Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಯಾರಿಗೂ ಬರಬಾರದು ಅಂತ ಗೇಟ್ ಹಾಕಿಲ್ಲ – ಸುದೀಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಾವು ಯಾರಿಗೂ ಬರಬಾರದು ಅಂತ ಗೇಟ್ ಹಾಕಿಲ್ಲ – ಸುದೀಪ್

Cinema

ನಾವು ಯಾರಿಗೂ ಬರಬಾರದು ಅಂತ ಗೇಟ್ ಹಾಕಿಲ್ಲ – ಸುದೀಪ್

Public TV
Last updated: September 1, 2018 10:06 pm
Public TV
Share
3 Min Read
Darshan Sudeep 1
SHARE

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ಗಳು ಸೇರಿ ಆರಂಭಿಸಿರುವ ಕರ್ನಾಟಕ ಚಲನಚಿತ್ರ ಕಪ್ ಕ್ರಿಕೆಟ್ ಲೀಗ್ (ಕೆಸಿಸಿ)ನಿಂದ ನಟ ದರ್ಶನ್ ದೂರವೇ ಉಳಿದಿದ್ದು, ಸದ್ಯ ಈ ಕುರಿತು ಪ್ರತಿಕ್ರಿಯೆ ನೀಡಿರುವ ನಟ ಕಿಚ್ಚ ಸುದೀಪ್ ನಾವು ಯಾರಿಗೂ ಬರಬಾರದು ಎಂದು ಗೇಟ್ ಹಾಕಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಸತತವಾಗಿ 2ನೇ ಬಾರಿಗೆ ಆಯೋಜನೆಗೊಳ್ಳುತ್ತಿರುವ ಕೆಸಿಸಿ ಟೂರ್ನಿಯ ಸುದ್ದಿಗೋಷ್ಠಿ ಇಂದು ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ನಡೆಯಿತು. ನಟರಾದ ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ದೊಡ್ಡಣ್ಣ ಸೇರಿದಂತೆ ಹಲವು ಸ್ಟಾರ್ ಗಳು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸುದೀಪ್, ಕಳೆದ ಬಾರಿ ಕೆಸಿಸಿ ಆರಂಭಿಸಿದಾಗ ಎಲ್ಲಾ ಕಡೆಯಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಹೀಗಾಗಿ ಎರಡನೇ ಪ್ರಯತ್ನಕ್ಕೆ ಕೈ ಹಾಕಿದ್ದೇವೆ. ಇತಿಹಾಸದಲ್ಲೇ ಇಂತಹ ಒಂದು ಪ್ರಯತ್ನ ಮೊದಲ ಬಾರಿಗೆ ನಡೆಯುತ್ತಿದೆ ಎಂದು ಹರ್ಷವ್ಯಕ್ತಪಡಿಸಿದರು.

SUDEEP KCC

ಈ ವೇಳೆ ನಟ ದರ್ಶನ್ ಕೆಸಿಸಿ ಟೂರ್ನಿಯಲ್ಲಿ ಭಾಗವಹಿಸದ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸುದೀಪ್, ಅವರು ಬರಬಾರದು ಅಂತ ಯಾರು ತಡೆದಿಲ್ಲ. ಸಮಸ್ಯೆ ಎಲ್ಲಿ ಆಗಿದೆಯೋ ಅಲ್ಲೇ ಪರಿಹಾರ ಆಗಬೇಕು. ನಾವು ಯಾರಿಗೂ ಬರಬಾರದು ಅಂತ ಗೇಟ್ ಹಾಕಿಲ್ಲ. ಇದು ಒಳ್ಳೆ ವಿಚಾರಕ್ಕಾಗಿ ಆಡುತ್ತಿರುವ ಪಂದ್ಯಾವಳಿ ಎಂದು ತಿಳಿಸಿದರು.

ಟೂರ್ನಿಗೆ 6 ಅಂತರಾಷ್ಟ್ರೀಯ ಆಟಗಾರರು ಆಹ್ವಾನ ನೀಡಿ ಕಷ್ಟಪಟ್ಟು ಕರೆತಂದಿದ್ದೇವೆ. ಕನ್ನಡ ಚಿತ್ರರಂಗ ಇದಕ್ಕೆ ಸಾಕ್ಷಿಯಾಗಿದ್ದು, ಇಂತಹ ಒಂದು ಯೋಚನೆ ನನ್ನಿಂದ ಆರಂಭವಾದರೂ ಚಿತ್ರರಂಗದವರು ಇದನ್ನು ಬೆಳೆಸಲು ಸಹಾಯ ಮಾಡಿದ್ದಾರೆ. ಇಂದು ಕೆಸಿಸಿ ದೊಡ್ಡದಾಗಿ ಬೆಳೆದಿದ್ದು, ದೊಡ್ಡ ದೊಡ್ಡ ಪ್ರಯೋಜಕರು ನಮ್ಮೊಂದಿಗಿದ್ದಾರೆ. ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

vlcsnap 2018 09 01 21h40m54s186

ಕೆಸಿಸಿ ಕುರಿತು ಈಗಾಗಲೇ ಅಂತರ್ಜಾಲದಲ್ಲಿ ಬಗ್ಗೆ ಮಾಹಿತಿ ಹೊರಬಿಟ್ಟಿದ್ದೇವೆ. ಇದೇ ತಿಂಗಳ 8 ಮತ್ತು 9 ರಂದು ಕೆಸಿಸಿ ಟೂರ್ನಿ ನಡೆಯಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದ ವೇಳೆ ಅರ್ಬಾಜ್ ಖಾನ್, ಸೊಹೈಲ್ ಖಾನ್, ಸುನಿಲ್ ಶೆಟ್ಟಿ, ಧನುಷ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಇದೇ 8 ರಂದು ಕೆಸಿಸಿ 2ನೇ ಟೂರ್ನಿ ಉದ್ಘಾಟನೆಯಾಗಲಿದೆ. ಮೊದಲ ದಿನ 4 ಪಂದ್ಯಗಳು ಹಾಗೂ 2ನೇ ದಿನ 2 ತಂಡಗಳ ಸ್ಪರ್ಧೆ ನಡೆಯಲಿದೆ ಎಂದು ವಿವರಿಸಿದರು.

ಕೆಸಿಸಿ ಟೂರ್ನಿಯ ಪಂದ್ಯಗಳ ಟಿಕೆಟ್ ಸೋಮವಾರದಿಂದ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಇದೇ 5 ರಿಂದ ಎಲ್ಲಾ ಅಂತರಾಷ್ಟ್ರೀಯ ಆಟಗಾರರು ಆಗಮಿಸುತ್ತಿದ್ದು ಅವರೊಂದಿಗೆ ಎಲ್ಲರೂ ಅಭ್ಯಾಸ ಮಾಡಲಿದ್ದೇವೆ. ಟೂರ್ನಿಗೆ ಸಹಕಾರ ನೀಡಿದ ಎಲ್ಲಾ ಆಟಗಾರರು, ನಿರ್ಮಾಪಕರ ಸಂಘ, ನಿರ್ದೇಶಕ ಸಂಘ ಸೇರಿದಂತೆ ಎಲ್ಲಾ ಕಲಾವಿದರು, ತಂತ್ರಜ್ಞಾನರಿಗೂ ಧನ್ಯವಾದ ಎಂದರು.

ಕೊಡಗು ಸಂತ್ರಸ್ತರಿಗೆ ಸಹಾಯ: ಕೆಸಿಸಿ 2ನೇ ಆವೃತ್ತಿಯಿಂದ ಬರುವ ಲಾಭವನ್ನು ಕೊಡಗು ಸಂತ್ರಸ್ತರಿಗೆ ಕೊಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಸುದೀಪ್, ನಿರಾಶ್ರಿತರಿಗೆ ಸಹಾಯ ಮಾಡುವುದು ಖಚಿತ ಎಂದರು. ಆದರೆ ಎಷ್ಟು ಹಣ ಕೊಡುತ್ತಾರೆ ಎಂಬುವುದನ್ನು ಸ್ಪಷ್ಟಪಡಿಸಲಿಲ್ಲ.

SHIVARAJKUMAR KCC

ಈ ವೇಳೆ ಮಾತನಾಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನನಗೆ ಕ್ರಿಕೆಟ್ ಅಂದ್ರೆ ಬಹಳ ಇಷ್ಟ. ನಾನು ಒಬ್ಬ ಕ್ರಿಕೆಟ್ ಅಭಿಮಾನಿಯಾಗಿ ಕೆಸಿಸಿ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದೇನೆ. ನನ್ನ ನೆಚ್ಚಿನ ಕ್ರಿಕೆಟರ್ ಜಿ. ಆರ್ ವಿಶ್ವನಾಥ್. ನಾನು ಚಿಕ್ಕಂದಿನಿಂದಲೂ ಅವರ ಅಭಿಮಾನಿ. ಚೆನ್ನೈನಲ್ಲಿ ಇದ್ದಾಗಲೂ ಬೆಂಗಳೂರು, ಮುಂಬೈಗೆ ಬಂದು ಕ್ರಿಕೆಟ್ ನೋಡುತ್ತಿದ್ದೆ. ಕಳೆದ ಬಾರಿ ಎರಡು ದಿನ ಅಭ್ಯಾಸ ಮಾಡಿ ಟೂರ್ನಿಯಲ್ಲಿ ಭಾಗವಹಿದ್ದೆ. ಆದರೆ ಈ ಬಾರಿ ಹೆಚ್ಚಿನ ಅಭ್ಯಾಸ ನಡೆಸಿ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಟೂರ್ನಿಯ ರೂವರಿ ಸುದೀಪ್ ಗೆ ಜೊತೆ ನಾವೆಲ್ಲರೂ ಇದ್ದೇವೆ, ಅವರು ಎಲ್ಲೆ ಕರೆದರೂ ಒಗ್ಗಟ್ಟಾಗಿ ಹೋಗಿ ಆಡುತ್ತೇವೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

A small 10 days break for me from pailwaan to attend to KCC. It was a lovely schedule @krisshdop my friend n @stuntravivarma, njoyed every bit.Thank u for a wonderful hospitality n warmth.
It’s KCC time now n time to get back wth my friends n co stars n Gather some fond memories.

— Kichcha Sudeepa (@KicchaSudeep) September 1, 2018

TAGGED:bengalurucinemaCricket TournamentdarshanKCCPublic TVshivaraj kumarsudeepಕೆಸಿಸಿಕ್ರಿಕೆಟ್ ಟೂರ್ನಿದರ್ಶನ್ಪಬ್ಲಿಕ್ ಟಿವಿಬೆಂಗಳೂರುಶಿವರಾಜ್ ಕುಮಾರ್ಸಿನಿಮಾಸುದೀಪ್
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
1 hour ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
1 hour ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
2 hours ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
2 hours ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
3 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?