ಕೊಡಗು ಸಂತ್ರಸ್ತರ ನೆರವಿಗೆ ನಿಂತ ಬಿಗ್ ಬಾಸ್ ಖ್ಯಾತಿಯ ದಿವಾಕರ್

Public TV
2 Min Read
biggboss divakar collage copy

– ಪ್ರತಿ ಅಂಗಡಿಗಳಿಗೆ ತೆರಳಿ ನಿಧಿ ಸಂಗ್ರಹ

ಬೆಂಗಳೂರು: ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗು ಮಂದಿಗೆ ರಾಜ್ಯದ ಮೂಲೆ ಮೂಲೆಗಳಿಂದ ನೆರವು ಹರಿದು ಬರುತ್ತಿದೆ. ಬಿಗ್ ಬಾಸ್ ಖ್ಯಾತಿಯ ದಿವಾಕರ್ ಕೂಡ ಸಂತ್ರಸ್ತರ ಬೆನ್ನಿಗೆ ನಿಂತಿದ್ದಾರೆ.

ದಿವಾಕರ್ ಅವರು, ಯಶವಂತಪುರದ ಎಪಿಎಂಸಿ ಯಾರ್ಡ್ ನಲ್ಲಿ ಪ್ರತಿ ಅಂಗಡಿಗಳಿಗೆ ತೆರಳಿ ನಿಧಿ ಸಂಗ್ರಹ ಮಾಡಿದ್ದಾರೆ. ಸದ್ಯ ದಿವಾಕರ್ ಅವರ ಈ ಕಾರ್ಯಕ್ಕೆ ಸಾರ್ವಜನಿಕರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಸದ್ಯ ದಿವಾಕರ್ ಈ ಎಲ್ಲಾ ಸಾಮಾಗ್ರಿಗಳನ್ನು ಸ್ವತಃ ತಾವೇ ಕೊಡಗಿನ ಜನತೆಗೆ ತಲುಪಿಸಲಿದ್ದಾರೆ.

biggboss divakar 5

ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗು ಮಂದಿಗೆ ರಾಜ್ಯದ ಮೂಲೆ ಮೂಲೆಗಳಿಂದ ನೆರವು ಹರಿದು ಬರುತ್ತಿದೆ. ಇತ್ತೀಚಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ. ನೆರವು ನೀಡಿದರು. ನಟ ಶಿವರಾಜ್‍ಕುಮಾರ್ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಶಿವಣ್ಣ ಸಿಎಂ ಪರಿಹಾರ ನಿಧಿಗೆ 10 ಲಕ್ಷ ಚೆಕ್ ಕೂಡ ನೀಡಿದರು. ಅಲ್ಲದೇ ಅಭಿಮಾನಿಗಳಲ್ಲಿ ಮನವಿ ಕೂಡ ಮಾಡಿಕೊಂಡರು.

cm shivanna 4

ಬಿಗ್ ಬಾಸ್ 5ನೇ ಆವೃತ್ತಿಯ ವಿನ್ನರ್ ಚಂದನ್ ಶೆಟ್ಟಿ ಅವರು ಕೂಡ ಕೊಡಗಿನ ಜನತೆಗೆ ಸಹಾಯ ಹಸ್ತ ನೀಡಿದ್ದಾರೆ. ಈಗಾಗಲೇ ಚಂದನ್ ಅವರು ಕೈಲಾದಷ್ಟು ಆಹಾರ ಸಾಮಾಗ್ರಿಗಳನ್ನು ಜನತೆಗೆ ತಲುಪಿಸಿದ್ದಾರೆ. ಅಷ್ಟೇ ಅಲ್ಲದೇ ಸ್ವತಃ ಅವರೇ ನಿರಾಶ್ರಿತರ ಬಳಿ ಹೋಗಿ ಅವರ ಕಷ್ಟಗಳನ್ನು ಆಲಿಸಿದ್ದಾರೆ. ಅಲ್ಲದೇ ನಟ ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್, ಯಶ್ ಮತ್ತು ನಟಿ ಹರ್ಷಿಕಾ ಪೂಣಚ್ಚ ಅನೇಕರು ಕೊಡಗು ಜನರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಅದೇ ರೀತಿ ಅಭಿಮಾನಿಗಳು ಕೂಡ ಅವರ ಕೈಲಾದಷ್ಟು ಅಗತ್ಯ ವಸ್ತುಗಳನ್ನು ಸಂತ್ರಸ್ತರಿಗೆ ತಲುಪಿಸಿದ್ದಾರೆ.

CHANFAN SETTY copy

ಇಂದು ಟಗರು ಡಾಲಿಯ ಹುಟ್ಟುಹಬ್ಬವಾಗಿದ್ದು, ಧನಂಜಯ್ ಕೂಡ ಅರ್ಥಪೂರ್ಣವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿಯೇ ನೂರಾರು ಅಭಿಮಾನಿಗಳು ಸೇರಿ ಡಾಲಿ ಹುಟ್ಟುಹಬ್ಬವನ್ನು ಆಚರಿಸೋ ಪ್ಲಾನ್ ಕೂಡ ಮಾಡಿದರು. ಆದರೆ ಧನಂಜಯ್ ಮಾತ್ರ ಹುಟ್ಟುಹಬ್ಬದ ಅಡಂಭರಕ್ಕೆ ಬ್ರೇಕ್ ಹಾಕಿ ಹುಟ್ಟುಹಬ್ಬವನ್ನು ನೆರೆಪೀಡಿತ ಕೊಡಗು ಜನರ ನೆರವಿಗೆ ದೇಣಿಗೆ ಸಂಗ್ರಹಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

dhananjay collage copy

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *