ನಡು ರಸ್ತೆಯಲ್ಲಿ ಪೊಲೀಸರ ಎದುರೇ ವ್ಯಕ್ತಿಯನ್ನು ಕೊಚ್ಚಿ ಕೊಚ್ಚಿ ಕೊಂದ ದುಷ್ಕರ್ಮಿ!

Public TV
1 Min Read
Hyderabad Murder

ಹೈದರಾಬಾದ್: ದಟ್ಟ ಸಂಚಾರದ ರಸ್ತೆಯಲ್ಲಿ ಪೊಲೀಸರ ಎದುರೇ ವ್ಯಕ್ತಿಯನ್ನು ದುಷ್ಕರ್ಮಿಯೊಬ್ಬ ಮಚ್ಚಿನಿಂದ ಕೊಚ್ಚಿ, ಕೊಚ್ಚಿ ಕೊಲೆ ಮಾಡಿದ ಅಮಾನವೀಯ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

ರಮೇಶ್ (30) ಕೊಲೆಯಾದ ದುರ್ದೈವಿ. ಈ ಹಿಂದೆ ರಮೇಶ್, ಮಹೇಶ್ ಗೌಡ ಎಂಬವರನ್ನು ಕೊಲೆ ಮಾಡಿದ್ದ. ಹೀಗಾಗಿ ಇಂದು ವಿಚಾರಣೆಗೆಂದು ಕೋರ್ಟ್ ಗೆ ಹಾಜರಾಗಲು ಹೊರಟಿದ್ದ. ಈ ವೇಳೆ ದಾಳಿ ಮಾಡಿದ ದುಷ್ಕರ್ಮಿಯೊಬ್ಬ ರಮೇಶ್‍ನನ್ನು ವಾಹನ ಸಂಚಾರವನ್ನು ಲೆಕ್ಕಿಸದೆ ರಸ್ತೆಯಲ್ಲಿಯೇ ಮಚ್ಚಿನಿಂದ ಕೊಚ್ಚಿ, ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತಾನೆ ಪೊಲೀಸರಿಗೆ ಶರಣಾಗಿದ್ದಾನೆ.

ಈ ವೇಳೆ ಸ್ಥಳದಲ್ಲಿಯೇ ಇದ್ದ ಕೆಲವರು ಹಲ್ಲೆಯನ್ನು ತಡೆಯಲು ಯತ್ನಿಸಿ ವಿಫಲರಾಗಿದ್ದಾರೆ. ಈ ದೃಶ್ಯವನ್ನು ಕೆಲವರು ತಮ್ಮ ಮೊಬೈನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣ ಹರಿಬಿಟ್ಟಿದ್ದಾರೆ. ಸದ್ಯ ವಿಡಿಯೋ ಭಾರೀ ವೈರಲ್ ಆಗಿದೆ.

ವಿಡಿಯೋದಲ್ಲಿ ಏನಿದೆ?
ವಾಹನ ಸಂಚಾರ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರೂ ಲೆಕ್ಕಿಸದ ದುಷ್ಕರ್ಮಿಯೊಬ್ಬ ರಮೇಶ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡುವ ವೇಳೆ ಆತನ ಪಕ್ಕದಲ್ಲಿಯೇ ಪೊಲೀಸ್ ವಾಹನ ಹೋಗುತ್ತಿದ್ದರೂ ಲೆಕ್ಕಿಸದೇ ಕೃತ್ಯ ಎಸಗಿದ್ದಾನೆ. ಘಟನಾ ಸ್ಥಳದಲ್ಲಿ ಸೇರಿದ್ದ ಜನರು ಎಷ್ಟೇ ಕೂಗಿದರೂ ಲೆಕ್ಕಿಸದೇ ವ್ಯಕ್ತಿ ನಡು ರಸ್ತೆಯಲ್ಲಿಯೇ ಮಚ್ಚಿನಿಂದ ಹಲ್ಲೆ ಮಾಡುತ್ತಾನೆ.

ರಮೇಶ್‍ನನ್ನು ರಕ್ಷಿಸಲು ಪ್ರಯತ್ನಿಸಿದ ವ್ಯಕ್ತಿಯೊಬ್ಬ ಕೊಲೆಗಡುಕನನ್ನು ಒದೆಯುತ್ತಾನೆ. ಆದರೆ ಕೆಳಗೆ ಬಿದ್ದ ಆತ ಮತ್ತೇ ಎದ್ದು ನಿಂತು ಹಲ್ಲೆಯನ್ನು ಮುಂದುವರಿಸುತ್ತಾನೆ. ಈ ವೇಳೆ ಸ್ಥಳದಲ್ಲಿಯೇ ಇದ್ದ ಪೊಲೀಸ್ ಪೇದೆ ಕೂಡಾ ಕೃತ್ಯ ತಡೆಯಲು ವಿಫಲರಾಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Share This Article
Leave a Comment

Leave a Reply

Your email address will not be published. Required fields are marked *