Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಂಡಿ ಮುಚ್ಚಲು ವಿಫಲವಾಗಿರೋ ಸರ್ಕಾರದಿಂದ ಬೆಂಗ್ಳೂರಿಗರ ಮೇಲೆ ಭೂಸಾರಿಗೆ ಕರ: ಹೇಗೆ ವಿಧಿಸಲಾಗುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುಂಡಿ ಮುಚ್ಚಲು ವಿಫಲವಾಗಿರೋ ಸರ್ಕಾರದಿಂದ ಬೆಂಗ್ಳೂರಿಗರ ಮೇಲೆ ಭೂಸಾರಿಗೆ ಕರ: ಹೇಗೆ ವಿಧಿಸಲಾಗುತ್ತೆ?

Bengaluru City

ಗುಂಡಿ ಮುಚ್ಚಲು ವಿಫಲವಾಗಿರೋ ಸರ್ಕಾರದಿಂದ ಬೆಂಗ್ಳೂರಿಗರ ಮೇಲೆ ಭೂಸಾರಿಗೆ ಕರ: ಹೇಗೆ ವಿಧಿಸಲಾಗುತ್ತೆ?

Public TV
Last updated: August 27, 2018 9:09 pm
Public TV
Share
3 Min Read
bmtc road tax bbmp
SHARE

ಬೆಂಗಳೂರು: ಗುಂಡಿ ಮುಕ್ತ ರಸ್ತೆ ಮಾಡಲು ವಿಫಲವಾಗಿರುವ ಸಮ್ಮಿಶ್ರ ಸರ್ಕಾರ, ಈಗ ಬೆಂಗಳೂರು ನಾಗರಿಕರಿಗೆ ಆಘಾತವಾಗುವ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ. ಹದಗೆಟ್ಟ ರಸ್ತೆಗಳಿಂದ ಭಾರೀ ನಷ್ಟವಾಗಿದ್ದು, ಕರ ಸಂಗ್ರಹಕ್ಕೆ ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೀಡಿದ್ದ ಸಲಹೆಗೆ ಸಮ್ಮತಿ ಸೂಚಿಸಿದೆ.

ನಗರದಲ್ಲಿನ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿವೆ. ಇದರಿಂದ ರಸ್ತೆಗಳಲ್ಲಿ ಓಡಾಡುವ ಬಿಎಂಟಿಸಿ ಬಸ್‍ಗಳು ಆಗಾಗ ಹದಗೆಡುತ್ತಿವೆ. ಇದರಿಂದಾಗಿ ಬಿಎಂಟಿಸಿಗೆ ಹೆಚ್ಚಿನ ನಿರ್ವಹಣೆ ಹೊರೆ ಬೀಳುತ್ತಿದೆ. ಬಿಬಿಎಂಪಿಯೇ ಬಿಎಂಟಿಸಿ ಇಲಾಖೆಗೆ ಹಣ ನೀಡಬೇಕೆಂದು ಕೆಲದಿನಗಳ ಹಿಂದೆ ಸಾರಿಗೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.

path hole 2

ಸಾರಿಗೆ ಸಚಿವ ಡಿಸಿ ತಮ್ಮಣ್ಣ ಪ್ರಸ್ತಾವನೆ ಪುರಸ್ಕರಿಸಿರುವ ರಾಜ್ಯ ಸರ್ಕಾರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದು, ಸಾರ್ವಜನಿಕರಿಗೆ 2% ರಷ್ಟು ಭೂ ಸಾರಿಗೆ ಉಪಕರ ವಿಧಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಉಸ್ತುವಾರಿ ಸಚಿವ ಡಾ. ಪರಮೇಶ್ವರ್, ಬಿಬಿಎಂಪಿಗೆ ತನ್ನ ಸಂಪನ್ಮೂಲ ಕ್ರೋಡಿಕರಿಸುವ ಹಕ್ಕಿದೆ. ಕಾನೂನು ಬಾಹಿರವಾಗಿದ್ದರೆ ಮಾತ್ರ ಸರ್ಕಾರ ಮಧ್ಯಪ್ರವೇಶಿಸುತ್ತದೆ ಎಂದು ತಿಳಿಸಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕರ ವಿಧಿಸುವ ಬಗ್ಗೆ ಸಾರ್ವಜನಿಕರು ಹಾಗೂ ಬಿಬಿಎಂಪಿ ವಿರೋಧ ಪಕ್ಷದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಆಸ್ತಿ ಮಾಲೀಕರು ಹೆಚ್ಚಿನ ತೆರಿಗೆ ಪಾವತಿಸುತ್ತಿದ್ದು, ಮತ್ತೆ ಹೆಚ್ಚುವರಿ ತೆರಿಗೆ ಹೊರೆ ಹಾಕುವುದು ಸರಿಯಲ್ಲ. ಅಲ್ಲದೆ ಎರಡು ವರ್ಷಗಳ ಹಿಂದೆ ಆಸ್ತಿ ತೆರಿಗೆ 20% ರಿಂದ 25% ಹೆಚ್ಚಿಸಿ ಆಸ್ತಿ ಮಾಲೀಕರಿಗೆ ಹೆಚ್ಚಿನ ಹೊರೆ ಹೊರಿಸಿತ್ತು. ಹಾಗಾಗಿ ಮತ್ತೆ ತೆರಿಗೆದಾರರಿಗೆ ಕರದ ಹೊರೆ ಹೊರಿಸಲು ಬಿಡುವುದಿಲ್ಲ ಎಂದು ಬಿಬಿಎಂಪಿ ವಿರೋಧ ಪಕ್ಷ ನಾಯಕ ಪದ್ಮನಾಭ ರೆಡ್ಡಿ ಆಡಳಿತ ಪಕ್ಷದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

vlcsnap 2018 08 07 07h29m08s23

ಹೆಚ್ಚುವರಿ ತೆರಿಗೆ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಉಪಕರ ವಿಧಿಸುವ ಜವಾಬ್ದಾರಿ ಬಿಬಿಎಂಪಿ ಹೊತ್ತಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಬೇಕಿದೆ. ನರ್ಮ್ ಯೋಜನೆಯಡಿಯಲ್ಲಿ ತೆರಿಗೆ ಸೆಸ್ ವಿಧಿಸಬೇಕಂಬ ನಿಯಮವಿದೆ. ಅದರ ಪ್ರಕಾರ ಸೆಸ್ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.

ಒಟ್ಟಾರೆ ಉಪಕರ ವಿಧಿಸಿ ಮತ್ತೆ ತೆರಿಗೆದಾರರಿಗೆ ಹೊರೆ ಹೆಚ್ಚಿಸಲು ಪಾಲಿಕೆ ಮುಂದಾಗಿದ್ದು, ಈ ವಿಷಯವನ್ನು ಮಂಗಳವಾರ ನಡೆಯಲಿರುವ ಕೌನ್ಸಿಲ್ ಸಭೆಯಲ್ಲಿ ಮುಂದಿಡಲಾಗುತ್ತದೆ. ಒಂದೊಮ್ಮೆ ಸಭೆಯಲ್ಲಿ ವಿಷಯ ಅನುಮೋದನೆಗೊಂಡರೆ ತೆರಿಗೆದಾರರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ.

path hole 1

ಕಳಪೆ ರಸ್ತೆ ಮಾಡುವ ಗುತ್ತಿಗೆದಾರರ ಬೇಜವಾಬ್ದಾರಿ ಹಾಗೂ ಬಿಎಂಟಿಸಿ ವೆಚ್ಚಕ್ಕೂ ನೇರವಾಗಿ ಜನರೇ ತೆರಿಗೆ ವಾಪತಿಸುವುದು ಎಷ್ಟು ಸರಿ? ರಸ್ತೆಗಳಿಂದ ಬಿಎಂಟಿಸಿಗೆ ಆಗಿರುವ ನಷ್ಟ ತುಂಬಲು ಬಿಬಿಎಂಪಿಯೇನೋ ಜನರಿಗೆ ಹೊರೆ ಹೊರೆಸುತ್ತಿದೆ. ಆದೆ ಇದೇ ಗುಂಡಿಗಳಿಂದ ಸಾರ್ವಜನಿಕರ ವಾಹನಗಳಿಗೆ ಆಗಿರುವ ಹಾನಿಯನ್ನು ಭರಿಸುವವರ್ಯಾರು? ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ಹಾಕಿ ಭಾರೀ ಟೀಕೆಗೆ ಗುರಿಯಾಗಿರುವ ಸರ್ಕಾರ ಈಗ ವಿಶೇಷವಾಗಿ ಬೆಂಗಳೂರಿಗರ ಮೇಲೆ ವಿಶೇಷ ಸೆಸ್ ಹಾಕಲು ಮುಂದಾಗಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಎದ್ದಿದೆ.

ಭೂಸಾರಿಗೆ ಕರ ಹೇಗೆ ಜಾರಿ?
ನೇರವಾಗಿ ಭೂ ಸಾರಿಗೆ ಕರ ವಿಧಿಸಲು ಸಾಧ್ಯವಿಲ್ಲ. ಹೀಗಾಗಿ ಈಗಿರುವ ಆಸ್ತಿ ತೆರಿಗೆಯನ್ನು ಜಾಸ್ತಿ ಮಾಡಲಾಗುತ್ತದೆ. ಒಂದೊಂದು ಪ್ರದೇಶಕ್ಕೆ ಒಂದೊಂದು ಆಸ್ತಿ ತೆರಿಗೆ ಇದೆ. ಎಂಜಿ ರಸ್ತೆಯಲ್ಲಿನ ಆಸ್ತಿ ತೆರಿಗೆಯೇ ಬೇರೆ, ಬಗಲಗುಂಟೆಯಲ್ಲಿನ ತೆರಿಗೆಯೇ ಬೇರೆ ಇದೆ. ಸದ್ಯ ಆಸ್ತಿ ತೆರಿಗೆಯಿಂದ ಸುಮಾರು ವರ್ಷಕ್ಕೆ 2 ಸಾವಿರ ಕೋಟಿ ರೂ. ಸಂಗ್ರಹವಾಗುತ್ತಿದೆ. ಈಗ 2% ರಷ್ಟು ಕರ ವಿಧಿಸಿದರೆ ಅಂದಾಜು 40 ಕೋಟಿ ರೂ. ತೆರಿಗೆ ಸಂಗ್ರಹವಾಗಬಹುದು. ಈ ಹಣವನ್ನು ಸಾರಿಗೆ ಸಂಸ್ಥೆ ನೀಡಲಾಗುತ್ತದೆ.

2011-2012 ರಿಂದ 2016-17ರವರೆಗಿನ ಅವಧಿಯಲ್ಲಿ ಬಿಎಂಟಿಸಿಗೆ 608 ಕೋಟಿ ರೂ. ನಷ್ಟವಾಗಿದೆ. ಒಟ್ಟು ಆದಾಯದಲ್ಲಿ 27.27% ಹಣ ಡೀಸೆಲ್ ಖರೀದಿಗೆ ಖರ್ಚಾದರೆ 53% ಹಣ ಸಿಬ್ಬಂದಿ ಸಂಬಳಕ್ಕೆ ಹೋಗುತ್ತದೆ. ಬಿಎಂಟಿಸಿಗೆ ವಿಶೇಷವಾಗಿ ಮೆಟ್ರೋ ಸಂಚರಿಸುವ ಮಾರ್ಗಗಳಲ್ಲಿ ಕಡಿಮೆ ಆದಾಯ ಬರುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv  

BMTC KSRTC STRIKE 1

TAGGED:bbmpPublic TVState Governmenttransport departmentTransport Taxಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರುರಾಜ್ಯ ಸರ್ಕಾರಸಾರಿಗೆ ಇಲಾಖೆಸಾರಿಗೆ ತೆರಿಗೆ
Share This Article
Facebook Whatsapp Whatsapp Telegram

Cinema news

Dileep Chinmayi Sripada
ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ
Cinema Latest Top Stories
Suri Annas Nee Nanna Devi song release 2
ಸೂರಿ ಅಣ್ಣನ ನೀ ನನ್ನ ದೇವತೆ ಸಾಂಗ್ ರಿಲೀಸ್
Cinema Latest Sandalwood
Alpha Movie
ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Cinema Latest Sandalwood Top Stories
javara movie
ದುನಿಯಾ ವಿಜಯ್ ಮಗಳ ಹೊಸ ಚಿತ್ರಕ್ಕೆ ಮುಹೂರ್ತ: ರಿಷಿ ನಾಯಕ
Cinema Latest Sandalwood Top Stories

You Might Also Like

Suryakumar Yadav
Cricket

ಸಾಕಷ್ಟು ಅವಕಾಶ ಕೊಟ್ಟಿದ್ದೇವೆ, ಯಾವ್ದೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡೋಕೆ ರೆಡಿ ಇರ್ಬೇಕು: ಸಂಜು ಬಗ್ಗೆ ಸೂರ್ಯ ಮಾತು

Public TV
By Public TV
8 minutes ago
Basavaraj Horatti Nagaraj Yadav
Belgaum

ಸಭಾಪತಿ ಹೊರಟ್ಟಿ ವಿರುದ್ಧ ನಾಗರಾಜ್ ಯಾದವ್ ನೇಮಕಾತಿ ಅಕ್ರಮ ಆರೋಪ

Public TV
By Public TV
24 minutes ago
Puttur Mahalingeshwara Temple
Dakshina Kannada

ಸದ್ಯ ಪ್ರಸಾದ್ ಯೋಜನೆಯಡಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯ ಪರಿಗಣನೆಯಲ್ಲಿಲ್ಲ: ಕೇಂದ್ರ

Public TV
By Public TV
59 minutes ago
IndiGo
Latest

ಇಂಡಿಗೋ ಸಮಸ್ಯೆ – 9,55,591 ಟಿಕೆಟ್‌ ರದ್ದು, 827 ಕೋಟಿ ರೂ. ರೀ ಫಂಡ್

Public TV
By Public TV
1 hour ago
Madhu bangarappa
Belgaum

ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ: ಮಧು ಬಂಗಾರಪ್ಪ

Public TV
By Public TV
2 hours ago
Siddaramaiah 15
Court

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ ನೋಟಿಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?