Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು 4 ಗಂಟೆಗೆ ಮಹದಾಯಿ ತೀರ್ಪು: ಕರ್ನಾಟಕ ಮತ್ತು ಗೋವಾದ ವಾದ ಏನಿತ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಇಂದು 4 ಗಂಟೆಗೆ ಮಹದಾಯಿ ತೀರ್ಪು: ಕರ್ನಾಟಕ ಮತ್ತು ಗೋವಾದ ವಾದ ಏನಿತ್ತು?

Karnataka

ಇಂದು 4 ಗಂಟೆಗೆ ಮಹದಾಯಿ ತೀರ್ಪು: ಕರ್ನಾಟಕ ಮತ್ತು ಗೋವಾದ ವಾದ ಏನಿತ್ತು?

Public TV
Last updated: August 14, 2018 1:38 pm
Public TV
Share
5 Min Read
mahadayi 1
SHARE

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಧಿಕರಣದ ಐತೀರ್ಪು ಪ್ರಕಟವಾಗಲಿದೆ.

ಆಗಸ್ಟ್ 20ಕ್ಕೆ ನ್ಯಾಯಾಧಿಕರಣದ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ನೇತೃತ್ವದ ತ್ರಿಸದಸ್ಯಪೀಠ ತೀರ್ಪು ಪ್ರಕಟಿಸಲಿದೆ. ಅಂತಿಮ ಹಂತದ ವಾದ ಈ ವರ್ಷದ ಫೆ.21ಕ್ಕೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಲಾಗಿತ್ತು.

ಮಹದಾಯಿ ವಿವಾದವನ್ನು ಕಳೆದ ಐದು ವರ್ಷದಲ್ಲಿ 105 ದಿನಗಳು ಒಟ್ಟು ವಿಚಾರಣೆ ನಡೆದಿದ್ದು, ಹನ್ನೊಂದು ದಿನಗಳ ಕಾಲ ಅಂತಿಮ ವಿಚಾರಣೆ ನಡೆಸಲಾಗಿದೆ. ಕರ್ನಾಟಕ ಪರ ವಕೀಲ ಅಶೋಕ್ ದೇಸಾಯಿ, ಮೋಹನ್ ಕಾತರಕಿ, ಇಂದಿರಾ ಜೈಸಿಂಗ್ ಹಾಗೂ ಗೋವಾ ಪರ ಆತ್ಮರಾಮ್ ನಾಡಕರ್ಣಿ ವಾದ ಮಂಡಿಸಿದ್ದಾರೆ. ಕಾವೇರಿ ನದಿ ವಿವಾದದಂತೆ ಮಹದಾಯಿ ವಿಚಾರದಲ್ಲೂ ನ್ಯಾಯಸಿಗುವ ವಿಶ್ವಾಸವನ್ನು ರಾಜ್ಯದ ಪರ ವಕೀಲರು ವ್ಯಕ್ತಪಡಿಸಿದ್ದಾರೆ.

Mahadayi River 3

ಮಹದಾಯಿ ಅಂತಿಮ ವಿಚಾರಣೆ ಮುಕ್ತಾಯ ಬಳಿಕ ಕರ್ನಾಟಕ ಪರ ಹಿರಿಯ ವಕೀಲ ಮೋಹನ್ ಕಾತರಕಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಕಳೆದ ಆರು ವರ್ಷದಲ್ಲಿ 105 ದಿನಗಳ ಕಾಲ ವಾದ ಮಂಡಿಸಲಾಗಿದೆ. ಅಗಸ್ಟ್ 20 ರೊಳಗೆ ತೀರ್ಪು ನಿರೀಕ್ಷೆ ಮಾಡಬಹುದು. ನಮ್ಮ ಪರವಾಗಿ ಉತ್ತಮ ತೀರ್ಪು ಬರುವ ವಿಶ್ವಾಸವಿದೆ. ಕರ್ನಾಟಕ 14.98 ಟಿಎಂಸಿ ನೀರು ನ್ಯಾಯಾಧಿಕರಣ ಮುಂದೆ ಕೇಳಿದೆ. 7 ಟಿಎಂಸಿ ಹೆಚ್ಚುವರಿ ನೀರಿಗಾಗಿ ಮನವಿ ಮಾಡಿದೆ. ಗೋವಾ 172 ಟಿಎಂಸಿ ನೀರನ್ನು ಕೇಳಿದ್ದು, ಮಹಾರಾಷ್ಟ್ರ 6.34 ಟಿಎಂಸಿ ಗೆ ಬೇಡಿಕೆ ಇಟ್ಟಿದೆ ಎಂದು ಹೇಳಿದ್ದರು.

ಮಹದಾಯಿ ಅಚ್ಚುಕಟ್ಟು ನಲ್ಲಿ ಕೇಂದ್ರದ ಜಲ ಆಯೋಗ ಮಾಹಿತಿ ಪ್ರಕಾರ ಒಟ್ಟು 199.6 ಟಿಎಂಸಿ ನೀರು ಲಭ್ಯವಾಗಲಿದೆ. ಆದರೆ ಗೋವಾ ನೀಡುತ್ತಿರುವ ಮಾಹಿತಿ ಪ್ರಕಾರ 113 ಟಿಎಂಸಿ ನೀರು ಲಭ್ಯ ಎಂಬ ಮಾಹಿತಿ ನೀಡಿದೆ. ನ್ಯಾಯಾಧಿಕರಣ ಮೊದಲು ಒಟ್ಟು ಮಹದಾಯಿ ಅಚ್ಚುಕಟ್ಟಿನ ನೀರಿನ ಮಾಹಿತಿ ನಿರ್ಧರಿಸಲಿದ್ದಾರೆ. ಬಳಿಕ ರಾಜ್ಯವಾರು ವಿಂಗಡನೆ ಮಾಡಲಿದ್ದಾರೆ. ಕರ್ನಾಟಕ ಕುಡಿಯುವ ನೀರಾವರಿ ಯೋಜನೆ ನಿರ್ಮಾಣದಿಂದ ಗೋವಾಕ್ಕೆ ದಕ್ಕೆ ಉಂಟಾಗುವ ಪರಿಶೀಲನೆ ನಡೆಸಲಾಗುತ್ತೆ. ಈ ಆಧಾರದ ಮೇಲೆ ನೀರು ಹಂಚಿಕೆ ಮಾಡಲಾಗುತ್ತದೆ. ಪರಿಣಿತ ತಜ್ಞರು ಮತ್ತು ವೈಜ್ಞಾನಿಕ ಅಂಶಗಳನ್ನು ಆಧರಿಸಿ ನ್ಯಾಯಾಧಿಕರಣ ಮುಂದೆ ವಾದ ಮಂಡಿಸಿದ್ದೇವೆ ಎಂದು ತಿಳಿಸಿದ್ದರು.

Mahadayi River 5

ಕರ್ನಾಟಕಕ ಪರ ವಾದ ಏನಾಗಿತ್ತು?
ಹುಬ್ಬಳ್ಳಿ- ಧಾರವಾಡಕ್ಕೆ ಕುಡಿಯುವ ನೀರಿಗೆ ಸೂಕ್ತ ಪರ್ಯಾಯವಿಲ್ಲ. ಕೇಂದ್ರ ಜಲ ಆಯೋಗದ ಪ್ರಕಾರ ಕುಡಿಯುವ ನೀರಿಗೆ ಅತಿ ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕಕ್ಕೆ ತನ್ನ ಪಾಲಿನ 14.98 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ನೀಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಹುಬ್ಬಳ್ಳಿ ಧಾರವಾಡಕ್ಕೆ ಕುಡಿಯಲು 7.56 ಟಿಎಂಸಿ ನೀರು ಬೇಕು. ಮಹದಾಯಿಯ ನೀರು ಹು-ಧಾ ಕ್ಕೆ ಕುಡಿಯಲು ಸಿಕ್ಕರೆ ಮಲಪ್ರಭದ ಮೇಲಿನ ಒತ್ತಡ ಕಡಿಮೆ ಆಗಿ ಅದರ ನೀರನ್ನು ನೀರಾವರಿಗೆ ಬಳಸಬಹುದು. ಗೋವಾ ಸರ್ಕಾರ 113 ಟಿಎಂಸಿ ನೀರು ಮಹದಾಯಿಯಲ್ಲಿದೆ ಎನ್ನುತ್ತದೆ. ಆದರೆ 173 ಟಿಎಂಸಿ ಮಹದಾಯಿ ನೀರಿಗೆ ಬೇಡಿಕೆ ಸಲ್ಲಿಸುತ್ತದೆ. ಗೋವಾ ಮಂಡಿಸಿರುವ ವಾದ ಸರಿಯಲ್ಲ ಮತ್ತು ತಪ್ಪು ದಾರಿಗೆಳೆಯುತ್ತಿದೆ. ಅಂತಾರಾಜ್ಯ ನದಿಗಳಲ್ಲಿ ನೀರಿನ ಬಳಕೆಗೆ ಸಂಬಂಧಿಸಿದಂತೆ ಯಾವುದೇ ರಾಜ್ಯವು ಇನ್ನೊಂದು ರಾಜ್ಯದ ಅನುಮತಿ ಪಡೆಯಬೇಕು ಎಂಬುದಿಲ್ಲ. ಆದರೆ ಮತ್ತೊಂದು ರಾಜ್ಯವು ಯೋಜನೆಯಿಂದ ತನಗೆ ಹಾನಿ ಆಗುತ್ತದೆ ಎಂದರೆ ಮಾತ್ರ ದೂರು ಸಲ್ಲಿಸಬಹುದು ಎಂದು ವಾದ ಮಂಡಿಸಿತ್ತು.

ಗೋವಾ ವಾದ ಏನು?
ಕಳಸಾ ಬಂಡೂರಿ ಯೋಜನೆಯು ಕುಡಿಯುವ ನೀರಿನ ಯೋಜನೆಯಲ್ಲ. ಕರ್ನಾಟಕ ಸರ್ಕಾರ ನೀರಾವರಿಗಾಗಿ ಮಾಡಿರುವ ಯೋಜನೆ. ಮಲಪ್ರಭಾವು ಮಹದಾಯಿಗಿಂತ ಮೂರು ಪಟ್ಟು ದೊಡ್ಡ ನದಿ. ಆ ನದಿಯಲ್ಲಿ ಕರ್ನಾಟಕ ಕಟ್ಟಿರುವ ಅಣೆಕಟ್ಟಿನಲ್ಲಿ ನೀರು ಭರ್ತಿ ಆಗದ ಹಿನ್ನೆಲೆಯಲ್ಲಿ ಮಹದಾಯಿಯನ್ನು ತಿರುಗಿಸಲು ಕರ್ನಾಟಕ ಮುಂದಾಗಿದ್ದು ಇದಕ್ಕೆ ಅವಕಾಶ ನೀಡಬಾರದು. ಕುಡಿರುವ ನೀರಿಗಾಗಿ ಎಂದು ವಾದ ಮಾಡುತ್ತಿರುವ ಕರ್ನಾಟಕದ ಹುಬ್ಬಳ್ಳಿ, ಧಾರವಾಡ ಪ್ರದೇಶ ಮಹದಾಯಿ ನದಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ನದಿ ಕೊಳ್ಳದ ಹೊರಗಿನ ಪ್ರದೇಶಗಳಿಗೆ ಯಾವ ಕಾರಣಕ್ಕೂ ನೀರು ಹರಿಸಲು ಅವಕಾಶ ನೀಡಬಾರದು. ಹುಬ್ಬಳ್ಳಿ ಧಾರವಾಡದ ಜನಸಂಖ್ಯೆಯ ಏರಿಕೆಯ ಬಗ್ಗೆ ಕರ್ನಾಟಕ ಕೊಟ್ಟಿರುವ ಮಾಹಿತಿ ಉತ್ಪ್ರೇಕ್ಷೆಯಿಂದ ಕೂಡಿದೆ. 2044ರ ಹೊತ್ತಿಗೆ ಆ ಭಾಗದ ಜನಸಂಖ್ಯೆ ಅಷ್ಟೊಂದು ಪ್ರಮಾಣದಲ್ಲಿ ಏರಲು ಸಾಧ್ಯವೇ ಇಲ್ಲ. ಕರ್ನಾಟಕವು ಮಹದಾಯಿ ಕೊಳ್ಳದಲ್ಲಿ ಲಭ್ಯವಿರುವ ನೀರಿನ ಮೇಲು ಅಂದಾಜು (199.6 ಟಿಎಂಸಿ) ಮಾಡಿದೆ. ಆದರೆ ಅಷ್ಟೊಂದು ನೀರು ಮಹಾದಾಯಿಯಲ್ಲಿ ಇಲ್ಲವೇ ಇಲ್ಲ.

Mahadayi River 2

ಪರಿಸರ ನಾಶ: ಕರ್ನಾಟಕ ನೀರಿನ ತಿರುವು ಯೋಜನೆಗಳನ್ನು ಜಾರಿಗೊಳಿಸಿದರೆ ಪರಿಸರದ ಮೇಲೆ ಭಾರಿ ದುಷ್ಪರಿಣಾಮ ಬೀರಲಿದೆ ವ್ಯಾಪಕ ಅರಣ್ಯ ನಾಶವಾಗಲಿದೆ. ಕರ್ನಾಟಕ ತನ್ನ ಬೇಡಿಕೆಯನ್ನು ಸಮರ್ಥಿಸಿಕೊಳ್ಳಲು ಆಧರಿಸಿರುವ ದಾಖಲೆಗಳಲ್ಲಿ ಲೋಪವಿದೆ. ಮಳೆಯ ಪ್ರಮಾಣ ಮತ್ತು ನೀರಿನ ಲಭ್ಯತೆಯ ಪ್ರಮಾಣ ಬಗ್ಗೆ ಕರ್ನಾಟಕ ಸಲ್ಲಿಸಿರುವ ದಾಖಲೆಗಳಲ್ಲಿನ ಮಾಹಿತಿ ನಂಬಲು ಸಾಧ್ಯವಿಲ್ಲ. ಅನೇಕ ವರ್ಷಗಳ ಕಾಲ ಏಕ ಪ್ರಮಾಣದ ಮಳೆ ಮತ್ತು ನೀರಿನ ಅಳತೆಯನ್ನು ನಮೂದಿಸಲಾಗಿದೆ. ಇದು ಹೇಗೆ ಸಾಧ್ಯ? ಇದು ಬದಲಾಗಬೇಕಲ್ಲವೇ?. ಕರ್ನಾಟಕ ತನ್ನ ಯೋಜನೆಗಳ ಪರಿಸರ ಅಧ್ಯಯನ ನಡೆಸಿಲ್ಲ. ಅಷ್ಟೇ ಅಲ್ಲದೆ ಕರ್ನಾಟಕವು ಮಹದಾಯಿ ಕೊಳ್ಳದ ನೀರಿನ ಲೆಕ್ಕ ಹಾಕಲು ಆಧರಿಸಿರುವ ಕೇಂದ್ರ ಜಲ ಮಂಡಳಿಯ ವರದಿಯಲ್ಲೇ ಲೋಪವಿದೆ.

ನೀರಿನ ಪ್ರಮಾಣ ಕಡಿಮೆ: ಕರ್ನಾಟಕದ ಲೆಕ್ಕಾಚಾರದ ಪ್ರಕಾರ ಮಹದಾಯಿ ಕೊಳ್ಳದಲ್ಲಿ ಬೀಳುವ ಮಳೆಯ ಪ್ರಮಾಣಕ್ಕಿಂತ ನದಿಯಲ್ಲಿ ಹೆಚ್ಚು ನೀರಿದೆ ಇದು ಹೇಗೆ ಸಾಧ್ಯ. ಸಮುದ್ರಕ್ಕೆ ಸೇರುವ ನೀರು ವ್ಯರ್ಥ ಎಂಬ ಕರ್ನಾಟಕದ ನಿಲುವು ಆಧಾರರಹಿತವಾದದ್ದು. ನೀರು ಸಮುದ್ರ ಸೇರುವ ಪ್ರಕ್ರಿಯೆಗೆ ನೈಸರ್ಗಿಕ ಮಹತ್ವವಿದೆ. ಹಾಗೆಯೇ ಗೋವಾದ ಮೀನುಗಾರಿಕೆ ಮತ್ತು ನೌಕಾಯನಗಳು ಸಮುದ್ರ ಸೇರುವ ನೀರನ್ನು ಅವಲಂಬಿಸಿಕೊಂಡಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಕಡು ಬಿಸಿಲಿನ ಮಾಸಗಳಲ್ಲಿ ಸಮುದ್ರಕ್ಕೆ ಸೇರಲು ಮಹದಾಯಿಯಲ್ಲಿ ನೀರೆ ಇರುವುದಿಲ್ಲ ಎಂದು ಗೋವಾ ಹೇಳಿದೆ.

ಗೋವಾದ ವಾದವನ್ನು ಬೆಂಬಲಿಸಿದ್ದ ಮಹಾರಾಷ್ಟ್ರ:
ರಾಜ್ಯಗಳ ನೈಜ ಅಗತ್ಯವನ್ನು ನ್ಯಾಯಾಧಿಕರಣ ನಿರ್ಧರಿಸಬೇಕು. ಕೊಳ್ಳದೊಳಗಿನ ಬೇಡಿಕೆಗೆ ಒತ್ತು ನೀಡಬೇಕು. ಕೃಷ್ಣಾ ನದಿ ನೀರಿನಲ್ಲಿ ಕೃಷ್ಣಾ ನ್ಯಾಯಾಧಿಕರಣ ರಚನೆ ಆಗುವ ಮುಂಚಿತವಾಗಿ ಅಂಧ್ರಪ್ರದೇಶ 750 ಟಿಎಂಸಿ ಬಳಸುತ್ತಿದ್ದ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರಣ ನೀಡಿ ಅದನ್ನು ರಕ್ಷಿಸಲಾಗಿತ್ತು. ಈ ಪ್ರಕರಣದಲ್ಲಿಯೂ ಪ್ರಸ್ತುತ ಬಳಕೆಯನ್ನು ರಕ್ಷಿಸಬೇಕು. ನ್ಯಾಯಾಧಿಕರಣವು ಈ ಪ್ರಕರಣದಲ್ಲಿ ಅಡಕವಾಗಿರುವ ಎಲ್ಲ (ಪರಿಸರ, ಅಂತರ್ ಕೊಳ್ಳ) ಮುಂತಾದ ಅಂಶಗಳನ್ನು ಪರಿಗಣಿಸಿ ತೀರ್ಪು ನೀಡಬೇಕು. ಪರಿಸರದ ಅಗತ್ಯಗಳನ್ನು ಗಮನಿಸಬೇಕು. ಗೋವಾ ಮಹದಾಯಿಯನ್ನು ಕರ್ನಾಟಕ ನದಿ ಪಾತ್ರದ ಹೊರಗೆ ಕೊಂಡೊಯ್ಯುತ್ತದೆ ಎಂಬ ಆತಂಕದಿಂದ ಅದು ದೂರು ಸಲ್ಲಿಸಿದೆ. ಗೋವಾವು ಪೂರ್ವಗ್ರಹದಿಂದ ದೂರು ಸಲ್ಲಿಸಿದೆ ಎಂಬುದು ಸರಿಯಲ್ಲ ಎಂದು ಮಹರಾಷ್ಟ್ರ ಪರ ವಕೀಲ ನಾಗೋಲ್ಕರ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

MAHADAYI 4

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=Pen28gCcuho

TAGGED:bengalurugoairrigationkarnatakamahadayitrbunalಐತೀರ್ಪುಕರ್ನಾಟಕಗೋವಾನೀರಾವರಿಬೆಂಗಳೂರುಮಹದಾಯಿ
Share This Article
Facebook Whatsapp Whatsapp Telegram

Cinema news

sri krishna mutt pawan kalyan
ಡಿ.7 ರಂದು ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರೋಪಕ್ಕೆ ಪವನ್‌ ಕಲ್ಯಾಣ್‌
Cinema Latest Main Post South cinema Udupi
Jhanvi Dhruvanth Bigg Boss Kannada 12
ಗತಿಗೆಟ್ಟ ಮನಸ್ಥಿತಿಯ ಧ್ರುವಂತ್‌ಗೆ ನಾನ್ ಕೆಲಸ ಕೊಡ್ತೀನಿ ಎಂದ ಜಾನ್ವಿ
Cinema Latest Top Stories TV Shows
bigg boss season 12 kannada Jhanvi is out of Bigg Boss
ಜೊತೇಲಿ ಇದ್ಕೊಂಡು ಬೆನ್ನಿಗೆ ಚೂರಿ ಹಾಕೋವ್ರೇ ಜಾಸ್ತಿ: ಬಿಗ್‌ ಬಾಸ್ ಜಾನ್ವಿ
Cinema Latest Top Stories TV Shows
Director S Shankar
1,000 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ನಿರ್ದೇಶಕ ಶಂಕರ್ ಸಿನಿಮಾ..!
Cinema Latest Top Stories

You Might Also Like

Mithun Rai DK Shivakumar
Dakshina Kannada

ನನ್ನನ್ನು ಕೇಳಿದ್ರೆ ಡಿಕೆಶಿ ಇವತ್ತೇ ಸಿಎಂ ಆಗ್ಬೇಕು: ಮಿಥುನ್ ರೈ

Public TV
By Public TV
1 minute ago
Bagalkote accident
Bagalkot

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಗೆ ಕಾರು ಡಿಕ್ಕಿ – ನಾಲ್ವರು ದುರ್ಮರಣ

Public TV
By Public TV
33 minutes ago
Dharmasthala Chinnayya 2
Dakshina Kannada

ಬುರುಡೆ ತಂದವರು ಯಾರು? – ಚಿನ್ನಯ್ಯನಿಗೆ ಜಾಮೀನು ನೀಡಿದ್ದಕ್ಕೆ ಕಾರಣ ನೀಡಿದ ಕೋರ್ಟ್

Public TV
By Public TV
1 hour ago
DCF Paramesh
Districts

42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದ 22 ಹುಲಿ ಸೆರೆ: ಮೈಸೂರು ಡಿಸಿಎಫ್‌

Public TV
By Public TV
1 hour ago
bmtc electric bus
Bengaluru City

ಬೆಂಗಳೂರಿಗೆ ಮೋದಿ 5,700 ಇ-ಬಸ್‌ ಗಿಫ್ಟ್ – ತೇಜಸ್ವಿ ಸೂರ್ಯ ಹರ್ಷ

Public TV
By Public TV
2 hours ago
Siddaramaiah 8
Bengaluru City

ಇಂದು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?