– ಅತ್ತ ಬಿಜೆಪಿಯಿಂದಲೂ ಕಸರತ್ತು
ರಾಮನಗರ: ಬೆಂಗಳೂರು ಹೊರವಲಯದ ರಾಮನಗರ ಉಪಚುನಾವಣೆಗೆ ಜೆಡಿಎಸ್ನಿಂದ ಇಂದು ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಜೆಡಿಎಸ್ನಿಂದ ಅನಿತಾ ಕುಮಾರಸ್ವಾಮಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದರೂ ಅಚ್ಚರಿಯಿಲ್ಲ. ಯಾಕಂದ್ರೆ ನಿಖಿಲ್ ರಾಜಕೀಯ ರಂಗಕ್ಕೆ ಕಾಲಿಡಲು ಸೂಕ್ತ ಸಮಯ ಅನ್ನೋದು ಗೌಡರ ಲೆಕ್ಕಾಚಾರವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸೋದಕ್ಕೆ ಭವಾನಿ ರೇವಣ್ಣ ಆಕ್ಷೇಪಿಸಿದ್ರೆ ನಿಖಿಲ್ ಕಣಕ್ಕಿಳಿಯುತ್ತಾರೆ. ಆದ್ರೆ ಸದ್ಯಕ್ಕೆ ರಾಜಕೀಯ ಬೇಡ ಅಂತ ನಿಖಿಲ್ ಕುಮಾರಸ್ವಾಮಿ ಹೇಳುತ್ತಿದ್ದಾರೆ.
ಇತ್ತ ಬಿಜೆಪಿಯಲ್ಲೂ ಅಭ್ಯರ್ಥಿ ಆಯ್ಕೆ ಬಗ್ಗೆ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಸಿ.ಪಿ.ಯೋಗೇಶ್ವರ್ ಕಣಕ್ಕಿಳಿಸಲು ಬಿಜೆಪಿ ಮುಖಂಡರ ಆಲೋಚನೆ ಮಾಡಿದ್ರೆ, ತಾನು ಸ್ಪರ್ಧಿಸಲ್ಲ ಅಂತ ಯೋಗೇಶ್ವರ್ ಹೇಳುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv