ಮೈಮೇಲೆ ಕೆಸರೆರಚಿಕೊಂಡು ಹುಬ್ಬಳ್ಳಿಯವರಿಂದ ವಿನೂತನ ಪ್ರತಿಭಟನೆ

Public TV
1 Min Read
HBL HDK collage

ಹುಬ್ಬಳ್ಳಿ: ರಸ್ತೆ ದುರಸ್ಥಿಗೆ ಆಗ್ರಹಿಸಿ ಮೈ ಮೇಲೆ ರಸ್ತೆಯ ಮೇಲಿನ ಕೆಸರೆಚಿಕೊಂಡು ಸ್ಥಳೀಯರು ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ನಡೆದಿದೆ.

ಸಿಎಂ ಕುಮಾರಸ್ವಾಮಿಯವರ ಹುಬ್ಬಳ್ಳಿ ನಿವಾಸಕ್ಕೆ ಸಂರ್ಪಕ ಕಲ್ಪಿಸುವ ರಸ್ತೆ ಇದಾಗಿದ್ದು, ಈ ರಸ್ತೆ ಈಗ ಸಂಪೂರ್ಣ ಹದಗೆಟ್ಟು ಹೋಗಿದೆ. ನಿರಂತರವಾಗಿ ಸುರಿಯುವ ಮಳೆಯಿಂದ ರಸ್ತೆಯಲ್ಲಿ ಗುಂಡಿಬಿದ್ದು ನೀರು ತುಂಬಿಕೊಂಡು ನಡೆದಾಡಲು ಸಾಧ್ಯವಾಹದಂತಹ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಹೀಗಾಗಿ ರಸ್ತೆ ಸರಿಪಡಿಸುವಂತೆ ಕಳೆದ ಹಲವು ದಿನಗಳಿಂದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಅಧಿಕಾರಿಗಳು ಇತ್ತ ಗಮನ ಕೂಡ ಹರಿಸಿಲ್ಲ. ಇದರಿಂದ ಆಕ್ರೋಶಗೊಂಡ ಸ್ಥಳಿಯರು ರಸ್ತೆಯಲ್ಲಿನ ಕೆಸರನ್ನು ಮೈಮೇಲೆ ಸುರಿದುಕೊಂಡು ಸಿಎಂ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದರು.

HBL HDK PROTEST

ಬೈರಿದೇವರಕೊಪ್ಪ ಪ್ರದೇಶವು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ಹೀಗಾಗಿ ಅವರಿಗೂ ಕೂಡ ರಸ್ತೆ ಸರಿ ಪಡಿಸುವಂತೆ ಮನವಿ ಮಾಡಿಕೊಂಡಿದ್ದೇವು. ಅವರು ಕೂಡ ಇತ್ತ ಕಣ್ಣೆತ್ತಿ ನೋಡಿಲ್ಲ ಎಂದು ಸ್ಥಳೀಯರು ಕಿಡಿಕಾರಿದರು. ಇಬ್ಬರು ಘಟಾನುಗಟಿ ನಾಯಕರಿದ್ದರು ಈ ರಸ್ತೆ ಕೊಳಚೆ ಎಂತಾಗಿದೆ ಎಂದು ಸ್ಥಳೀಯರೇ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *