Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮಿತ್ ಶಾ ಒಂದು ಹೇಳಿಕೆಯಿಂದ ಮೋದಿ ವಿರುದ್ಧದ ನನ್ನ ಧ್ವನಿ ಜೋರಾಯಿತು: ಯಶ್‍ವಂತ್ ಸಿನ್ಹಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅಮಿತ್ ಶಾ ಒಂದು ಹೇಳಿಕೆಯಿಂದ ಮೋದಿ ವಿರುದ್ಧದ ನನ್ನ ಧ್ವನಿ ಜೋರಾಯಿತು: ಯಶ್‍ವಂತ್ ಸಿನ್ಹಾ

Karnataka

ಅಮಿತ್ ಶಾ ಒಂದು ಹೇಳಿಕೆಯಿಂದ ಮೋದಿ ವಿರುದ್ಧದ ನನ್ನ ಧ್ವನಿ ಜೋರಾಯಿತು: ಯಶ್‍ವಂತ್ ಸಿನ್ಹಾ

Public TV
Last updated: August 29, 2018 2:45 pm
Public TV
Share
3 Min Read
Yashwant Sinha PM Narendra Modi
SHARE

ಬೆಂಗಳೂರು: ಮಾಜಿ ವಿದೇಶಾಂಗ ಸಚಿವ ಯಶ್‍ವಂತ ಸಿನ್ಹಾ ಅವರು ರಫೇಲ್ ಒಪ್ಪಂದ, ಮೇಕ್ ಇನ್ ಇಂಡಿಯಾ ವಿಚಾರವನ್ನು ಇಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಮೋದಿ ವಿರೋಧಿ ಅಲ್ಲ. 2014ರಲ್ಲಿ ಸಕ್ರಿಯ ರಾಜಕಾರಣಕ್ಕೆ ನಾನು ಗುಡ್ ಬೈ ಹೇಳಿದ್ದೇನೆ. ಲೋಕಸಭಾ ಚುನಾವಣೆಗೆ ನಿಲ್ಲುವುದಿಲ್ಲ ಅಂತಾ ನಿರ್ಧಾರ ತೆಗೆದುಕೊಂಡಿದ್ದು, ಅದಕ್ಕೆ ಈಗಲೂ ಬದ್ಧನಾಗಿದ್ದೇನೆ. ಉದ್ಯೋಗ ಇಲ್ಲದವರು ಮೋದಿ ಅವರನ್ನು ಟೀಕೆ ಮಾಡುವುದನ್ನು ಉದ್ಯೋಗ ಮಾಡಿಕೊಂಡಿದ್ದಾರೆಂದು ಹೇಳಿ ಅಮಿತ್ ಶಾ ವ್ಯಂಗ್ಯವಾಡಿದ್ದರು. ಹೀಗಾಗಿ ನನ್ನ ಧ್ವನಿ ಜೋರಾಯಿತು ಎಂದು ತಿಳಿಸಿದರು.

Yashwant Sinha

ರಫೇಲ್ ವಿಚಾರವನ್ನು ಪ್ರಸ್ತಾಪ ಮಾಡಿದ ಅವರು, ಎಚ್‍ಎಎಲ್ ಜೊತೆ ಮಾಡಿಕೊಂಡ ಒಪ್ಪಂದವನ್ನು ರದ್ದು ಮಾಡಿದ್ದು ಯಾಕೆ? ಫ್ರಾನ್ಸ್ ಪ್ರವಾಸದ ಸಮಯದಲ್ಲಿ ಏಕಾಏಕಿ ರದ್ದಾಗಿದ್ದು ಏಕೆ? ಕ್ಯಾಬಿನೆಟ್ ಗಮನಕ್ಕೂ ತಂದು ಈ ಡೀಲ್ ನಡೆದಿಲ್ಲ ಯಾಕೆ ಎಂದು ಸಿನ್ಹಾ ಪ್ರಶ್ನಿಸಿದರು.

ಮೇಕ್ ಇನ್ ಇಂಡಿಯಾ ಅಂತಾ ಹೇಳುವವರು ವಿದೇಶದೊಂದಿಗೆ ಇಂತಹ ಒಪ್ಪಂದ ಮಾಡಿಕೊಂಡಿದ್ದು ಯಾಕೆ? ಆ ಕಂಪೆನಿ ವಿರುದ್ಧ ನಾನು ಮಾತನಾಡಲಾರೆ ಯಾಕೆಂದರೆ 500 ಕೋಟಿ ರೂ. ಮಾನಹಾನಿ ಪ್ರಕರಣ ದಾಖಲು ಮಾಡಬಹುದು. ರಫೇಲ್ ಒಪ್ಪಂದದಿಂದಾಗಿ ಎಚ್‍ಎಎಲ್ ಕಂಪೆನಿಗೆ ತುಂಬಾ ನಷ್ಟವಾಗಿದೆ. ಹೊಸ ಒಡಂಬಡಿಕೆ ಮಾಡಿಕೊಳ್ಳುವವರು ಒಂದೇ ಕಂಪೆನಿಗೆ ಅಹ್ವಾನ ಕೊಟ್ಟಿದ್ದು ಯಾಕೆ? ಈ ಆರೋಪದಲ್ಲಿ ಪ್ರಧಾನಿ ಮೋದಿ ಒಬ್ಬರೇ ಭಾಗಿಯಾಗಿದ್ದಾರೆ. ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರ ನಡುವೆ ಈ ಡೀಲ್ ನಡೆದಿದೆ ಅಂತಾ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದರು. ಈ ಎಲ್ಲ ಕಾರಣಗಳಿಗಾಗಿ ಪಿಎಂ ಮೋದಿ ವೈಯುಕ್ತಿಕವಾಗಿ ಇದಕ್ಕೆ ಜವಾಬ್ದಾರಿ ಆಗುತ್ತಾರೆ ಎಂದು ದೂರಿದರು.

Amit shah

ಈ ವ್ಯವಹಾರ ಹೇಗೆ ನಡೆದಿದೆ ಎಂಬುದು ದೇಶದ ಜನತೆಗೆ ಗೊತ್ತಾಗಬೇಕು. ಇದಕ್ಕೆ ಪ್ರಧಾನಿ ಮೋದಿ ಉತ್ತರ ನೀಡಬೇಕು. 20 ದಿನಗಳ ಹಿಂದೆ ನೋಂದಣಿ ಆದ ಕಂಪೆನಿಗೆ ಕೊಟ್ಟಿದ್ದು ಹೇಗೆ? ಆ ಕಂಪೆನಿಗೆ ಯುದ್ದ ವಿಮಾನ ತಯಾರಿಕೆಯ ಅನುಭವವೇ ಇಲ್ಲ. ಇಂತಹ ಕಂಪನಿಗೆ ಡೀಲ್ ಕೊಟ್ಟಿದ್ದು ಹೇಗೆ ಎಂದು ಪ್ರಶ್ನಿಸಿದರು.

ಜಂಟೀ ಸಂಸದೀಯ ಸಮಿತಿಯಲ್ಲಿ ಇದರ ರಫೇಲ್ ಡೀಲ್ ಬಗ್ಗೆ ಚರ್ಚೆಯಾಗಬೇಕು. ಅಲ್ಲಿ ನಿರ್ಧಾರ ಮಾಡಿ ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಅದಕ್ಕೆ ಒಪ್ಪಿಗೆ ಸೂಚಿಸಬೇಕು. ಆಡಳಿತ ಪಕ್ಷದವರೇ ಸಮಿತಿಯಲ್ಲಿ ಅಧ್ಯಕ್ಷರಾಗಿರುವುದರಿಂದ ಯಾವುದೇ ಅನುಕೂಲ ಆಗುವುದಿಲ್ಲ. ಆದರೆ ಫಲಿತಾಂಶ ಏನು ಬರುತ್ತೆ ಎನ್ನುವುದನ್ನು ತಿಳಿದುಕೊಳ್ಳಬಹುದು. ನಾನು ಕೂಡ 2ಜಿ ಹಗರಣದ ಸಮಿತಿಯಲ್ಲಿ ಇದ್ದು, ಏನಾಯಿತು ಎನುವುದನ್ನು ತಿಳಿದಿಕೊಂಡೆ ಎಂದರು.

ದೇಶವನ್ನು ಅಭಿವೃದ್ಧಿ ಮಾದರಿಯಲ್ಲಿ ನಡೆಸಿದರೆ ತನ್ನಷ್ಟಕ್ಕೆ ತಾನೇ ಮೇಕ್ ಇನ್ ಇಂಡಿಯಾ ಆಗುತ್ತದೆ. ಅದನ್ನು ಬಿಟ್ಟು ಭಾಷಣದಿಂದ ಮೇಕ್ ಇನ್ ಇಂಡಿಯಾ ಆಗಲ್ಲ ಎಂದು ಪ್ರಧಾನಿಗೆ ಟಾಂಗ್ ಕೊಟ್ಟ ಅವರು, ಪ್ರಜಾತಂತ್ರದ ಮೇಲೆ, ಪ್ರಜಾತಂತ್ರದ ಸಂಸ್ಥೆಗಳ ಮೇಲೆ ದಾಳಿ ಆದ ಕಾರಣ ನಾನು ಬಿಜೆಪಿ ತೊರೆದೆ. ನಾನು 2 ವರ್ಷ ವಿದೇಶಾಂಗ ಸಚಿವನಾಗಿದ್ದಾಗ ಅಂದಿನ ಪ್ರಧಾನಿ ವಾಜಪೇಯಿ ನನಗೆ ಸಂಪೂರ್ಣ ಸ್ವತಂತ್ರ ನೀಡಿದ್ದರು. ಆದರೆ ಪ್ರಧಾನಿ ಮೋದಿ ಕಳೆದ ನಾಲ್ಕು ವರ್ಷದಲ್ಲಿ ಯಾವತ್ತಾದರೂ ವಿದೇಶಾಂಗ ಸಚಿವೆಯನ್ನು ವಿದೇಶಕ್ಕೆ ಕರೆದೊಯ್ದೊದ್ದಿರಾ? ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟ್ಟರ್ ಹಾಗೂ ಖಾತೆಯ ಹೆಸರಿಗೆ ಸೀಮಿತ ಎಂದು ಕಾಲೆಳೆದರು.

Yashwant Sinha 1

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಮಾಧ್ಯಮ ಸೇರಿದಂತೆ ಪ್ರಜಾಪ್ರಭುತ್ವದ ಎಲ್ಲಾ ಅಂಗಗಳು ಒಂದೇ ಕಡೆ ಇವೆ. ಹಿಂದೆಂದೂ ಪ್ರಜಾಪ್ರಭುತ್ವದ ಅಂಗಗಳು ಇಷ್ಟು ದುರ್ಬಲವಾಗಿರುವುದನ್ನು ನಾನು ಕಂಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಯಶ್‍ವಂತ್ ಸಿನ್ಹಾ ವಾಗ್ದಾಳಿ ನಡೆಸಿದರು.

ಯಶವಂತ್ ಸಿನ್ಹಾ ಸಹಿತ ಹಲವು ಹಿರಿಯ ಬಿಜೆಪಿ ನಾಯಕರನ್ನು ಮೂಲೆ ಗುಂಪು ಮಾಡಿ `ಮಾರ್ಗದರ್ಶಕ ಮಂಡಳಿ’ಯ ಸದಸ್ಯರನ್ನಾಗಿ ನೇಮಿಸಿದ್ದಾರೆ ಎನ್ನುವ ಆರೋಪ ಮೋದಿ ಮೇಲಿದೆ. ಸಿನ್ಹಾ ಅವರು ಮಾರ್ಗದರ್ಶಕ ಮಂಡಳಿಯನ್ನು ಆನೇಕ ಬಾರಿ ಲೇವಡಿ ಮಾಡಿ ಮಾತನಾಡಿದ್ದರು. ಈ ಹಿಂದೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು 1 ವರ್ಷದ ಹಿಂದೆಯೇ ನಾನು ಸಮಯವನ್ನು ಕೇಳಿದ್ದೆ, ಆದರೆ ಇದೂವರೆಗೂ ನನಗೆ ಭೇಟಿಯಾಗಲು ಸಮಯವನ್ನು ನೀಡಿಲ್ಲ ಎಂದು ಯಶವಂತ್ ಸಿನ್ಹಾ ವಾಗ್ದಾಳಿ ನಡೆಸಿದ್ದರು. ಈ ವರ್ಷದ ಏಪ್ರಿಲ್ ನಲ್ಲಿ ಬಿಜೆಪಿಯನ್ನು ಯಶ್‍ವಂತ್ ಸಿನ್ಹಾ ತೊರೆದಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Amit shaMake in Indiapm narendra modiPublic TVRafale dealYashwant Sinhaಅಮಿತ್ ಶಾಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿಜೆಪಿಮೇಕ್ ಇನ್ ಇಂಡಿಯಾಯಶ್ವಂತ್ ಸಿನ್ಹಾ
Share This Article
Facebook Whatsapp Whatsapp Telegram

Cinema news

Dileep Chinmayi Sripada
ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ
Cinema Latest Top Stories
Suri Annas Nee Nanna Devi song release 2
ಸೂರಿ ಅಣ್ಣನ ನೀ ನನ್ನ ದೇವತೆ ಸಾಂಗ್ ರಿಲೀಸ್
Cinema Latest Sandalwood
Alpha Movie
ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Cinema Latest Sandalwood Top Stories
javara movie
ದುನಿಯಾ ವಿಜಯ್ ಮಗಳ ಹೊಸ ಚಿತ್ರಕ್ಕೆ ಮುಹೂರ್ತ: ರಿಷಿ ನಾಯಕ
Cinema Latest Sandalwood Top Stories

You Might Also Like

Byrathi Suresh
Belgaum

ಸಿಎ ಸೈಟ್‌ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ; 5 ವರ್ಷಕ್ಕೆ ಹೆಚ್ಚಿಸುವ ಭರವಸೆ

Public TV
By Public TV
11 minutes ago
Priyank Kharge 1
Districts

2023ರ ಚುನಾವಣೆ ವೇಳೆ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ – ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ನೋಟಿಸ್

Public TV
By Public TV
21 minutes ago
Starlink
Latest

ಭಾರತಕ್ಕೆ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ – ತಿಂಗಳಿಗೆ 8,600 ರೂ. ಪ್ಯಾಕ್‌ ಬಿಡುಗಡೆ

Public TV
By Public TV
40 minutes ago
PM Modi 1
Latest

ರಾಷ್ಟ್ರವನ್ನು ಒಗ್ಗೂಡಿಸಿದ್ದರಿಂದ ಜನರು ವಂದೇ ಮಾತರಂಗೆ ಋಣಿಯಾಗಿರಬೇಕು: ಮೋದಿ

Public TV
By Public TV
46 minutes ago
Suryakumar Yadav
Cricket

ಸಾಕಷ್ಟು ಅವಕಾಶ ಕೊಟ್ಟಿದ್ದೇವೆ, ಯಾವ್ದೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡೋಕೆ ರೆಡಿ ಇರ್ಬೇಕು: ಸಂಜು ಬಗ್ಗೆ ಸೂರ್ಯ ಮಾತು

Public TV
By Public TV
1 hour ago
Basavaraj Horatti Nagaraj Yadav
Belgaum

ಸಭಾಪತಿ ಹೊರಟ್ಟಿ ವಿರುದ್ಧ ನಾಗರಾಜ್ ಯಾದವ್ ನೇಮಕಾತಿ ಅಕ್ರಮ ಆರೋಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?