Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ವೈಭವದ ಜೊತೆಗೆ ಜಗ್ಗಣ್ಣನ 8ಎಂಎಂ ಎಂಟ್ರಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಸರಾ ವೈಭವದ ಜೊತೆಗೆ ಜಗ್ಗಣ್ಣನ 8ಎಂಎಂ ಎಂಟ್ರಿ!

Bengaluru City

ದಸರಾ ವೈಭವದ ಜೊತೆಗೆ ಜಗ್ಗಣ್ಣನ 8ಎಂಎಂ ಎಂಟ್ರಿ!

Public TV
Last updated: October 1, 2018 2:44 pm
Public TV
Share
2 Min Read
JAGGESH
SHARE

ಒಂದು ದೊಡ್ಡ ಗ್ಯಾಪಿನ ನಂತರ ನವರಸ ನಾಯಕ ಜಗ್ಗೇಶ್ ನಾಯಕನಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅದೂ ಕೂಡಾ ಭಾರೀ ಬದಲಾವಣೆಯೊಂದಿಗೆ. ಜಗ್ಗೇಶ್ ಅಂದರೆ ಅವರ ವಿಶಿಷ್ಟವಾದ ಮ್ಯಾನರಿಸಂ ನೆನಪಾಗುತ್ತದೆ. ಡೈಲಾಗುಗಳ ಗೊಡವೆಯೇ ಇಲ್ಲದೇ ಬರೀ ಮ್ಯಾನರಿಸಂ ಮೂಲಕವೇ ನಗೆಯುಕ್ಕಿಸಬಲ್ಲ ಜಗ್ಗೇಶ್ ನಗುವಿಗೇ ಹೆಸರಾದವರು. ಹೀಗೆ ಕಾಮಿಡಿ ಪಾತ್ರಗಳಾಚೆಗೆ ಗಂಭೀರವಾದ ತುಡಿತ ಹೊಂದಿದ್ದ ಜಗ್ಗೇಶ್ 8ಎಂಎಂ ಚಿತ್ರದ ನಾಯಕರಾಗಿ ಚಿತ್ರೀಕರಣ ಪೂರೈಸಿಕೊಂಡಿದ್ದಾರೆ. ಈ ಚಿತ್ರದ ಬಿಡುಗಡೆಯ ದಿನಾಂಕವೂ ಬಯಲಾಗಿದೆ.

ದಸರಾ ಮುಗಿದಾಕ್ಷಣವೇ ಈ ಚಿತ್ರ ತೆರೆ ಕಾಣಲಿದೆ. ಅಂದರೆ ಅಕ್ಟೋಬರ್ 26ರಂದು 8 ಎಂಎಂ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಮೂಲಕ ಜಗ್ಗೇಶ್ ಅವರನ್ನು ಹೊಸ ರೂಪದಲ್ಲಿ ನೋಡೋ ದಿನಾಂಕವೂ ನಿಗದಿಯಾದಂತಾಗಿದೆ.

ನಿಮ್ಮ 35ವರ್ಷಗಳ ಪ್ರೀತಿ ಅಭಿಮಾನದಿಂದ ಬೆಳೆದವ ನಾನು ನಿಮ್ಮಗಳ ವಿಭಿನ್ನವಾಗಿ ರಂಜಿಸಲು ಯತ್ನಿಸಿದ #8mm ಚಿತ್ರ ಅಕ್ಟೋಬರ್ 26ಕ್ಕೆ ನಿಮ್ಮಮುಂದೆ..ನನ್ನ ಯಾವ ಹಳೆಛಾಯೇ ನಿರೀಕ್ಷಿಸದೆ ಈ ಚಿತ್ರವೀಕ್ಷಿಸಿ ನಿಮಗೆ ನನ್ನ ಹೊಸಪ್ರಯತ್ನ ಖುಷಿನೀಡುತ್ತದೆ..ಹರಸಿ ಹಾರೈಸಿ..
ನಿಮ್ಮವ
ಜಗ್ಗೇಶ್…. pic.twitter.com/UqJCZ6CrMm

— ನವರಸನಾಯಕ ಜಗ್ಗೇಶ್ (@Jaggesh2) September 27, 2018

8 ಎಂಎಂ ಚಿತ್ರದ ಮೂಲಕ ಹರಿಕೃಷ್ಣ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ಇದು ಅಕಿರಾ ಕುರಸೋವಾ ಅವರ ಪ್ರಸಿದ್ಧ ಚಿತ್ರವೊಂದರಿಂದ ಸ್ಫೂರ್ತಿ ಪಡೆದ ಕಥೆಯನ್ನು ಹೊಂದಿದ್ದರೂ ಸ್ವತಂತ್ರ ಧಾಟಿಯ ಕಥಾ ಹಂದರ ಹೊಂದಿದೆಯಂತೆ. ಪೊಲೀಸ್ ಹಾಗೂ ಕ್ರಿಮಿನಲ್ ಕೆಲಸ ಮಾಡಿದ ವ್ಯಕ್ತಿಯೋರ್ವನ ನಡುವೆ ನಡೆಯೋ ರೋಚಕ ಕಥಾ ಎಳೆಯನ್ನು ‘8 ಎಂಎಂ’ ಚಿತ್ರ ಒಳಗೊಂಡಿದೆಯಂತೆ.

ನೀರ್ ದೋಸೆ ಚಿತ್ರದ ನಂತರ ಜಗ್ಗೇಶ್ ಅವರು ಯಾವುದೇ ಚಿತ್ರ ಒಪ್ಪಿಕೊಳ್ಳದಿರಲು ಕಾರಣ ಅವಕಾಶದ ಅಭಾವವೇನಲ್ಲ. ಅವರೇ ಹೇಳಿರೋ ಪ್ರಕಾರ ಒಂದಷ್ಟು ಕಥೆಗಳನ್ನು ಕೇಳಿಸಿಕೊಂಡು ನಿರಾಕರಿಸಿದ್ದಾರಂತೆ. ಈ ನಿರಾಕರಣೆಗೂ ಕಾರಣ ಇಲ್ಲದಿಲ್ಲ. ಸಾಮಾನ್ಯವಾಗಿ ಬಂದ ಕಥೆಗಳೆಲ್ಲವೂ ಈವರೆಗೆ ಜಗ್ಗೇಶ್ ಅವರಿಗಿದ್ದ ಕಾಮಿಡಿ ಇಮೇಜ್‍ಗೆ ಪೂರಕವಾಗಿಯೇ ಹೆಣೆದ ಕಥೆಗಳು ಮತ್ತು ನೀರ್ ದೋಸೆ ಮಾದರಿಯದ್ದೇ ಕಥೆಗಳಾಗಿದ್ದವಂತೆ.

139 4

ಈಗ ಐವತ್ತೈದರ ಹೊಸ್ತಿಲಲ್ಲಿರೋ ಜಗ್ಗೇಶ್ ಬೇರೆಯದ್ದೇ ಬಗೆಯ ಪಾತ್ರವೊಂದಕ್ಕಾಗಿ ತಹತಹಿಸುತ್ತಿದ್ದರಂತೆ. ಇದೇ ಹೊತ್ತಿಗೆ ಈ ಹಿಂದೆ ಟೀಸರ್ ಒಂದರ ಮೂಲಕ ಸದ್ದು ಮಾಡಿದ್ದ ಹರಿಕೃಷ್ಣ ಕೂಡಾ ಒಂದೊಳ್ಳೆ ಕಥೆ ಮಾಡಿಕೊಂಡು ನಿರ್ಮಾಪಕರನ್ನು ಭೇಟಿಯಾಗಿದ್ದರು. ಆದರೆ ಕಥೆ ಕೇಳಿದ ನಿರ್ಮಾಪಕರು ಜಗ್ಗೇಶ್ ನಟಿಸೋದಾದರೆ ಮಾತ್ರ ಹಣ ಹೂಡೋದಾಗಿ ಹೇಳಿ ಜಗ್ಗಣ್ಣನನ್ನು ಒಪ್ಪಿಸೋ ಜವಾಬ್ದಾರಿಯನ್ನೂ ಕೂಡಾ ಹರಿಕೃಷ್ಣ ಹೆಗಲಿಗೆ ಹಾಕಿದ್ದರಂತೆ. ತುಸು ಹೆದರಿಕೆಯಿಂದಲೇ ಅದನ್ನು ಒಪ್ಪಿಕೊಂಡ ಹರಿಕೃಷ್ಣ ಕಡೆಗೂ ಅದರಲ್ಲಿ ಯಶಸ್ವಿಯಾಗಿದ್ದರು.

8mm

ಅಳುಕಿನೊಂದಿಗೇ ಜಗ್ಗೇಶ್ ಅವರನ್ನು ಭೇಟಿಯಾಗಿ ರಿವರ್ಸ್ ವರ್ಷನ್ನಲ್ಲಿ ಕಥೆ ಹೇಳಿದೇಟಿಗೆ ಜಗ್ಗೇಶ್ ಸಂಪೂರ್ಣ ಒಪ್ಪಿಗೆ ಸೂಚಿಸಿದ್ದರಂತೆ. ಈ ಕಥೆಯಲ್ಲಿ ಜಗ್ಗೇಶ್ ಅವರನ್ನು ಅವರ ವಯಸ್ಸಿಗೆ ತಕ್ಕುದಾಗಿಯೇ ತೋರಿಸಿದ್ದು ಮತ್ತು ಮನ ಮಿಡಿಯುವ ಕ್ಲೈಮ್ಯಾಕ್ಸ್ ಕಥೆ ಒಪ್ಪಿಕೊಳ್ಳಲು ಕಾರಣ ಎಂಬುದು ಜಗ್ಗಣ್ಣನ ಅಭಿಪ್ರಾಯ. ಅಂತೂ ಈಗ ಸಿಕ್ಕಿರೋ ಸುಳಿವುಗಳ ಪ್ರಕಾರ ಹೇಳೋದಾದರೆ 8 ಎಂಎಂ ಚಿತ್ರ ಹಲವಾರು ವಿಶೇಷತೆಗಳನ್ನು ಹೊಂದಿದೆ. ಈ ಕಾರಣದಿಂದಲೇ ಕುತೂಹಲ ಹುಟ್ಟಿಸಿರೋ ಈ ಚಿತ್ರ ದಸರಾ ವೈಭವದ ಜೊತೆ ಜೊತೆಗೆ ಯಶಸ್ಸಿನ ವೈಭವವನ್ನೂ ತನ್ನದಾಗಿಸಿಕೊಳ್ಳೋ ಲಕ್ಷಣಗಳಿವೆ!

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ಶುಭರಾತ್ರಿ ಸವಿಗನಸು…. pic.twitter.com/QCarOU1z4y

— ನವರಸನಾಯಕ ಜಗ್ಗೇಶ್ (@Jaggesh2) September 29, 2018

TAGGED:8 mm8 ಎಂಎಂDasaraharikrishnanavarasa nayaka jaggeshPublic TVದಸರಾನವರಸ ನಾಯಕ ಜಗ್ಗೇಶ್ಪಬ್ಲಿಕ್ ಟಿವಿಹರಿಕೃಷ್ಣ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
2 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
2 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
2 hours ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
2 hours ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
2 hours ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?