ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ 137 ಸಾರ್ವಜನಿಕ ಗಣೇಶ ವಿಗ್ರಹ ವಿಸರ್ಜನೆ

Public TV
1 Min Read
hbl ganesha collage

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ 137 ಸಾರ್ವಜನಿಕ ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು.

ಗಣೇಶ ಪ್ರತಿಷ್ಠಾಪಿಸಿ 11ನೇ ದಿನವಾದ ಭಾನುವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಗಣೇಶ ವಿಗ್ರಹಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು. ಹುಬ್ಬಳ್ಳಿಯ 137 ಗಣಪತಿಗಳನ್ನು ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಬಾವಿ ಹಾಗೂ ಹಳೇಹುಬ್ಬಳ್ಳಿ ಶ್ರೀನಗರದ ಕಪಿಲಾ ಭಾವಿಯಲ್ಲಿ ವಿಸರ್ಜನೆ ಮಾಡಲಾಯಿತು.

ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಶಾಂತಿಯುತವಾಗಿ ಗಣೇಶನಿಗೆ ವಿದಾಯ ಹೇಳಲಾಯಿತು.

hbl ganesha 1

ಮತ್ತೊಂದೆಡೆ ಬಮ್ಮಾಪುರ ಏಣಿಯಲ್ಲಿ ಒಂದೇ ವೇದಿಕೆಯಲ್ಲಿ ಗಣೇಶ ಮೂರ್ತಿ ಹಾಗೂ ಪಾಂಚಾ (ಮೊಹರಂ ಹಬ್ಬದಲ್ಲಿ ಪ್ರತಿಷ್ಠಾಪನೆ ಮಾಡುವ ಮುಸ್ಲಿಂ ದೇವರು) ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಂರು ಏಕತೆಯನ್ನು ಸಾರಿದ್ದರು. ವಿಘ್ನೇಶ್ವರ ಉತ್ಸವ ಸಮಿತಿ ಹಾಗೂ ಸೈಯದ್ ಸಾದಾತ್ ಜಮಾತ ವತಿಯಿಂದ ಆಚರಣೆ ಮಾಡಿದ್ದಾರೆ. 36 ವರ್ಷಗಳ ಹಿಂದೆ ಗಣೇಶೋತ್ಸವ ಹಾಗೂ ಮೊಹರಂ ಹಬ್ಬ ಏಕಕಾಲದಲ್ಲಿ ಬಂದಾಗ, ಇದೇ ರೀತಿಯಲ್ಲಿ ಹಬ್ಬ ಆಚರಣೆ ಮಾಡಲಾಗಿತ್ತು. ಆದಾದ ನಂತರ ಈ ಬಾರಿ ಗಣೇಶೋತ್ಸವ ಹಾಗೂ ಮೊಹರಂ ಏಕ ಕಾಲದಲ್ಲಿ ಬಂದಿರೋದರಿಂದ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ ಎಂದು ವಿಘ್ನೇಶ್ವರ ಉತ್ಸವ ಸಮಿತಿಯವರು ಹೇಳಿದ್ದರು.

ಅಂದಹಾಗೆ ಮುಂಜಾನೆ ಹಾಗೂ ಸಂಜೆ ಹಿಂದೂ ಹಾಗೂ ಮುಸ್ಲಿಂ ಸಂಪ್ರದಾಯಗಳ ಪ್ರಕಾರ ಪೂಜೆ ಪುರಸ್ಕಾರಗಳು ನಡೆಯಿತು. ಗಣೇಶನನ್ನು ನೋಡಲು ಬಂದವರು ಪಾಂಚಾ ದೇವರ ದರ್ಶನ ಪಡೆಯುತ್ತಾರೆ ಹಾಗೇ ಪಾಂಚಾ ದೇವರ ದರ್ಶನಕ್ಕೆ ಬಂದವರು ಗಣೇಶ ದರ್ಶನ ಪಡೆದರು. ಎರಡು ಹಬ್ಬಗಳು ಏಕಕಾಲದಲ್ಲಿ ಬಂದಿರುವುದು ಎರಡು ಸಮುದಾಯದ ಜನರ ಸಂಭ್ರಮ ಇಮ್ಮಡಿಗೊಳಿಸಿತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *