Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅಶ್ವತ್ಥ ಕಟ್ಟೆಯ ಮುಂದೆ ಮೂಕಜ್ಜಿಯ ಕನಸಿನ ಅನಾವರಣ- ಜನವರಿಯಲ್ಲಿ ಚಿತ್ರ ರಿಲೀಸ್

Public TV
Last updated: October 10, 2018 9:22 pm
Public TV
Share
3 Min Read
mookajjiya kanasugalu
SHARE

ಉಡುಪಿ: ಒಂಬತ್ತು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಪಿ ಶೇಷಾದ್ರಿಯವರು ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಕೃತಿ ಮೂಕಜ್ಜಿಯ ಕನಸನ್ನು ಚಲನಚಿತ್ರ ಮಾಡಲು ಹೊರಟಿದ್ದಾರೆ. ಖ್ಯಾತ ರಂಗಭೂಮಿ ಕಲಾವಿದೆ, ಬೆಳ್ಳಿ ತೆರೆಯ ಮನೋಜ್ಞ ನಟಿ ಬಿ. ಜಯಶ್ರೀ ಮೂಕಜ್ಜಿಯಾಗಿ ಕಥೆಗೆ ಜೀವ ತುಂಬಲಿದ್ದಾರೆ.

`ಕಡಲ ತಡಿಯ ಭಾರ್ಗವ’ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಕೋಟ ಶಿವರಾಮ ಕಾರಂತರ 116ನೇ ಜನ್ಮದಿನ ಸಂದರ್ಭ ಅವರ ಕಾದಂಬರಿ ಚಲನಚಿತ್ರವಾಗುತ್ತಿದೆ. 50 ವರ್ಷದ ಹಿಂದೆ ಬರೆದ ಕಾರಂತರ ಕೃತಿಗೆ ಅತ್ಯುನ್ನತ ಜ್ಞಾನಪೀಠ ಪ್ರಶಸ್ತಿಯೂ ಸಿಕ್ಕಿತ್ತು. ಮೂಕಜ್ಜಿಯ ಕನಸು ಕಾದಂಬರಿ ಇದೀಗ ತೆರೆಯ ಮೇಲೆ ಬರಲಿದೆ. ರಾಷ್ಟ್ರಪ್ರಶಸ್ತಿಯನ್ನು 9 ಬಾರಿ ಮುಡಿಗೇರಿಸಿಕೊಂಡ ಪಿ.ಶೇಷಾದ್ರಿ ಈ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಶಿವರಾಮ ಕಾರಂತರ ಹುಟ್ಟು ಹಬ್ಬದ ದಿನದಂದೇ ಮೂಕಜ್ಜಿಯ ಕನಸುಗಳು ಉಡುಪಿ ಜಿಲ್ಲೆ ಬ್ರಹ್ಮಾವರದ ಸಾಲಿಕೇರಿಯಲ್ಲಿ ಮುಹೂರ್ತ ಕಂಡಿದೆ.

mookajjiya kanasugalu 5 copy

ಮೂಕಜ್ಜಿ ಪಾತ್ರಕ್ಕೆ ಸಾಕಷ್ಟು ಹುಡುಕಾಟ ನಡೆಸಿದ್ದ ನಿರ್ದೇಶಕರು 15 ದಿನಗಳ ಕಾಲ ಅಲ್ಲಲ್ಲಿ ಸ್ಕ್ರೀನ್ ಟೆಸ್ಟ್ ಮಾಡಿದ್ದರು. ಆದರೆ ಆಯ್ಕೆಗೂ ಮೊದಲೇ ಮನಸ್ಸಿನಲ್ಲಿ ಆಯ್ಕೆ ಮಾಡಿದ್ದ ಕೊನೆಗೆ ಫೈನಲ್ ಮಾಡಿದ್ದಾರೆ. ಹಿರಿಯ ನಟಿ ಬಿ ಜಯಶ್ರೀ ಮೂಕಜ್ಜಿಯಾಗಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬಿ. ಜಯಶ್ರೀ ಅವರು, ನಾನು ಮೂಕಜ್ಜಿ, ನಾನು ಮೂಖವಾಗಿದ್ದೇನೆ. ನಾಟಕಕ್ಕೂ ಚಿತ್ರಕ್ಕೂ ಬಹಳ ವ್ಯತ್ಯಾಸವಿದೆ. ರೈಲ್ವೇ ಹಳಿಗಳ ತರ. ಎಲ್ಲೋ ಒಂದು ಕರೆ ಅದು ಕೂಡುತ್ತದೆ. ಹಳಿಗಳು ಕೂಡದಿದ್ದರೂ ಅದು ಕೂಡಿಯೇ ಕೂಡುತ್ತದೆ ಎಂದರು.

mookajjiya kanasugalu 3 copy

ಕಥೆಗೆ ಚ್ಯುತಿ ಬಾರದಂತೆ, ಪ್ರಸ್ತುತತೆಗೆ ಹೊಂದುವಂತೆ ಚಿತ್ರವನ್ನು ಶೇಷಾದ್ರಿ ಹೆಣೆದಿದ್ದಾರಂತೆ. ಡಾ ಶಿವರಾಮ ಕಾರಂತರ ಕೃತಿಗಳ ವಾರಸುಧಾರರಾದ ಮಾಲಿನಿ ಮಲ್ಯ ಅವರೊಂದಿಗೆ ಚಿತ್ರಕತೆಯ ಚರ್ಚೆ ನಡೆಸಿ ಚಿತ್ರ ಮಾಡಲು ಹೊರಟಿದ್ದಾರೆ. ಮಹೂರ್ತದ ದಿನ ಅವರು ಜೊತೆಗಿದ್ದು ಚಿತ್ರಕ್ಕೆ ಶುಭ ಹಾರೈಸಿದರು. ಸುಮಾರು ಐದು ವರ್ಷದಿಂದ ಮೂಕಜ್ಜಿಯನ್ನು ಬೆಳ್ಳಿ ತೆರೆಗೆ ತರುವ ಕನಸು ಇಟ್ಟುಕೊಂಡಿದ್ದರು. ಕಾರಂತರ ಜನ್ಮದಿನದಂದೇ ಚಿತ್ರೀಕರಣ ಶುರುವಾಗಿದೆ. 25 ದಿನಗಳ ಒಂದೇ ಶೆಡ್ಯೂಲ್‍ನಲ್ಲಿ ಚಿತ್ರದ ಶೂಟಿಂಗ್ ನಡೆಯಲಿದೆ. ಸುಮಾರು 70 ಲಕ್ಷ ರೂ. ಹೂಡಿಕೆ ಮಾಡಿ ಚಿತ್ರವನ್ನು ಕಟ್ಟಲಿದ್ದಾರೆ. ಮುಂದಿನ ವರ್ಷ ಜನವರಿಗೆ ಚಿತ್ರ ತೆರೆ ಕಾಣಲಿದೆ. ಕಲಾವಿದರು, ಭಾಷೆ ಎಲ್ಲದ ಬಗ್ಗೆ ಸಿಕ್ಕಾಪಟ್ಟೆ ಹೋಂ ವರ್ಕ್ ಮಾಡಿಕೊಂಡು ಪಿ. ಶೇಷಾದ್ರಿ ಮಾನಿಟರ್ ಮುಂದೆ ಕುಳಿತುಕೊಂಡಿದ್ದರು.

mookajjiya kanasugalu 1 copy

ಶಿವರಾಮ ಕಾರಂತರ ಬೆಟ್ಟದ ಜೀವ, ಚಿಗುರಿದ ಕನಸು, ಚೋಮನ ದುಡಿ, ಸರಸಮ್ಮನ ಸಮಾಧಿ ಕಾದಂಬರಿಗಳು ಈಗಾಗಲೇ ಚಿತ್ರವಾಗಿ ಯಶಸ್ವಿಯಾಗಿದೆ. ಚಿತ್ರಕ್ಕೆ ಪ್ರವೀಣ್ ಗೋಡ್ಕಿಂಡಿ ಸಂಗೀತ ನೀಡಲಿದ್ದಾರೆ. ಚಿಗುರಿದ ಕನಸು, ಗುಡ್ಡದ ಭೂತಕ್ಕೆ ಕ್ಯಾಮೆರಾ ವರ್ಕ್ ಮಾಡಿದ್ದ ಜಿ. ಎಸ್ ಭಾಸ್ಕರ್ 8ಕೆ ಡ್ರ್ಯಾಗನ್ ಕ್ಯಾಮೆರಾ ಮೂಲಕ ಮೂಕಜ್ಜಿಯನ್ನು ಸೆರೆ ಹಿಡಿಯಲಿದ್ದಾರೆ. ಕರಾವಳಿಯ ಬಿಸಿಲಿನಲ್ಲಿ ಕೆಲಸ ಮಾಡೋದು ಸವಾಲು. ಈ ಹಿಂದೆಯೂ ಈ ಭಾಗದಲ್ಲಿ ನಾನು ಚಿತ್ರೀಕರಣ ಮಾಡಿದ್ದೇನೆ. ನಿರ್ದೇಶಕರ ಆಶಯ ಮತ್ತು ದೃಷ್ಟಿಕೋನದಲ್ಲಿ ಮೂಕಜ್ಜಿಯ ಕನಸನ್ನು ಕಟ್ಟಲಿದ್ದೇವೆ ಅಂತ ಹಿರಿಯ ಛಾಯಾಗ್ರಾಹಕ ಜಿ. ಎಸ್ ಭಾಸ್ಕರ್ ಹೇಳಿದರು.

ಮೂಕಜ್ಜಿಯ ಕನಸು 60 ರ ದಶಕದ ಕಥೆ. ಆ ಕಥೆಯನ್ನು ಈಗಿನ ಪ್ರಸ್ತುತ ಪರಿಸ್ಥಿತಿಗೆ ತರುವುದು ಒಂದು ಲೆಕ್ಕದಲ್ಲಿ ನಿರ್ದೇಶಕರಿಗೆ ಚಾಲೆಂಜ್. ಕಾದಂಬರಿಗಳಿಗೆ ಓದುಗರ ಕೊರತೆಯಿದೆ, ಆದರೆ ನೋಡುಗರು ಹೆಚ್ಚಾಗಿರುವ ಈ ಸನ್ನಿವೇಶದಲ್ಲಿ ಮೂಕಜ್ಜಿಯ ಕನಸು ಜನಕ್ಕೆ ತಲುಪಿಸಲು ಹೊರಟಿದ್ದಾರೆ ಪಿ. ಶೇಷಾದ್ರಿ. ವಾರಕ್ಕೆ ನಾಲ್ಕು ತೆರೆಕಾಣುವ ಕಮರ್ಷಿಯಲ್ ಚಿತ್ರದ ನಡುವೆ ಕಾರಂತರ ಮೂಕಜ್ಜಿಯ ಕನಸುಗಳು ಸಕ್ಸಸ್ ಆಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

mookajjiya kanasugalu 4 copy

TAGGED:cinemaDirector P. SheshadriDr. K. Shivaram KaranthMookajjiya KanasugaluPublic TVsandalwoodudupiಉಡುಪಿಡಾ. ಶಿವರಾಮ ಕಾರಂತರನಿರ್ದೇಶಕ ಪಿ ಶೇಷಾದ್ರಿಪಬ್ಲಿಕ್ ಟಿವಿಮೂಕಜ್ಜಿಯ ಕನಸುಗಳುಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Bahubali Rajamouli
Cinema

ಬಾಹುಬಲಿಗೆ ದಶಕದ ಸಂಭ್ರಮ: ಗುಡ್‌ನ್ಯೂಸ್ ಕೊಟ್ಟ ಜಕ್ಕಣ್ಣ

Public TV
By Public TV
8 minutes ago
Karanji Park
Districts

ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

Public TV
By Public TV
14 minutes ago
Vadodara Bridge Collapse 1
Latest

ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

Public TV
By Public TV
25 minutes ago
Banshankari Police Station
Bengaluru City

ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಖಾತೆಗಳು ಕಂಡ್ರೆ ಸೈಬರ್‌ ಸೆಲ್‌ಗೆ ದೂರು ನೀಡಿ – ಸಿಎಂ

Public TV
By Public TV
45 minutes ago
bihar elections the rise of women as vote bank
Court

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್ – ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ‘ಸುಪ್ರೀಂ’ ನಕಾರ

Public TV
By Public TV
60 minutes ago
Dinesh Gundurao 1
Bengaluru City

ಹಾಸನದಲ್ಲಿ ಹಠಾತ್‌ ಸಾವು| 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು: ದಿನೇಶ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?