Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಇಂದು 4 ಗಂಟೆಗೆ ಮಹದಾಯಿ ತೀರ್ಪು: ಕರ್ನಾಟಕ ಮತ್ತು ಗೋವಾದ ವಾದ ಏನಿತ್ತು?

Public TV
Last updated: August 14, 2018 1:38 pm
Public TV
Share
5 Min Read
mahadayi 1
SHARE

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಧಿಕರಣದ ಐತೀರ್ಪು ಪ್ರಕಟವಾಗಲಿದೆ.

ಆಗಸ್ಟ್ 20ಕ್ಕೆ ನ್ಯಾಯಾಧಿಕರಣದ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ನೇತೃತ್ವದ ತ್ರಿಸದಸ್ಯಪೀಠ ತೀರ್ಪು ಪ್ರಕಟಿಸಲಿದೆ. ಅಂತಿಮ ಹಂತದ ವಾದ ಈ ವರ್ಷದ ಫೆ.21ಕ್ಕೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಲಾಗಿತ್ತು.

ಮಹದಾಯಿ ವಿವಾದವನ್ನು ಕಳೆದ ಐದು ವರ್ಷದಲ್ಲಿ 105 ದಿನಗಳು ಒಟ್ಟು ವಿಚಾರಣೆ ನಡೆದಿದ್ದು, ಹನ್ನೊಂದು ದಿನಗಳ ಕಾಲ ಅಂತಿಮ ವಿಚಾರಣೆ ನಡೆಸಲಾಗಿದೆ. ಕರ್ನಾಟಕ ಪರ ವಕೀಲ ಅಶೋಕ್ ದೇಸಾಯಿ, ಮೋಹನ್ ಕಾತರಕಿ, ಇಂದಿರಾ ಜೈಸಿಂಗ್ ಹಾಗೂ ಗೋವಾ ಪರ ಆತ್ಮರಾಮ್ ನಾಡಕರ್ಣಿ ವಾದ ಮಂಡಿಸಿದ್ದಾರೆ. ಕಾವೇರಿ ನದಿ ವಿವಾದದಂತೆ ಮಹದಾಯಿ ವಿಚಾರದಲ್ಲೂ ನ್ಯಾಯಸಿಗುವ ವಿಶ್ವಾಸವನ್ನು ರಾಜ್ಯದ ಪರ ವಕೀಲರು ವ್ಯಕ್ತಪಡಿಸಿದ್ದಾರೆ.

Mahadayi River 3

ಮಹದಾಯಿ ಅಂತಿಮ ವಿಚಾರಣೆ ಮುಕ್ತಾಯ ಬಳಿಕ ಕರ್ನಾಟಕ ಪರ ಹಿರಿಯ ವಕೀಲ ಮೋಹನ್ ಕಾತರಕಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಕಳೆದ ಆರು ವರ್ಷದಲ್ಲಿ 105 ದಿನಗಳ ಕಾಲ ವಾದ ಮಂಡಿಸಲಾಗಿದೆ. ಅಗಸ್ಟ್ 20 ರೊಳಗೆ ತೀರ್ಪು ನಿರೀಕ್ಷೆ ಮಾಡಬಹುದು. ನಮ್ಮ ಪರವಾಗಿ ಉತ್ತಮ ತೀರ್ಪು ಬರುವ ವಿಶ್ವಾಸವಿದೆ. ಕರ್ನಾಟಕ 14.98 ಟಿಎಂಸಿ ನೀರು ನ್ಯಾಯಾಧಿಕರಣ ಮುಂದೆ ಕೇಳಿದೆ. 7 ಟಿಎಂಸಿ ಹೆಚ್ಚುವರಿ ನೀರಿಗಾಗಿ ಮನವಿ ಮಾಡಿದೆ. ಗೋವಾ 172 ಟಿಎಂಸಿ ನೀರನ್ನು ಕೇಳಿದ್ದು, ಮಹಾರಾಷ್ಟ್ರ 6.34 ಟಿಎಂಸಿ ಗೆ ಬೇಡಿಕೆ ಇಟ್ಟಿದೆ ಎಂದು ಹೇಳಿದ್ದರು.

ಮಹದಾಯಿ ಅಚ್ಚುಕಟ್ಟು ನಲ್ಲಿ ಕೇಂದ್ರದ ಜಲ ಆಯೋಗ ಮಾಹಿತಿ ಪ್ರಕಾರ ಒಟ್ಟು 199.6 ಟಿಎಂಸಿ ನೀರು ಲಭ್ಯವಾಗಲಿದೆ. ಆದರೆ ಗೋವಾ ನೀಡುತ್ತಿರುವ ಮಾಹಿತಿ ಪ್ರಕಾರ 113 ಟಿಎಂಸಿ ನೀರು ಲಭ್ಯ ಎಂಬ ಮಾಹಿತಿ ನೀಡಿದೆ. ನ್ಯಾಯಾಧಿಕರಣ ಮೊದಲು ಒಟ್ಟು ಮಹದಾಯಿ ಅಚ್ಚುಕಟ್ಟಿನ ನೀರಿನ ಮಾಹಿತಿ ನಿರ್ಧರಿಸಲಿದ್ದಾರೆ. ಬಳಿಕ ರಾಜ್ಯವಾರು ವಿಂಗಡನೆ ಮಾಡಲಿದ್ದಾರೆ. ಕರ್ನಾಟಕ ಕುಡಿಯುವ ನೀರಾವರಿ ಯೋಜನೆ ನಿರ್ಮಾಣದಿಂದ ಗೋವಾಕ್ಕೆ ದಕ್ಕೆ ಉಂಟಾಗುವ ಪರಿಶೀಲನೆ ನಡೆಸಲಾಗುತ್ತೆ. ಈ ಆಧಾರದ ಮೇಲೆ ನೀರು ಹಂಚಿಕೆ ಮಾಡಲಾಗುತ್ತದೆ. ಪರಿಣಿತ ತಜ್ಞರು ಮತ್ತು ವೈಜ್ಞಾನಿಕ ಅಂಶಗಳನ್ನು ಆಧರಿಸಿ ನ್ಯಾಯಾಧಿಕರಣ ಮುಂದೆ ವಾದ ಮಂಡಿಸಿದ್ದೇವೆ ಎಂದು ತಿಳಿಸಿದ್ದರು.

Mahadayi River 5

ಕರ್ನಾಟಕಕ ಪರ ವಾದ ಏನಾಗಿತ್ತು?
ಹುಬ್ಬಳ್ಳಿ- ಧಾರವಾಡಕ್ಕೆ ಕುಡಿಯುವ ನೀರಿಗೆ ಸೂಕ್ತ ಪರ್ಯಾಯವಿಲ್ಲ. ಕೇಂದ್ರ ಜಲ ಆಯೋಗದ ಪ್ರಕಾರ ಕುಡಿಯುವ ನೀರಿಗೆ ಅತಿ ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕಕ್ಕೆ ತನ್ನ ಪಾಲಿನ 14.98 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ನೀಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಹುಬ್ಬಳ್ಳಿ ಧಾರವಾಡಕ್ಕೆ ಕುಡಿಯಲು 7.56 ಟಿಎಂಸಿ ನೀರು ಬೇಕು. ಮಹದಾಯಿಯ ನೀರು ಹು-ಧಾ ಕ್ಕೆ ಕುಡಿಯಲು ಸಿಕ್ಕರೆ ಮಲಪ್ರಭದ ಮೇಲಿನ ಒತ್ತಡ ಕಡಿಮೆ ಆಗಿ ಅದರ ನೀರನ್ನು ನೀರಾವರಿಗೆ ಬಳಸಬಹುದು. ಗೋವಾ ಸರ್ಕಾರ 113 ಟಿಎಂಸಿ ನೀರು ಮಹದಾಯಿಯಲ್ಲಿದೆ ಎನ್ನುತ್ತದೆ. ಆದರೆ 173 ಟಿಎಂಸಿ ಮಹದಾಯಿ ನೀರಿಗೆ ಬೇಡಿಕೆ ಸಲ್ಲಿಸುತ್ತದೆ. ಗೋವಾ ಮಂಡಿಸಿರುವ ವಾದ ಸರಿಯಲ್ಲ ಮತ್ತು ತಪ್ಪು ದಾರಿಗೆಳೆಯುತ್ತಿದೆ. ಅಂತಾರಾಜ್ಯ ನದಿಗಳಲ್ಲಿ ನೀರಿನ ಬಳಕೆಗೆ ಸಂಬಂಧಿಸಿದಂತೆ ಯಾವುದೇ ರಾಜ್ಯವು ಇನ್ನೊಂದು ರಾಜ್ಯದ ಅನುಮತಿ ಪಡೆಯಬೇಕು ಎಂಬುದಿಲ್ಲ. ಆದರೆ ಮತ್ತೊಂದು ರಾಜ್ಯವು ಯೋಜನೆಯಿಂದ ತನಗೆ ಹಾನಿ ಆಗುತ್ತದೆ ಎಂದರೆ ಮಾತ್ರ ದೂರು ಸಲ್ಲಿಸಬಹುದು ಎಂದು ವಾದ ಮಂಡಿಸಿತ್ತು.

ಗೋವಾ ವಾದ ಏನು?
ಕಳಸಾ ಬಂಡೂರಿ ಯೋಜನೆಯು ಕುಡಿಯುವ ನೀರಿನ ಯೋಜನೆಯಲ್ಲ. ಕರ್ನಾಟಕ ಸರ್ಕಾರ ನೀರಾವರಿಗಾಗಿ ಮಾಡಿರುವ ಯೋಜನೆ. ಮಲಪ್ರಭಾವು ಮಹದಾಯಿಗಿಂತ ಮೂರು ಪಟ್ಟು ದೊಡ್ಡ ನದಿ. ಆ ನದಿಯಲ್ಲಿ ಕರ್ನಾಟಕ ಕಟ್ಟಿರುವ ಅಣೆಕಟ್ಟಿನಲ್ಲಿ ನೀರು ಭರ್ತಿ ಆಗದ ಹಿನ್ನೆಲೆಯಲ್ಲಿ ಮಹದಾಯಿಯನ್ನು ತಿರುಗಿಸಲು ಕರ್ನಾಟಕ ಮುಂದಾಗಿದ್ದು ಇದಕ್ಕೆ ಅವಕಾಶ ನೀಡಬಾರದು. ಕುಡಿರುವ ನೀರಿಗಾಗಿ ಎಂದು ವಾದ ಮಾಡುತ್ತಿರುವ ಕರ್ನಾಟಕದ ಹುಬ್ಬಳ್ಳಿ, ಧಾರವಾಡ ಪ್ರದೇಶ ಮಹದಾಯಿ ನದಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ನದಿ ಕೊಳ್ಳದ ಹೊರಗಿನ ಪ್ರದೇಶಗಳಿಗೆ ಯಾವ ಕಾರಣಕ್ಕೂ ನೀರು ಹರಿಸಲು ಅವಕಾಶ ನೀಡಬಾರದು. ಹುಬ್ಬಳ್ಳಿ ಧಾರವಾಡದ ಜನಸಂಖ್ಯೆಯ ಏರಿಕೆಯ ಬಗ್ಗೆ ಕರ್ನಾಟಕ ಕೊಟ್ಟಿರುವ ಮಾಹಿತಿ ಉತ್ಪ್ರೇಕ್ಷೆಯಿಂದ ಕೂಡಿದೆ. 2044ರ ಹೊತ್ತಿಗೆ ಆ ಭಾಗದ ಜನಸಂಖ್ಯೆ ಅಷ್ಟೊಂದು ಪ್ರಮಾಣದಲ್ಲಿ ಏರಲು ಸಾಧ್ಯವೇ ಇಲ್ಲ. ಕರ್ನಾಟಕವು ಮಹದಾಯಿ ಕೊಳ್ಳದಲ್ಲಿ ಲಭ್ಯವಿರುವ ನೀರಿನ ಮೇಲು ಅಂದಾಜು (199.6 ಟಿಎಂಸಿ) ಮಾಡಿದೆ. ಆದರೆ ಅಷ್ಟೊಂದು ನೀರು ಮಹಾದಾಯಿಯಲ್ಲಿ ಇಲ್ಲವೇ ಇಲ್ಲ.

Mahadayi River 2

ಪರಿಸರ ನಾಶ: ಕರ್ನಾಟಕ ನೀರಿನ ತಿರುವು ಯೋಜನೆಗಳನ್ನು ಜಾರಿಗೊಳಿಸಿದರೆ ಪರಿಸರದ ಮೇಲೆ ಭಾರಿ ದುಷ್ಪರಿಣಾಮ ಬೀರಲಿದೆ ವ್ಯಾಪಕ ಅರಣ್ಯ ನಾಶವಾಗಲಿದೆ. ಕರ್ನಾಟಕ ತನ್ನ ಬೇಡಿಕೆಯನ್ನು ಸಮರ್ಥಿಸಿಕೊಳ್ಳಲು ಆಧರಿಸಿರುವ ದಾಖಲೆಗಳಲ್ಲಿ ಲೋಪವಿದೆ. ಮಳೆಯ ಪ್ರಮಾಣ ಮತ್ತು ನೀರಿನ ಲಭ್ಯತೆಯ ಪ್ರಮಾಣ ಬಗ್ಗೆ ಕರ್ನಾಟಕ ಸಲ್ಲಿಸಿರುವ ದಾಖಲೆಗಳಲ್ಲಿನ ಮಾಹಿತಿ ನಂಬಲು ಸಾಧ್ಯವಿಲ್ಲ. ಅನೇಕ ವರ್ಷಗಳ ಕಾಲ ಏಕ ಪ್ರಮಾಣದ ಮಳೆ ಮತ್ತು ನೀರಿನ ಅಳತೆಯನ್ನು ನಮೂದಿಸಲಾಗಿದೆ. ಇದು ಹೇಗೆ ಸಾಧ್ಯ? ಇದು ಬದಲಾಗಬೇಕಲ್ಲವೇ?. ಕರ್ನಾಟಕ ತನ್ನ ಯೋಜನೆಗಳ ಪರಿಸರ ಅಧ್ಯಯನ ನಡೆಸಿಲ್ಲ. ಅಷ್ಟೇ ಅಲ್ಲದೆ ಕರ್ನಾಟಕವು ಮಹದಾಯಿ ಕೊಳ್ಳದ ನೀರಿನ ಲೆಕ್ಕ ಹಾಕಲು ಆಧರಿಸಿರುವ ಕೇಂದ್ರ ಜಲ ಮಂಡಳಿಯ ವರದಿಯಲ್ಲೇ ಲೋಪವಿದೆ.

ನೀರಿನ ಪ್ರಮಾಣ ಕಡಿಮೆ: ಕರ್ನಾಟಕದ ಲೆಕ್ಕಾಚಾರದ ಪ್ರಕಾರ ಮಹದಾಯಿ ಕೊಳ್ಳದಲ್ಲಿ ಬೀಳುವ ಮಳೆಯ ಪ್ರಮಾಣಕ್ಕಿಂತ ನದಿಯಲ್ಲಿ ಹೆಚ್ಚು ನೀರಿದೆ ಇದು ಹೇಗೆ ಸಾಧ್ಯ. ಸಮುದ್ರಕ್ಕೆ ಸೇರುವ ನೀರು ವ್ಯರ್ಥ ಎಂಬ ಕರ್ನಾಟಕದ ನಿಲುವು ಆಧಾರರಹಿತವಾದದ್ದು. ನೀರು ಸಮುದ್ರ ಸೇರುವ ಪ್ರಕ್ರಿಯೆಗೆ ನೈಸರ್ಗಿಕ ಮಹತ್ವವಿದೆ. ಹಾಗೆಯೇ ಗೋವಾದ ಮೀನುಗಾರಿಕೆ ಮತ್ತು ನೌಕಾಯನಗಳು ಸಮುದ್ರ ಸೇರುವ ನೀರನ್ನು ಅವಲಂಬಿಸಿಕೊಂಡಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಕಡು ಬಿಸಿಲಿನ ಮಾಸಗಳಲ್ಲಿ ಸಮುದ್ರಕ್ಕೆ ಸೇರಲು ಮಹದಾಯಿಯಲ್ಲಿ ನೀರೆ ಇರುವುದಿಲ್ಲ ಎಂದು ಗೋವಾ ಹೇಳಿದೆ.

ಗೋವಾದ ವಾದವನ್ನು ಬೆಂಬಲಿಸಿದ್ದ ಮಹಾರಾಷ್ಟ್ರ:
ರಾಜ್ಯಗಳ ನೈಜ ಅಗತ್ಯವನ್ನು ನ್ಯಾಯಾಧಿಕರಣ ನಿರ್ಧರಿಸಬೇಕು. ಕೊಳ್ಳದೊಳಗಿನ ಬೇಡಿಕೆಗೆ ಒತ್ತು ನೀಡಬೇಕು. ಕೃಷ್ಣಾ ನದಿ ನೀರಿನಲ್ಲಿ ಕೃಷ್ಣಾ ನ್ಯಾಯಾಧಿಕರಣ ರಚನೆ ಆಗುವ ಮುಂಚಿತವಾಗಿ ಅಂಧ್ರಪ್ರದೇಶ 750 ಟಿಎಂಸಿ ಬಳಸುತ್ತಿದ್ದ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರಣ ನೀಡಿ ಅದನ್ನು ರಕ್ಷಿಸಲಾಗಿತ್ತು. ಈ ಪ್ರಕರಣದಲ್ಲಿಯೂ ಪ್ರಸ್ತುತ ಬಳಕೆಯನ್ನು ರಕ್ಷಿಸಬೇಕು. ನ್ಯಾಯಾಧಿಕರಣವು ಈ ಪ್ರಕರಣದಲ್ಲಿ ಅಡಕವಾಗಿರುವ ಎಲ್ಲ (ಪರಿಸರ, ಅಂತರ್ ಕೊಳ್ಳ) ಮುಂತಾದ ಅಂಶಗಳನ್ನು ಪರಿಗಣಿಸಿ ತೀರ್ಪು ನೀಡಬೇಕು. ಪರಿಸರದ ಅಗತ್ಯಗಳನ್ನು ಗಮನಿಸಬೇಕು. ಗೋವಾ ಮಹದಾಯಿಯನ್ನು ಕರ್ನಾಟಕ ನದಿ ಪಾತ್ರದ ಹೊರಗೆ ಕೊಂಡೊಯ್ಯುತ್ತದೆ ಎಂಬ ಆತಂಕದಿಂದ ಅದು ದೂರು ಸಲ್ಲಿಸಿದೆ. ಗೋವಾವು ಪೂರ್ವಗ್ರಹದಿಂದ ದೂರು ಸಲ್ಲಿಸಿದೆ ಎಂಬುದು ಸರಿಯಲ್ಲ ಎಂದು ಮಹರಾಷ್ಟ್ರ ಪರ ವಕೀಲ ನಾಗೋಲ್ಕರ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

MAHADAYI 4

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=Pen28gCcuho

TAGGED:bengalurugoairrigationkarnatakamahadayitrbunalಐತೀರ್ಪುಕರ್ನಾಟಕಗೋವಾನೀರಾವರಿಬೆಂಗಳೂರುಮಹದಾಯಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Uttarakhand Cloudburst
Districts

ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Public TV
By Public TV
2 hours ago
ARMY
Districts

ಗಡಿಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ: ಭಾರತೀಯ ಸೇನೆ

Public TV
By Public TV
2 hours ago
IndianArmy
Latest

ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

Public TV
By Public TV
2 hours ago
Uttarakashi Cloudburst army camp
Latest

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ

Public TV
By Public TV
2 hours ago
Pankaj Chaudhary
Karnataka

ಕರ್ನಾಟಕಕ್ಕೆ 46,933 ಕೋಟಿ ತೆರಿಗೆ ಹಣ ಬಿಡುಗಡೆ – ಕೇಂದ್ರ ಹಣಕಾಸು ಸಚಿವಾಲಯ

Public TV
By Public TV
3 hours ago
JP Nadda Mallikarjun Kharge
Districts

ನನ್ನಿಂದ ಟ್ಯೂಷನ್‌ ತೆಗೆದುಕೊಳ್ಳಿ: ಖರ್ಗೆ vs ನಡ್ಡಾ ವಾಕ್ಸಮರ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?