Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಗ್ರಹಣ ಯಾರಿಗೆ ಹಿಡಿಯುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಗ್ರಹಣ ಯಾರಿಗೆ ಹಿಡಿಯುತ್ತೆ?

Bengaluru City

ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಗ್ರಹಣ ಯಾರಿಗೆ ಹಿಡಿಯುತ್ತೆ?

Public TV
Last updated: July 26, 2018 8:11 pm
Public TV
Share
3 Min Read
chnadra grahana politics
SHARE

– ಮಿಡ್ ನೈಟ್ ಗ್ರಹಣ ಬುಡಮೇಲಾಗುತ್ತಾ ರಾಜ್ಯ ರಾಜಕಾರಣ!
– ರಾಜಕೀಯದಂಗಳದಲ್ಲೀಗ ‘ಚಂದ್ರ ಗ್ರಹಣ’ದ್ದೇ ಲೆಕ್ಕಾಚಾರ

ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸುವ ವಿಸ್ಮಯ ಖಗೋಳ ತಜ್ಞರ ಪಾಲಿಗೆ ಸೊಬಗು. ನೆರಳು ಬೆಳಕಿನ ಚಮತ್ಕಾರ. ಆದರೆ ಜನಸಾಮಾನ್ಯರ ಪಾಲಿಗೆ ಗ್ರಹಣ ‘ಗ್ರಹಚಾರ’ ಎನ್ನುವುದು ಜ್ಯೋತಿಷಿಗಳು ಹೇಳುವ ಭವಿಷ್ಯವಾಣಿ. ಅದರಲ್ಲೂ ಈ ಬಾರಿಯ ದೀರ್ಘ ಕಾಲದ ಪೌರ್ಣಿಮೆಯ ಗ್ರಹಣ ನಾನಾ ಪರಿಣಾಮ, ಗಂಡಾಂತರ ತಂದೊಡ್ಡಲಿದೆ ಎಂದಿರುವ ಜೋತಿಷಿಗಳ ಭವಿಷ್ಯ ಜನರನ್ನು ನಡುಗಿಸಿದೆ. ಕೇತುಗ್ರಸ್ಥ ಚಂದ್ರಗ್ರಹಣವಾದ ಕಾರಣ ರವಿಯ ಬೆಳಕು ಬೀಳದೇ ಚಂದ್ರ ದುರ್ಬಲನಾಗುತ್ತಾನೆ. ಅಮಾವಾಸ್ಯೆಯ ನಂತ್ರ ಪೌರ್ಣಮಿಯಲ್ಲಿ ಕಂಗೊಳಿಸುವ ಚಂದ್ರ ಮಂಕಾಗಾಲಿದ್ದಾನೆ. ಬೆರಗಿನಿಂದ ಪ್ರಕಾಶಮಾನವಾಗುವ ಚಂದ್ರನ ಶಕ್ತಿಯನ್ನು ಕೇತು ಮಂಕಾಗಿಸುವಾಗ, ಇದರ ಪರಿಣಾಮ ಎಲ್ಲರ ಮೇಲಾಗಲಿದೆಯಂತೆ. ಇದಕ್ಕಿಂತ ಮುಖ್ಯವಾಗಿ ಈ ಬಾರಿಯ ಗ್ರಹಣದ ವಕ್ರದೃಷ್ಟಿ ರಾಜ್ಯ ರಾಜಕೀಯದ ಮೇಲಾಗಲಿದೆ ಎಂಬ ಎಂಬ ಜ್ಯೋತಿಷಿಗಳ ಭವಿಷ್ಯವಾಣಿಯಿಂದ ರಾಜಕೀಯ ಮುಖಂಡರು ನಡುಗಿ ಹೋಗಿದ್ದಾರೆ. ಹೀಗಾಗಿ ಸದ್ಯ ರಾಜಕೀಯದಂಗಳದಲ್ಲೀಗ ಗ್ರಹಣ ಟೆನ್ಶನ್ ಶುರುವಾಗಿದೆ. ನಾವ್ಯಾವುದನ್ನೂ ನಂಬಲ್ಲ ಅಂತಿರೋರೆಲ್ಲಾ ಒಳಗೊಳಗೇ ಎಲ್ಲಾ ಲೆಕ್ಕಾಚಾರ ಹಾಕಲು ಶುರು ಮಾಡಿ, ನಮಗೆ ಕಂಟಕವೇನೂ ಆಗದಿರಲಿ ಎಂದು ದೇವರ ಮೊರೆ ಹೋಗಲು ಸಜ್ಜಾಗುತ್ತಿದ್ದಾರೆ.

ಜುಲೈ 27ರ ಗ್ರಹಣದಿಂದ ರಾಜ್ಯ ರಾಜಕೀಯದಲ್ಲಿ ಏನೆಲ್ಲ ಬದಲಾವಣೆಯಾಗಲಿದೆ, ಚಂದ್ರನ ಕರಿಛಾಯೆ ಯಾರ ಮೇಲೆ ಬೀಳಲಿದೆ ಎನ್ನುವುದೇ ಈಗ ಸದ್ಯದ ಮಾತು. ವಿಚಿತ್ರ ಅಂದ್ರೆ ಈ ಬಾರಿಯ ಚಂದ್ರಗ್ರಹಣ ಕರ್ನಾಟಕ ರಾಜಕೀಯಕ್ಕೂ ತಟ್ಟುತ್ತಾ ಎಂಬ ಕುತೂಹಲವಿದೆ. ಚಂದ್ರಗ್ರಹಣದ ವಕ್ರದೃಷ್ಟಿ ಇಬ್ಬರು ಶತ್ರುಗಳಲ್ಲಿ ಒಬ್ಬರಿಗೆ ದುರದೃಷ್ಟವಾದ್ರೇ, ಇನ್ನೊಬ್ಬರಿಗೆ ಭಾಗ್ಯದ ಬಾಗಿಲು ತೆರೆಯಲಿದೆ ಎನ್ನುವುದು ರಾಜ್ಯದ ಜ್ಯೋತಿಷಿಗಳ ಲೆಕ್ಕಾಚಾರ.

HDK KKESHI

ಮೈತ್ರಿ ಸರ್ಕಾರಕ್ಕೇನಾಗುತ್ತೆ?: ಮೊದಲೇ ತೊಯ್ದಾಟದಲ್ಲಿ ಸಿಲುಕಿದಂತಿರುವ ಸಮ್ಮಿಶ್ರ ಸರ್ಕಾರಕ್ಕೆ ಈ ಬಾರಿ ಗ್ರಹಣ ಗ್ರಹಚಾರದ ಎಫೆಕ್ಟ್ ಜೋರಾಗಿ ತಟ್ಟಲಿದೆಯಂತೆ. ಗಟ್ಟಿ ಭಾಂದವ್ಯವನ್ನೇ ಕೆಡವಿ ಹಾಕುವ ಕ್ಷುದ್ರ ಗ್ರಹಣಕ್ಕೆ ಡೋಲಾಯಮಾನ ಸ್ಥಿತಿಯಲ್ಲಿರುವ ಸರ್ಕಾರ ಯಾವ ಲೆಕ್ಕ, ಸೂರ್ಯ ಚಂದ್ರನನ್ನೇ ಬೆಂಬಿಡದೇ ಕಾಡುವ ಕೇತು ಅಧಿಕಾರದಲ್ಲಿರುವವರನ್ನು ಬೆಂಬಿಡದೇ ಕಾಡಲಿದ್ದಾನೆ ಅನ್ನೋದು ಜ್ಯೋತಿಷಿಗಳ ಮಾತು. ಅದೆಷ್ಟೇ ಒಗ್ಗಟ್ಟಿನಲ್ಲಿ ಹೋದರೂ ಗ್ರಹಣದ ಎಫೆಕ್ಟ್ ನಿಂದ ಜಗಳ, ಕಿರಿಕಿರಿ ನಿರಂತರವಾಗಿರುತ್ತೆ. ಆಡಳಿತ ಪಕ್ಷದಲ್ಲಿ ಸಮನ್ವಯ ಅನ್ನೋದು ಸಾಧ್ಯವಾಗೋದೆ ಇಲ್ವಂತೆ. ಒಳಜಗಳ, ಮಾನಸಿಕ ತೊಳಲಾಟ, ಕ್ಷೋಭೆಗಳಿಂದ ಸರ್ಕಾರದ ಬುಡ ಅಲುಗಾಡಲಿದೆ ಎನ್ನುವುದು ಬೆಂಗಳೂರಿನ ಗವಿಗಂಗಾಧರ ಕ್ಷೇತ್ರದ ಅರ್ಚಕರು ಹಾಗೂ ಖ್ಯಾತ ಜ್ಯೋತಿಷಿಗಳಾದ ಸೋಮಸುಂದರ ದೀಕ್ಷಿತ್ ಅಭಿಪ್ರಾಯ.

BSY 1

ಚಂದ್ರಗ್ರಹಣಕ್ಕೆ ಬೆದರಿದ ರಾಜಾಹುಲಿ!: ಚಂದ್ರಗ್ರಹಣದ ಭೀತಿಗೆ ಬೆದರಿರುವ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗವಾಗಿ ಚಂದ್ರಗ್ರಹಣದ ಸಂದರ್ಭದಲ್ಲಿ ಯಾವುದೇ ಶುಭಕಾರ್ಯಗಳನ್ನು ಮಾಡಬೇಡಿ ಅಂತಾ ಬಿಜೆಪಿ ಕಾರ್ಯಕರ್ತರಿಗೆ ಸೂಚನೆಯನ್ನು ಬಹಿರಂಗವಾಗಿಯೇ ಕೊಟ್ಟಿದ್ದಾರೆ. ಇದರ ಜೊತೆಗೆ ಗ್ರಹಣದಿಂದ ಜನರನ್ನು ಪಾರು ಮಾಡಲು ಪೂಜೆ ಪ್ರಾರ್ಥನೆಗಳನ್ನು ಮಾಡಿ ಅಂತಾ ಯಡಿಯೂರಪ್ಪ ಕರೆ ನೀಡಿದ್ದಾರೆ. ಅಷ್ಟೇ ಯಾಕೆ ಗ್ರಹಣದ ಭೀತಿಗೆ ರಾಜ್ಯ ಪ್ರವಾಸವನ್ನು ಕೂಡ ಮೊಟಕುಗೊಳಿಸಿರುವ ಯಡಿಯೂರಪ್ಪ, ಗ್ರಹಣಕ್ಕೆ ತಾನೆಷ್ಟು ಬೆದರಿದ್ದೇನೆ ಅನ್ನೋದನ್ನು ತೋರಿಸಿದ್ದಾರೆ. ಗ್ರಹಣದ ಬಳಿಕವಷ್ಟೇ ರಾಜ್ಯಪ್ರವಾಸ ನಡೆಸೋದಾಗಿ ಬಿಎಸ್‍ವೈ ಹೇಳಿದ್ದು ಈಗಾಗಲೇ ಗ್ರಹಣ ದೋಷ ನಿವಾರಣೆಗಾಗಿ ದೇವರ ಮೊರೆ ಹೋಗಿದ್ದಾರೆ.

 

ದೇವೇಗೌಡರ ಕುಟುಂಬದಿಂದ ಪೂಜೆ: ದೇವೇಗೌಡ್ರ ಕುಟುಂಬಕ್ಕಂತೂ ಮೊದಲೇ ದೇವರು, ಜ್ಯೋತಿಷ್ಯ ಅಂತಾ ನಂಬಿಕೆ ಜಾಸ್ತಿ. ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಯ ಬಗ್ಗೆ ಭವಿಷ್ಯವಾಣಿಗಳು ಕೇಳಿ ಬರುತ್ತಿದ್ದಂತೆ ದೇವೇಗೌಡರ ಕುಟುಂಬ ಗ್ರಹಣ ದೋಷ ನಿವಾರಣೆಗಾಗಿ ಮಹಾ ಪೂಜೆ ನಡೆಸಲು ನಿರ್ಧರಿಸಿದ್ದಾರೆ. ಸುದೀರ್ಘ ಗ್ರಹಣ ಮುಗಿದ ಬೆಳಗಿನ ಜಾವ ಗ್ರಹಣ ದೋಷ ನಿವಾರಣೆಗಾಗಿ ಗವಿ ಗಂಗಾಧರ ದೇಗುಲದಲ್ಲಿ ಶಿವಾರಾಧನೆ, ಹೋಮ, ಯಜ್ಞ ಯಾಗಗಳನ್ನು ನಡೆಸಲಿದ್ದಾರೆ ಎಂದು ಸೋಮಸುಂದರ ದೀಕ್ಷಿತ್ ಹೇಳಿದ್ದಾರೆ.

CKM HDD 4

ಪ್ರಧಾನಿ ಮೋದಿಗೂ ಕಾಡಲಿದ್ಯಾ ಗ್ರಹಣ ಕಂಟಕ!: ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲದೇ ಪ್ರಧಾನಿ ಮೋದಿಗೂ ಗ್ರಹಣ ಕಂಟಕದ ಕರಿನೆರಳ ಛಾಯೆ ಬೀಳಲಿದೆ ಎಂದು ಮಗದೊಂದು ಬೆಚ್ಚಿಬೀಳಿಸುವ ಭವಿಷ್ಯವನ್ನು ಜ್ಯೋತಿಷಿಗಳು ನುಡಿದಿದ್ದಾರೆ. ಈ ಹಿಂದೆ ರಕ್ತ ಚಂದ್ರ ಗ್ರಹಣದ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಹಿಂಸಾಚಾರ ಹೆಚ್ಚಾಗಿ ಕೇಂದ್ರಕ್ಕೆ ತಲೆನೋವಾಗಿತ್ತು. ಈ ಬಾರಿಯೂ ಇಂತಹ ಅನಿರೀಕ್ಷಿತ ತೊಂದರೆಗಳು ಎದುರಾಗಲಿದೆಯಂತೆ. ದೇಶಕ್ಕೆ ಜಲಪ್ರಳಯ, ಕಂಟಕ ಕಾಡಲಿದ್ದು ಸರ್ಕಾರದ ನೆಮ್ಮದಿ ಕಸಿದುಕೊಳ್ಳಲಿದೆ. ಮುಂಬರುವ ಲೋಕಸಭಾ ಚುನಾವಣಾ ಕದನದ ದಿಕ್ಕನ್ನೇ ಬದಲಿಸುತ್ತಾ ಅನ್ನೋ ವಿಶ್ಲೇಷಣೆ ಕೂಡಿ ಕೇಳಿ ಬರುತ್ತಿದೆ.

ರಾಜಕೀಯ ಅಖಾಡದ ಶತ್ರುಗಳಿಗೆ ಲಾಭ – ನಷ್ಟದ ಗ್ರಹಣ!: ಇವೆಲ್ಲದರ ಮಧ್ಯೆ ಕುತೂಹಲ ಮೂಡಿಸಿದ್ದು ಅಂದ್ರೆ ರಾಜಕೀಯ ಅಖಾಡದ ಇಬ್ಬರೂ ಘಟಾನುಘಟಿಗಳಲ್ಲಿ ಒಬ್ಬರಿಗೆ ಗ್ರಹಣ ಅದೃಷ್ಟದ ಬಾಗಿಲು ತೆರೆಯುತ್ತದಂತೆ. ಇನ್ನೊಬ್ಬರಿಗೆ ಎರಡು ದೋಣಿಯ ಪಯಣದ ಅಸಲಿ ಸಂಕಷ್ಟ ಶುರುವಾಗಲಿದೆ ಅನ್ನೋ ಭವಿಷ್ಯಗಳು ಕೇಳಿದೆ. ಯಡಿಯೂರಪ್ಪನವರದ್ದು ವೃಶ್ಚಿಕ ರಾಶಿ. ಈ ರಾಶಿಯವರಿಗೆ ಗ್ರಹಣದ ನಂತರ ಅದೃಷ್ಟ ಖುಲಾಯಿಸಲಿದೆ ಎಂಬ ಲೆಕ್ಕಾಚಾರವನ್ನು ಕೆಲ ಜ್ಯೋತಿಷಿಗಳು ಹಾಕಿದ್ದಾರೆ. ಇದು ರಾಜಕೀಯದಲ್ಲಿ ಹೊಸ ಟ್ವಿಸ್ಟ್ ಮೂಡಿಸಬಹುದಾ ಎಂಬ ಅನುಮಾನವೂ ಇದೆ. ಅದೃಷ್ಟ – ನತದೃಷ್ಟ, ಲಾಭ ನಷ್ಟ, ಹೀಗೆ ಜುಲೈ 27 ರ ಚಂದಮಾಮನ ಗ್ರಹಣದ ಒಳಿತು ಕೆಡುಕುಗಳ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ.

pm modi navratri

TAGGED:Astrology PredictionBS YaddyurappaChandra GrahanadevegowdaLunar eclipsemodiಚಂದ್ರಗ್ರಹಣಜ್ಯೋತಿಷ್ಯದೇವೇಗೌಡಭವಿಷ್ಯಮೋದಿಯಡಿಯೂರಪ್ಪರಾಜ್ಯ ರಾಜಕೀಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
6 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
25 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
56 minutes ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?