Also Like

Bengaluru Murder
Bengaluru City

ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಭೀಕರ ಹತ್ಯೆ

Public TV
By Public TV
13 minutes ago
SATISH JARKIHOLI 1
Districts

2028ಕ್ಕೆ ದಲಿತ ಸಿಎಂ ಬಗ್ಗೆ ಗಂಭೀರ ಚರ್ಚೆ ಮಾಡೋಣ: ಸತೀಶ್ ಜಾರಕಿಹೊಳಿ

Public TV
By Public TV
21 minutes ago
Missiles launched from Iran towards Israel
Latest

ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

Public TV
By Public TV
49 minutes ago
Chikkaballapur Accident
Chikkaballapur

ಚಿಕ್ಕಬಳ್ಳಾಪುರ | ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

Public TV
By Public TV
52 minutes ago
Ahmedabad Air India Plane Crash Vijay Rupani
Latest

ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ

Public TV
By Public TV
1 hour ago
Shringeri Gudda Kusitha
Chikkamagaluru

ಶೃಂಗೇರಿಯಲ್ಲಿ ವರುಣಾರ್ಭಟ – ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?