ಬೆಳಗಾವಿ: ಮಾಲೀಕನ ಗಮನ ಬೇರೆಡೆ ಸೆಳೆದು ಹಾಡಹಗಲೇ ಚಿನ್ನದಂಗಡಿಗೆ ಕನ್ನ ಹಾಕಿರುವ ಘಟನೆ ಬೆಳಗಾವಿಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.
ಮಾಲೀಕ ಆನಂದಪಟ್ಟಣ ಗೆ ಸೇರಿದ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಅಗಂಡಿಗೆ ಎರಡು ಬಾಗಿಲುಗಳಿದ್ದು, ಆನಂದ ಅಂಗಡಿಯ ಮುಖ್ಯ ಬಾಗಿಲನ್ನು ತೆರೆದಿದ್ದಾರೆ. ಬಳಿಕ ಇನ್ನೊಂದು ಬಾಗಿಲ ಬೀಗ ತೆಗೆಯಲು ಕೀಲಿ ಕೈಯನ್ನು ತೆಗೆದುಕೊಂಡು ಹೋದ ವೇಳೆ ಅಂಗಡಿ ಒಳಗೆ ಬಂದ ಕಳ್ಳ ಚೇರ್ ಮೇಲೆ ಇಟ್ಟಿದ್ದ 25 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ಬ್ಯಾಗ್ ಅನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ.
ಹಣ ದೋಚುವ ಮುನ್ನ ಕಳ್ಳ ಇನ್ನೊಂದು ಬಾಗಿಲ ಬೀಗ ಬೇಗ ಓಪನ್ ಆಗಬಾರದೆಂದು ಫೆವಿಕ್ವಿಕ್ ಹಾಕಿದ್ದನು. ಕಳ್ಳನ ಕೈಚಳಕದ ದೃಶ್ಯಗಳು ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಈ ಘಟನೆ ಸಂಬಂಧಪಟ್ಟಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=-aGpe5Gv4LI