Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಂಗೇರಿದ ಜಮಖಂಡಿ ಉಪಚುನಾವಣೆ ಕದನ – ಕೈ, ಕಮಲದಲ್ಲಿ ಬಂಡಾಯ ಭೀತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ರಂಗೇರಿದ ಜಮಖಂಡಿ ಉಪಚುನಾವಣೆ ಕದನ – ಕೈ, ಕಮಲದಲ್ಲಿ ಬಂಡಾಯ ಭೀತಿ

Bagalkot

ರಂಗೇರಿದ ಜಮಖಂಡಿ ಉಪಚುನಾವಣೆ ಕದನ – ಕೈ, ಕಮಲದಲ್ಲಿ ಬಂಡಾಯ ಭೀತಿ

Public TV
Last updated: October 10, 2018 10:10 pm
Public TV
Share
3 Min Read
CONGRESS BJP
SHARE

ಬಾಗಲಕೋಟೆ: ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಹೇಳಲಾಗುತ್ತಿರುವ ವಿಧಾನಸಭೆಯ ಉಪ ಚುನಾವಣೆಗಳ ಅಖಾಡ ರಂಗೇರುತ್ತಿದೆ. ಅದೇ ರೀತಿ ಜಮಖಂಡಿಯಲ್ಲೂ ಚುನಾವಣಾ ಜ್ವರ ಏರುತ್ತಿದ್ದು, ಅದಾಗಲೇ ಕೈ, ಕಮಲ ಪಕ್ಷಗಳ ಅಭ್ಯರ್ಥಿಗಳು ಪ್ರಚಾರದ ಅಂಗಳಕ್ಕೆ ಇಳಿದಿದ್ದಾರೆ. ಆದರೆ, ಅಭ್ಯರ್ಥಿಗಳನ್ನು ಎರಡು ಪಕ್ಷಗಳು ಫೈನಲ್ ಮಾಡುತ್ತಿದ್ದಂತೆ ಅಸಮಾಧಾನ ಹೊಗೆ ಕಾಣಿಸಿಕೊಂಡಿದೆ.

ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ ಭೀತಿ ಎದುರಾದರೆ, ಬಿಜೆಪಿಯ ಪ್ರಮುಖ ನಾಯಕ ಪಕ್ಷ ತೊರೆಯುವ ಆತಂಕ ಎದುರಾಗಿದೆ. ಇದರ ನಡುವೆಯೇ ಕೈ, ಕಮಲ ಅಭ್ಯರ್ಥಿಗಳು ಪ್ರಚಾರವನ್ನು ಆರಂಭಿಸಿದ್ದಾರೆ.

BGK ELECTION

ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ದಿವಂಗತ ಶಾಸಕ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ನ.3ರಂದು ಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡರನ್ನ ಈ ಬಾರಿ ಕಾಂಗ್ರೆಸ್ ಅಖಾಡಕ್ಕಿಳಿಸಲಿದೆ. ಇದಕ್ಕೆ ಜೆಡಿಎಸ್ ಬೆಂಬಲ ಕೂಡ ನೀಡಿದೆ. ಆದರೆ ಜಮಖಂಡಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಕೆಲ ಮುಖಂಡರು, ಕ್ಷೇತ್ರದಲ್ಲಿ ಹೆಚ್ಚಿನ ಮತದಾರರು ಇರುವ ಜೈನ ಸಮುದಾಯದ ಮುಖಂಡ ಸುಶೀಲಕುಮಾರ ಬೆಳಗಲಿ ಅವರಿಗೆ ಟಿಕೆಟ್ ನೀಡುವಂತೆ ರಾಜ್ಯ ನಾಯಕರಿಗೆ ಒತ್ತಡ ತಂದಿದ್ದರು. ಆದರೆ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅ. 13ರಂದು ಕಾರ್ಯಕರ್ತರೊಂದಿಗೆ ಚರ್ಚಿಸಿ ಬಂಡಾಯವಾಗಿ ಕಣಕ್ಕಿಳಿಯುವ ಬಗ್ಗೆ ಚಿಂತನೆಯಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದ ಆನಂದ ನ್ಯಾಮಗೌಡರಿಗೆ ಸಹಜವಾಗಿ ಅನುಕಂಪದ ಅಲೆ ಇದ್ದು, ತಂದೆ ಮಾಡಿದ ಅಭಿವೃದ್ಧಿ ಕಾರ್ಯಗಳು ನನಗೆ ಶ್ರೀ ರಕ್ಷೆ ಎಂದಿದ್ದಾರೆ. ಅ.16ರಂದು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

BGK

ಬಿಜೆಪಿ ಪಕ್ಷದಲ್ಲೂ ಹಲವು ಸುತ್ತಿನ ಮಾತುಕತೆ, ಸಭೆಗಳ ಬಳಿಕ ಕೊನೆಗೂ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿಯವರನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಸಹೋದರ ಸಂಗಮೇಶ ನಿರಾಣಿ ಹಾರಿಸಿದ ಬಂಡಾಯದ ಬಾವುಟದಿಂದಾಗಿ ಶ್ರೀಕಾಂತ ಕುಲಕರ್ಣಿ ಅವರು ಕೆಲವೇ ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಬೇಕಾಯಿತು. ಆದರೆ ಈ ಬಾರಿ ನಿರಾಣಿ ಕುಟುಂಬದಿಂದ ಬಂಡಾಯ ಕಾಣಿಸುತ್ತಿಲ್ಲವಾದರೂ ಬಿಜೆಪಿಯ ಸಹ ಸಂಚಾಲಕ ಬಿಎಸ್ ಸಿಂಧೂರ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪಕ್ಷದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಕ್ಷ ತೊರೆಯುವ ಬಗ್ಗೆ ಬೆಂಬಲಿಗರ ಅಭಿಪ್ರಾಯ ಸಂಗ್ರಹಕ್ಕೂ ಮುಂದಾಗಿದ್ದು, ಮಾನಸಿಕವಾಗಿ ಬಿಜೆಪಿಯಿಂದ ದೂರ ಉಳಿದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಜಮಖಂಡಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ಮಾಜಿ ಸಚಿವ ಮುರುಗೇಶ ನಿರಾಣಿ ತಮ್ಮ ಪರಿವಾರದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇನ್ನುಳಿದ ಮುಖಂಡರ ಜೊತೆ ರಾಜ್ಯ ನಾಯಕರು ಮಾತನಾಡಿದ್ದಾರೆ. ಕಾಂಗ್ರೆಸ್ ಅನುಕಂಪದ ಅಲೆ ನಂಬಿ ಕುಳಿತಿದೆ. ಅದು ಪ್ರಯೋಜನಕ್ಕೆ ಬರುವುದಿಲ್ಲ. ನನ್ನ ಅನುಭವ ಕೆಲಸ ಮಾಡುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ರಾಜ್ಯ ನಾಯಕರೊಂದಿಗೆ ಚರ್ಚಿಸಿ ನಾಮಪತ್ರ ಸಲ್ಲಿಕೆಯ ದಿನಾಂಕ ಘೋಷಿಸುವುದಾಗಿ ಹೇಳಿದ್ದಾರೆ.  ಇದನ್ನು ಓದಿ: ರಾಮನಗರ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ – ಕೈ ಎಂಎಲ್‍ಸಿ ಲಿಂಗಪ್ಪ ಪುತ್ರ ಬಿಜೆಪಿಗೆ ಸೇರ್ಪಡೆ

ಜಮಖಂಡಿ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯಲಿದ್ದು, ಎರಡು ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳು ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಇದೇ ವೇಳೆ ಎರಡು ಕಡೆಯಲ್ಲೂ ಅಸಮಾಧಾನದ ಹೊಗೆ ಕಾಣಿಸುತ್ತಿದ್ದು, ಇದು ಫಲಿತಾಂಶದ ಮೇಲೆ ಪರಿಣಾಮ ಬೀರತ್ತಾ ಎನ್ನುವ ಪ್ರಶ್ನೆಗೆ ನವೆಂಬರ್ 6 ರಂದು ಮತ ಎಣಿಕೆಯ ದಿನ ಉತ್ತರ ಸಿಗಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

anand singh BGK

TAGGED:Assembly by-electionbagalakotecongressJamakhandijdsPublic TVಉಪಚುನಾವಣೆಕಾಂಗ್ರೆಸ್ಜಮಖಂಡಿಜೆಡಿಎಸ್ಪಬ್ಲಿಕ್ ಟಿವಿಬಾಗಲಕೋಟೆವಿಧಾನಸಭೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

why australia has banned mining in one of the worlds largest uranium deposits 3
Latest

ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

Public TV
By Public TV
16 seconds ago
Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
38 minutes ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
1 hour ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
1 hour ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
2 hours ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?