Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತಿಗೆ Good Night ಮೆಸೇಜ್ ಮಾಡಿ ನೇಣಿಗೆ ಶರಣಾದ ಗೃಹಿಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪತಿಗೆ Good Night ಮೆಸೇಜ್ ಮಾಡಿ ನೇಣಿಗೆ ಶರಣಾದ ಗೃಹಿಣಿ

Districts

ಪತಿಗೆ Good Night ಮೆಸೇಜ್ ಮಾಡಿ ನೇಣಿಗೆ ಶರಣಾದ ಗೃಹಿಣಿ

Public TV
Last updated: September 30, 2018 4:16 pm
Public TV
Share
2 Min Read
GLB SUICIDE copy
SHARE

ಕಲಬುರಗಿ: ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸಂಧ್ಯಾರಾಣಿ ಮೃತ ಗೃಹಿಣಿ. ಈಕೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೊಣಗಾಂವ್ ಗ್ರಾಮದವರಾಗಿದ್ದು, 2017 ರಲ್ಲಿ ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದ ವಿನಯ್ ಜೊತೆ ಮದುವೆಯಾಗಿತ್ತು. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ ಇಪ್ಪತ್ತು ತೊಲ ಚಿನ್ನ, ಲಕ್ಷಾಂತರ ರೂಪಾಯಿ ಹಣ ನೀಡಿ ಅದ್ಧೂರಿಯಾಗಿ ವಿವಾಹವನ್ನ ಮಾಡಿಕೊಡಲಾಗಿತ್ತು.

ಬೆಂಗಳೂರಿನ ಕಂಪನಿಯೊಂದರಲ್ಲಿ ಒಳ್ಳೆಯ ಕೆಲಸವಿದೆ ಅಂತ ನಂಬಿಸಿ ಸಂಧ್ಯಾರಾಣಿಯನ್ನ ವರಿಸಿದ್ದನು. ಆದರೆ ಮದುವೆಯ ನಂತರ ಕೆಲವು ದಿನಗಳ ಪತ್ನಿಯೊಂದಿಗೆ ಅನ್ಯೋನ್ಯವಾಗಿದ್ದ ಪತಿ ವಿನಯ್, ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿನ ಕೆಲಸವನ್ನ ಬಿಟ್ಟು ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿ ಪತ್ನಿ ಮತ್ತು ಕುಟುಂಬಸ್ಥರ ಜೊತೆಗೆ ವಾಸ ಮಾಡುತ್ತಾ ಫೋಟೋ ಡಿಸೈನಿಂಗ್ ಕೆಲಸ ಆರಂಭಿಸಿದ್ದನು.

glb

ದಿನ ಕಳೆದಂತೆ ವಿನಯ್ ಕುಡಿತದ ಚಟಕ್ಕೆ ಬಿದ್ದು, ಕಂಠಪೂರ್ತಿ ಕುಡಿದು ಬಂದು ಪತ್ನಿ ಸಂಧ್ಯಾಳಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ಕೊಡಲಾರಂಭಿಸಿದ್ದ. ಅಲ್ಲದೇ ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನ ಕೊಟ್ಟು ಮದುವೆ ಮಾಡಿಕೊಟ್ಟರೂ ಸಹ ಪೋಷಕರ ಜೊತೆಗೂಡಿ ತವರು ಮನೆಯಿಂದ ಮತ್ತಷ್ಟು ವರದಕ್ಷಿಣೆ ತೆಗೆದುಕೊಂಡು ಬಾ ಅಂತ ಹೊಡೆಯುತ್ತಿದ್ದನು. ಆದರೆ ನನ್ನ ಮಗಳು ಇವೆಲ್ಲ ಕಿರುಕುಳ ಸಹಿಸಿಕೊಂಡು ಪತಿಯೇ ಪರದೈವ ಅಂತ ಇದ್ಧಳು. ಆದರೆ ಶನಿವಾರ ರಾತ್ರಿ ನನ್ನ ಮಗಳು ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಮ್ಮ ಮಗಳ ಸಾವಿಗೆ ಪತಿಯ ಮನೆಯವರೇ ಕಾರಣ ಅಂತ ಆಕ್ರೋಶ ವ್ಯಕ್ತಪಡಿಸಿದ್ದು, ಅವರೇ ಕೊಲೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ.

glb 3

ಪತಿ ವಿನಯ್ ಎಂಬಿಎ ಪದವೀಧರನಾಗಿದ್ದು, ಪತ್ನಿ ಸಂಧ್ಯಾ ಕೂಡ ಬಿಸಿಎ ಕಂಪ್ಯೂಟರ್ ಸೈನ್ಸ್ ಮಾಡಿದ್ದಳು. ಪತಿಯ ಮನೆಯವರು ಇಷ್ಟೆಲ್ಲ ಕಿರುಕುಳ ಕೊಡುತ್ತಿದ್ದರು ಸಹ ಸಂಧ್ಯಾರಾಣಿ ತನ್ನ ಪೋಷಕರ ಮುಂದೆ ಬಾಯ್ಬಿಟ್ಟಿರಲಿಲ್ಲ. ಕೆಲವು ದಿನಗಳ ಹಿಂದೆ ನೋವು ತಾಳಲಾರದೇ ತಂದೆ ಧನರಾಜ್ ಬಳಿ ಪತಿಯ ಮನೆಯವರ ಚಿತ್ರಹಿಂಸೆಯ ಬಗ್ಗೆ ಹೇಳಿಕೊಂಡಿದ್ದಳು. ಹೀಗಾಗಿ ತಂದೆ ಶನಿವಾರ ಸಂಜೆಯಷ್ಟೆ ಮಗಳ ಮನೆಗೆ ಬಂದು ಅಳಿಯನ ಜೊತೆ ಸಂಧಾನ ಮಾತುಕತೆ ನಡೆಸಿದ್ದಾರೆ.

ಅಷ್ಟೇ ಅಲ್ಲದೇ ನಿಮಗೆ ಏನು ಬೇಕೋ ಅದನೆಲ್ಲ ಕೊಡುತ್ತೇನೆ ಅಂತ ಹೇಳಿ ನನ್ನ ಮಗಳನ್ನ ಸುಖವಾಗಿ ನೋಡಿಕೊಳ್ಳಿ ಅಂತಾ ಅಂಗಲಾಚಿ ಹೋಗಿದ್ದಾರೆ. ದುರಂತವೆಂದರೇ ತಂದೆ ಬಂದು ಹೋದ ಮಧ್ಯರಾತ್ರಿಯೇ ಸಂಧ್ಯಾರಾಣಿ ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಎಮ್ಬಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಸಂಧ್ಯಾರಾಣಿಯ ಶವವನ್ನ ಮರಣೋತ್ತರ ಪರೀಕ್ಷೆಗೆಂದು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

glb 2

ಪತ್ನಿಯ ಮನೆಯವರ ಕೊಲೆ ಆರೋಪವನ್ನ ನಿರಾಕರಿಸಿರುವ ಪತಿ ವಿನಯ್, ನಾನಾಗಲಿ ಅಥವಾ ನಮ್ಮ ತಂದೆ ತಾಯಿಯಾಗಲಿ ನನ್ನ ಪತ್ನಿಗೆ ಯಾವುದೇ ಕಿರುಕುಳ ಕೊಡುತ್ತಿರಲಿಲ್ಲ. ಅವಳನ್ನ ಹೂವಿನ ಹಾಗೇ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದೇವು. ಕಳೆದ ರಾತ್ರಿ ಇಬ್ಬರು ಒಟ್ಟಿಗೆ ಊಟ ಮಾಡಿ ಅವಳು ರೂಮಿಗೆ ಹೋಗಿ ಮಲಗಿಕೊಂಡಿದ್ದಳು. ನಾನು ಹಾಲ್ ನಲ್ಲಿ ಮಲಗಿಕೊಂಡಿದ್ದೆನು. ಇದೇ ವೇಳೆಯಲ್ಲಿ ಆಕೆ ನನಗೆ ವಾಟ್ಸಪ್ ಮೂಲಕ ಬಾಯ್ ಗುಡ್ ನೈಟ್ ಅಂತ ಮೆಸೇಜ್ ಸಹ ಮಾಡಿದ್ದಾಳೆ. ಆದರೆ ಬೆಳಗಾಗೋದ್ರೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದರ ಬಗ್ಗೆ ನಮಗೆ ಏನು ಗೊತ್ತಿಲ್ಲ ಅಂತ ಹೇಳಿದ್ದಾನೆ.

ಈ ಬಗ್ಗೆ ಎಮ್ಬಿ ನಗರ ಠಾಣೆ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದು, ಪತಿ ವಿನಯ್ ನನ್ನ ವಶಕ್ಕೆ ಪಡೆದು ವಿಚಾರಣೆಯನ್ನ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:deathDowryhospitalkalburgipolicePublic TVsuicideಆತ್ಮಹತ್ಯೆಆಸ್ಪತ್ರೆಕಲಬುರಗಿಪಬ್ಲಿಕ್ ಟಿವಿಪೊಲೀಸ್ವರದಕ್ಷಿಣೆಸಾವು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
12 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
20 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
1 hour ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?