ಖಾಸಗಿ ಆಸ್ಪತ್ರೆಗಳು ಬಂದ್-ಆಸ್ಪತ್ರೆಯಿಂದ ಆಸ್ಪತ್ರೆಗೆ ರೋಗಿಗಳ ಅಲೆದಾಟ!

Public TV
1 Min Read
BAND BGK

ಬಾಗಲಕೋಟೆ: ಜಿಲ್ಲೆಯ ಎಲ್ಲೆಡೆ ಖಾಸಗಿ ಆಸ್ಪತ್ರೆಗಳ ಬಂದ್ ಹಿನ್ನೆಲೆ ಕೆಲವು ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ.

ಹಾವು ಕಡಿತಕ್ಕೆ ಒಳಗಾಗಿ ಸಿದ್ದಪ್ಪ ತುಪ್ಪದ ಎಂಬ ವ್ಯಕ್ತಿ ಸೂಕ್ತವಾದ ಚಿಕಿತ್ಸೆ ದೊರೆಯದ ಕಾರಣ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಸಿದ್ದಪ್ಪ ಎಂಬವರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿ. ಹಾವಿನ ಕಡಿತಕ್ಕೆ ಒಳಗಾಗಿ, ಅವರನ್ನು ಸ್ಥಳೀಯ ಕಲ್ಲೂರು ಗ್ರಾಮ ಹಾಗೂ ರಾಮದುರ್ಗದಲ್ಲಿ ದಾಖಲಿಸಿದ್ದರು. ಆದರೆ ಅಲ್ಲಿ ಸರಿಯಾದ ಚಿಕಿತ್ಸೆ ದೊರೆಯದ ಕಾರಣ ಖಾಸಗಿ ಆಸ್ಪತ್ರೆಗೆ ಸಾಗಿಸುವಂತೆ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಸೂಚಿಸಿದರು.

BAND 2

ಹಾಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಾಥಮಿಕ ಚಿಕಿತ್ಸೆ ಕೊಟ್ಟರೂ ವೆಂಟಿಲೇಟರ್ ಸೌಲಭ್ಯವಿಲ್ಲದೇ ರೋಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ರೋಗಿಯ ಸಂಬಂಧಿಕರು ಆತಂಕದಲ್ಲಿದ್ದಾರೆ.

ಪ್ರತಿಭಟನೆ ಏಕೆ:
ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಮಸೂದೆಯನ್ನು ಜಾರಿಗೆ ತರದಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘವು ಬಂದ್‍ಗೆ ಕರೆ ನೀಡಿದೆ.

ಏನಿದು ಎನ್‍ಎಂಸಿ ಮಸೂದೆ?:
ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರ ಹಾಗೂ ವೈದ್ಯ ವೃತ್ತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ‘ರಾಷ್ಟ್ರೀಯ ವೈದ್ಯಕೀಯ ಆಯೋಗ-2017’ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈಗಿರುವ ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ವಿಸರ್ಜಿಸಿ ಅದರ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವುದು ಈ ವಿಧೇಯಕದ ಪ್ರಮುಖ ಉದ್ದೇಶವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *