ರಾಯಚೂರು: ನಗರದಲ್ಲಿ ಸಿಸಿ ಕ್ಯಾಮೆರಾದ ವೈರ್ ಕತ್ತರಿಸಿ 30 ಲಕ್ಷ ರೂ. ಮೌಲ್ಯದ ಸಿಗರೇಟ್ ಕಳ್ಳತನ ಮಾಡಲಾಗಿದೆ.
ನಗರದ ಯರಗೇರಾ ಲೇಔಟ್ನ ಜಿ.ಅಬ್ದುಲ್ ಅಂಡ್ ಸನ್ಸ್ ಐಟಿಸಿ ಏಜೆನ್ಸಿಯ ಗೋದಾಮುನಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಲಕ್ಷ 50 ಸಾವಿರ ರೂಪಾಯಿ ನಗದು ಹಾಗೂ ಅಂದಾಜು 30 ಲಕ್ಷ ರೂಪಾಯಿ ಮೌಲ್ಯದ ಸಿಗರೇಟನ್ನ ಕಳ್ಳರು ಕದ್ದು ಪರಾರಿಯಾಗಿದ್ದಾರೆ.
ಖದೀಮರು ಗುರುತು ಪತ್ತೆಯಾಗ ಬಾರದು ಎಂದು ಶಾಪ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ವೈರನ್ನು ಕತ್ತರಿಸಿ ಕಳ್ಳತನ ಮಾಡಿದ್ದಾರೆ. ಶೆಟರ್ ಮುರಿದು ಗೋದಾಮಿನಲ್ಲಿದ್ದ ಸಿಗರೇಟ್ ಪ್ಯಾಕ್ ಗಳನ್ನ ರಾತ್ರೋರಾತ್ರಿ ಕದ್ದು ಸಾಗಿಸಿದ್ದಾರೆ.
ಈ ಘಟನೆ ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.