Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ದೇವಾಲಯದ ಕೋಟ್ಯಾಂತರ ರೂ. ಆಭರಣ ಎಗರಿಸಲು ಸ್ಕೆಚ್-ಕೇಳಿದ್ರೆ ಅಚ್ಚರ್ಯ ಪಡ್ತಿರಾ!

Public TV
Last updated: September 2, 2018 5:16 pm
Public TV
Share
2 Min Read
HBL TEAMPLE
SHARE

ಹುಬ್ಬಳ್ಳಿ: ದೇವಸ್ಥಾನದ ಆಭರಣಗಳ ಮೇಲೆ ಕಣ್ಣು ಹಾಕಿದ್ದ ದುಷ್ಕರ್ಮಿಗಳ ತಂಡ ಮನೆಯಿಂದ ದೇವಸ್ಥಾನಕ್ಕೆ ಸುರಂಗ ಮಾರ್ಗ ತೆಗೆಯುತ್ತಿದ್ದ ಘಟನೆ ಹುಬ್ಬಳ್ಳಿಯ ಕರ್ಕಿ ಬಸವೇಶ್ವರ ನಗರದಲ್ಲಿ ನಡೆದಿದೆ.

ನಗರದ ಹುಲಿಗೆಮ್ಮ ದೇವಸ್ಥಾನದಲ್ಲಿ ದೇವಿಗೆ ಅಲಂಕಾರ ಮಾಡಿರುವ ಆಭರಣಗಳನ್ನು ಕಳ್ಳತನ ಮಾಡಲು ಹಾವೇರಿ ಜಿಲ್ಲೆಯ ಬ್ಯಾಡಗಿ ಮೂಲದ ಬಸವರಾಜ ಮಾಸನಗಿ ಸ್ವಾಮೀಜಿ ಕೃತ್ಯ ಎಸಗಿದ್ದಾನೆ.

HBL TEAMPLE 1

ಸಿಕ್ಕಿಬಿದ್ದಿದ್ದು ಹೇಗೆ:
ದೇವಾಲಯ ಇರುವ ಕರ್ಕಿ ಬಸವೇಶ್ವರ ನಿವಾಸಿಯಾದ ಮಾರುತಿ ಉಮಚಗಿ ಎಂಬಾತನೊಂದಿಗೆ ಸೇರಿ ಬಸವರಾಜ ದೇವಸ್ಥಾನಕ್ಕೆ ಕನ್ನ ಹಾಕಲು ಯತ್ನಿಸಿದ್ದು, ಇದಕ್ಕಾಗಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಮಾರುತಿ ಉಮಚಗಿ ಮನೆಯಲ್ಲಿ ಕಳೆದ ವಾರ ಪೂಜೆ ಪುರಸ್ಕಾರ ಮಾಡಿ ಶನಿವಾರ ರಾತ್ರಿ ಸುರಂಗ ಮಾರ್ಗ ತೆಗೆಯುವ ಕೆಲಸ ಆರಂಭಿಸಿದ್ದಾನೆ. ಆದರೆ ಸುರಂಗ ಮಾರ್ಗ ತೆಗೆಯುವಾಗ ಮನೆಯಿಂದ ಶಬ್ಧ ಕೇಳಿ ಬಂದಿದ್ದು, ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹುಲಗೆಮ್ಮ ದೇವಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ವಜ್ರದ ನತ್ತು, ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ನೀಡಲಾಗಿದ್ದು, ಮನೆಯಿಂದ ಸುರಂಗ ಮಾರ್ಗ ತೆಗೆದು ನೇರವಾಗಿ ದೇವಸ್ಥಾನದ ಗರ್ಭಗುಡಿಗೆ ಸಂಪರ್ಕ ಕಲ್ಪಿಸಲು ಆರೋಪಿಗಳು ಯತ್ನಿಸಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಬೆಂಡಿಗೇರಿ ಪೊಲೀಸರು ದಾಳಿ ಮಾಡಿ ಕೃತ್ಯದಲ್ಲಿ ಭಾಗಿಯಾಗಿದ್ದ ರಾಜು ಜೋಳದ, ಮಲೇಶಪ್ಪ ಹರಿಜನ, ಶ್ರೀಕಾಂತ್ ಹುಟ್ಟನ್ನವರ, ಮದನಗೌಡ ಮದಿಗೌಡರ, ಯಲ್ಲಪ್ಪ ಹಳಗಟ್ಟಿ ಹಾಗೂ ಮನೆ ಮಾಲೀಕ ಮಾರುತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಂದಹಾಗೇ ದೇವಿಯ ಆಭರಣ ಕಳ್ಳತನ ಮಾಡಲು ಆರೋಪಿ ಬಸವರಾಜ ಸ್ವಾಮೀಜಿ, ಮಾರುತಿ ಉಮಚಗಿಯಿಂದ 21 ಸಾವಿರ ರೂ. ಹಣ ಪಡೆದು ಪೂಜೆ ಸಲ್ಲಿಸಿದ್ದಾನೆ. ಬಳಿಕ ತನ್ನ ಶಿಷ್ಯರ ಮೂಲಕ ದೇವಿಯ ಆಭರಣ ಕಳ್ಳತನ ಮಾಡಲು ಸುರಂಗ ತೆಗೆಯಲು ಮುಂದಾಗಿದ್ದ ಎಂಬ ಮಾಹಿತಿ ಲಭಿಸಿದೆ.

ಬಂಧಿತರೆಲ್ಲರು ಹಾವೇರಿ ಮೂಲದವರಾಗಿದ್ದು, ಸದ್ಯ ಕೃತ್ಯಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ್ದ ಬಸವರಾಜ ಸ್ವಾಮೀಜಿ ನಾಪತ್ತೆಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇನ್ನು ಮನೆ ಮೇಲೆ ದಾಳಿ ನಡೆಸಿದ ವೇಳೆ ಕೃತ್ಯಕ್ಕೆ ಬಳಕೆ ಮಾಡಿದ್ದ ಲೋಹ ಶೋಧಕ ಯಂತ್ರ ಸೇರಿದಂತೆ ಸುರಂಗ ನಿರ್ಮಿಸಿಲು ಬಳಸಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

HBL TEAMPLE 2

TAGGED:househubballiJewelrypolicePublic TVtemplethefttunnelಆಭರಣಕಳ್ಳತನದೇವಾಲಯಪಬ್ಲಿಕ್ ಟಿವಿಪೊಲೀಸ್ಮನೆಸುರಂಗ ಮಾರ್ಗಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema Updates

India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
50 minutes ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
3 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
19 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago

You Might Also Like

vidyapeeta
Bengaluru City

ನಾಳೆಯಿಂದ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠ’

Public TV
By Public TV
3 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್

Public TV
By Public TV
10 minutes ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
11 minutes ago
Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
49 minutes ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
1 hour ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?