ಅವ್ರ ದರ್ಬಾರ್ ದಸರಾದಲ್ಲಿ ನಡಿಲಿ: ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಪುಟ್ಟರಂಗಶೆಟ್ಟಿ ಕಿಡಿ

Public TV
1 Min Read
G.T.Deve Gowda Puttarangashetty

-ಮೈಸೂರು ದಸರಾ ಉಪಾಧ್ಯಕ್ಷ ಸ್ಥಾನಕ್ಕೆ ದೋಸ್ತಿ ಸಚಿವರಲ್ಲಿ ಜಟಾಪಟಿ

ಚಾಮರಾಜನಗರ: ಮೈತ್ರಿ ಸರ್ಕಾರದಲ್ಲಿ ಕೈ ಹಾಗೂ ತೆನೆ ಸಚಿವರ ವಾಗ್ದಾಳಿ ಮತ್ತೆ ಮುಂದುವರಿದಿದೆ. ಈ ಬಾರಿ ಮೈಸೂರು ದಸರಾ ಸ್ಥಾನಮಾನಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದ್ದಾರೆ.

ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಚಿವರು, ಪ್ರತಿ ದಸರಾದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿಶೇಷ ಸ್ಥಾನ ಮಾಡ ನೀಡುವುದು ವಾಡಿಕೆ. ಆದರೆ ಜಿ.ಟಿ.ದೇವೇಗೌಡ ಅವರು ಯಾವುದೇ ವಾಡಿಕೆ ಉಳಿಸಿಲ್ಲ. ಎಲ್ಲವನ್ನೂ ನಾನೇ ಮಾಡುತ್ತೇನೆ ಎನ್ನುತ್ತಾರೆ. ಅವರ ದರ್ಬಾರ್ ದಸರಾದಲ್ಲಿ ನಡೆಯಲಿ. ನಾನು ಮೈಸೂರು ದಸರಾಗೆ ಬರಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

MYS HDK 3 1

ನಮ್ಮನ್ನ ಕರೆಯದೆ ತಮಗೆ ಇಷ್ಟ ಬಂದ ಹಾಗೆ ಮೈಸೂರು ದಸರಾ ಸಮಿತಿಗಳನ್ನು ಮಾಡಿಕೊಂಡರು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಉಪಾಧ್ಯಕ್ಷ ಸ್ಥಾನ ನೀಡಬೇಕಿತ್ತು. ಆದರೆ ಸ್ಥಾನ ನೀಡುವುದಿರಲ್ಲಿ ಎಲ್ಲಿಯೂ ನನ್ನ ಹೆಸರನ್ನು ಪ್ರಕಟಿಸಿಲ್ಲ. ಇದೆಲ್ಲ ಆಗಿದ್ದು ಜಿ.ಟಿ.ದೇವೇಗೌಡ ಅವರಿಂದ ಎಂದು ಕಿಡಿಕಾರಿದರು.

ಈ ಹಿಂದೆ ಆಗಿದ್ದೇನು?:
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲವು ದಿನಗಳ ಹಿಂದೆ ಮೈಸೂರು ದಸರಾ ವಿಚಾರವಾಗಿ ಸಭೆ ನಡೆದಿತ್ತು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿರುವ ನನಗೆ ಮೈಸೂರು ದಸರಾದಲ್ಲಿ ಉಪಾಧ್ಯಕ್ಷ ಸ್ಥಾನ ನೀಡಬೇಕಿತ್ತು. ಅಷ್ಟೇ ಆಮಂತ್ರಣ ಪತ್ರದಲ್ಲಿ ನನ್ನ ಹೆಸರು ಹಾಗೂ ಫೋಟೋವನ್ನು ಕೂಡ ಸೇರಿಸಿಲ್ಲ. ನಿಮ್ಮ ಇಷ್ಟ ಬಂದ ಹಾಗೆ ಸಮಿತಿ ರಚನೆ ಮಾಡಿರುವಿರಿ ಎಂದು ಸಚಿವ ಪುಟ್ಟರಂಗಶೆಟ್ಟಿ ಅವರು ಜಿ.ಟಿ.ದೇವೇಗೌಡ ಅವರನ್ನು ತರಾಟೆ ತಗೆದುಕೊಂಡಿದ್ದರು.

MYS Dasara

ಪುಟ್ಟರಂಗಶೆಟ್ಟಿ ಅವರು ಅಸಮಾಧಾನ ಹೊರಹಾಕುತ್ತಿದ್ದಂತೆ ಮನವೊಲಿಕೆಗೆ ಮುಂದಾದ ಜಿ.ಟಿ.ದೇವೇಗೌಡ, ಆಮಂತ್ರಣದಲ್ಲಿ ಹೆಸರು ಹಾಗೂ ಫೋಟೋ ಹಾಕಿಸುತ್ತೇವೆ. ಉಪಾಧ್ಯಕ್ಷರಾಗಿ ಘೋಷಣೆ ಮಾಡುತ್ತೇನೆ ಎಂದು ಓಲೈಸಿದ್ದರು. ಆದರೆ ದಸರಾ ಉಪಾಧ್ಯಕ್ಷರಾಗಿ ಪುಟ್ಟರಂಗನಶೆಟ್ಟಿ ಅವರ ಹೆಸರು ಇದ್ದರೂ, ಎಲ್ಲಿಯೂ ಪ್ರಸ್ತಾಪ ಮಾಡಿಲ್ಲವಂತೆ. ಇದರಿಂದಾಗಿ ಇಬ್ಬರು ಸಚಿವರ ನಡುವೆ ಜಟಾಪಟಿ ಮುಂದುವರಿದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

MYS Dasara 1

Share This Article
Leave a Comment

Leave a Reply

Your email address will not be published. Required fields are marked *