ಕರ್ನಾಟಕ ಕಾಂಗ್ರೆಸ್‍ನ ಮತ್ತೊಂದು ಎಟಿಎಂ-ಕೆಜಿ ಲೆಕ್ಕದಲ್ಲಿ ಹವಾಲ ಹಣ ರವಾನೆ: ಸಂಬಿತ್ ಪಾತ್ರ

Public TV
1 Min Read
Sambit Patra DK Shivakumar

ನವದೆಹಲಿ: ಸಮ್ಮಿಸ್ರ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಇಡಿ ಎಫ್‍ಐಆರ್ ದಾಖಲಿಸುತ್ತಿದಂತೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾಂಗ್ರೆಸ್ ವಿರುದ್ಧ ಹವಾಲ ಹಣ ದಂಧೆ ಆರೋಪ ಮಾಡಿದೆ.

ದೆಹಲಿಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಎಟಿಎಂ ಆಗಿದ್ದು, ಎಐಸಿಸಿ ಹೈಕಮಾಂಡ್‍ಗೆ ಹವಾಲ ಮೂಲಕ ಸಂಗ್ರಹಣೆ ಮಾಡಿದ್ದ 600 ಕೋಟಿ ರೂ. ರವಾನೆ ಮಾಡಲಾಗಿದೆ. ಭ್ರಷ್ಟಾಚಾರ ಹಾಗೂ ಹವಾಲ ಹಣ ಕಾಂಗ್ರೆಸ್ ಪಕ್ಷಕ್ಕೆ ಆಧಾರವಾಗಿದೆ ಎಂದು ಆರೋಪ ಮಾಡಿದ್ದಾರೆ.

ಇದೇ ವೇಳೆ ದೆಹಲಿ ಅಪಾರ್ಟ್‍ಮೆಂಟ್‍ನಿಂದ 8 ಕೋಟಿ ರೂ. ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಎಫ್‍ಐಆರ್ ದಾಖಲಿಸಿದ್ದನ್ನು ಪ್ರಸ್ತಾಪಿಸಿದ ಅವರು, ಕೆಜಿ ಲೆಕ್ಕದಲ್ಲಿ ಕಾಂಗ್ರೆಸ್ ಹೈಕಮಾಂಡ್‍ಗೆ ಹಣ ರವಾನೆ ಮಾಡಲಾಗಿದೆ ಎಂದು ಆರೋಪಿಸಿದರು.

ಮೂಲಗಳ ಮಾಹಿತಿ ಅನ್ವಯ ಹವಾಲ ಹಣವನ್ನು ಮೊದಲು ದೆಹಲಿಗೆ ವರ್ಗಾವಣೆ ಮಾಡಲಾಗಿದ್ದು, ಬಳಿಕ ಮಂತ್ರಿಗಳಿಗೆ ನೀಡಲಾಗಿದೆ. ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಚಾಲಕ ಐಟಿ ಇಲಾಖೆ ಎದುರು ಎಐಸಿಸಿಗೆ ಕೆಜಿ ಲೆಕ್ಕದಲ್ಲಿ ಹಣ ನೀಡಿರುವ ಕುರಿತು ಹೇಳಿಕೆ ನೀಡಿದ್ದಾರೆ. ನೋಟು ನಿಷೇಧದ ವೇಳೆ ಕಾಂಗ್ರೆಸ್ ಏಕೆ ಭಾರೀ ಪ್ರತಿಭಟನೆ ಮಾಡಿತ್ತು ಎನ್ನುವುದು ಈಗ ತಿಳಿಯುತ್ತಿದೆ ಎಂದು ವ್ಯಂಗ್ಯವಾಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *