ಮೈಸೂರು ದಸರಾ 2018- ಎರಡನೇ ದಿನವೂ ರಂಗೇರಿದ ಹತ್ತು ಹಲವು ಕಾರ್ಯಕ್ರಮಗಳು

Public TV
2 Min Read
DASARA MAIN PIC

ಮೈಸೂರು: ಜಿಲ್ಲೆಯ ದಸರಾ ಮಹೋತ್ಸವಕ್ಕೆ ಇಂದು ಎರಡನೇ ದಿನವಾಗಿದ್ದು, ಹತ್ತು ಹಲವು ಕಾರ್ಯಕ್ರಮಗಳು ನಡೆಯುತ್ತಿವೆ.

ಎರಡನೇ ದಿನದ ಕಾರ್ಯಕ್ರಮಕ್ಕೆ ಪಾರಂಪರಿಕ ಉಡುಗೆಯಲ್ಲಿ ಸಚಿವ ಸಾ.ರಾ ಮಹೇಶ್ ಅವರಿಂದ ಪಾರಂಪರಿಕ ನಡಿಗೆಗೆ ಚಾಲನೆ ನೀಡಿದ್ದಾರೆ. ಬಾಲಕರಿಂದ ವೃದ್ಧರವರೆಗೆ ಪಾರಂಪರಿಕ ಉಡುಗೆ-ತೊಡುಗೆಯ ಮೂಲಕ ನಡಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೈಸೂರಿನ ನಾಗರೀಕರು ಮೈಸೂರು ಪೇಟ, ಸಿಲ್ಕ್ ಪಂಚೆ, ಸೀರೆ ತೊಟ್ಟು ಮಿಂಚಿದ್ದಾರೆ.

ಮೈಸೂರಿನ ಪುರಭವನದಿಂದ ನಡಿಗೆ ಪ್ರಾರಂಭವಾಗಿದ್ದು, ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಲಾಗುತ್ತಿದೆ. ಕೆ.ಆರ್ ವೃತ್ತ, ಕೆ.ಆರ್.ಆಸ್ಪತ್ರೆ ಸೇರಿದಂತೆ ಪ್ರಮುಖ ಪಾರಂಪರಿಕ ಕಟ್ಟಡಗಳ ಮಾರ್ಗದಿಂದ ಪ್ರವಾಸಿಗರಿಗೆ ಮೈಸೂರಿನ ಪರಂಪರೆಯ ಬಗ್ಗೆ ಮಾಹಿತಿ ನೀಡುವ ಈ ನಡಿಗೆ ಕಾರ್ಯಕ್ರಮ ಮಾಡಲಾಗಿದೆ. ಇದನ್ನು ಓದಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸುಧಾಮೂರ್ತಿ ಚಾಲನೆ

DASARA 4

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳಾ ರಂಗೋಲಿ ಆಯೋಜನೆ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಮಹಿಳೆಯರು ಭಾಗಿಯಾಗಿದ್ದರು. ರಂಗೋಲಿ ಸ್ಪರ್ಧೆಗೆ ಸಚಿವೆ ಜಯಮಾಲಾ ಚಾಲನೆ ನೀಡಿದರು. ಚಾಲನೆ ಬಳಿಕ ಸಚಿವೆ ಜಯಮಾಲ ಮಾತನಾಡಿ ರಂಗೋಲಿ ದೇವರಿಗೆ ಪ್ರಿಯ, ರಂಗೋಲಿಯಲ್ಲೂ ದೇವರಿದ್ದಾನೆ. ಬ್ಯಾಡ್ ಎನರ್ಜಿ ಹೊರ ಹಾಕುವ ಶಕ್ತಿ ರಂಗೋಲಿಗೆ ಇದೆ. ದಸರಾ ರಂಗೋಲಿ ಸ್ಪರ್ಧೆಯಲ್ಲಿ ಮಕ್ಕಳು ಭಾಗಿಯಾಗಿದ್ದಾರೆ. ನಾನು ರಂಗೋಲಿ ಬಿಡಿಸುತ್ತೇನೆ. ರಂಗೋಲಿ ಹಾಕೋದು ನನಗೆ ಇಷ್ಟ. ರಥಸಪ್ತಮಿ, ದೀಪಾವಳಿ ಮುಂತಾದ ಹಬ್ಬಗಳ ಸಂದರ್ಭದಲ್ಲಿ ನಾನು ರಂಗೋಲಿ ಬಿಡಿಸ್ತೇನೆ. ಇಂದು ರಂಗೋಲಿಯಲ್ಲಿ ಯಾರು ಪ್ರಥಮ ಬಹುಮಾನ ಪಡೀತಾರೋ ಅನ್ನೋ ಕೂತೂಹಲ ಇದೆ ಅಂತ ಹೇಳಿ ಎಲ್ಲಾ ಸ್ಪರ್ಧಾಳುಗಳಿಗೂ ಶುಭ ಕೋರಿದರು.

DASARA 5

ದಸರಾ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ನಾಯಕರ ಗೈರು ವಿಚಾರಕ್ಕೆ ಸಂಬಂಧಪಟ್ಟಂತೆ ದಸರಾ ಇನ್ನು 10 ದಿನ ಬಾಕಿ ಇದೆ. ಕೊನೆ ದಿನದವರೆಗೆ ಕಾಯಿರಿ ಉತ್ತರ ಕೊಡುತ್ತೇನೆ ಎಂದು ಮೈಸೂರಿನಲ್ಲಿ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ. ಚುನಾವಣೆ ಕೆಲಸ, ಮಂಡ್ಯ, ಚಾಮರಾಜನಗರದ ದಸರಾದಲ್ಲಿ ಭಾಗಿಯಾಗಿದ್ದರಿಂದ ಮೈಸೂರಿನಲ್ಲಿ ಭಾಗಿಯಾಗಿಲ್ಲ. ಈಗಷ್ಟೇ ದಸರಾ ಪ್ರಾರಂಭವಾಗಿದೆ. ಅವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ದಸರಾ ನಡೆಸುತ್ತಿದ್ದೇವೆ. ಪುಟ್ಟರಂಗಶೆಟ್ಟಿ ಬೇಡಿಕೆಯನ್ನ ಈಡೇರಿಸಿದ್ದೇವೆ. ಪ್ರಮೋದಾ ದೇವಿ ಅವರನ್ನು ಆಹ್ವಾನ ಮಾಡಲು ಬಂದಿದ್ದರು ಎಂದು ಕಾಂಗ್ರೆಸ್ ನಾಯಕರ ಗೈರಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

dasara 1 1

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಬುಧವಾರ ಅದ್ಧೂರಿ ಚಾಲನೆ ಸಿಕ್ಕಿತ್ತು. ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ನಾಡದೇವತೆ ಚಾಮುಂಡೇಶ್ವರಿಗೆ ತುಲಾ ಲಗ್ನದಲ್ಲಿ ಅಗ್ರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದ್ದರು. ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಜಿ. ಟಿ ದೇವೆಗೌಡ, ಸಚಿವ ಸಾರಾ ಮಹೇಶ್ ಸೇರಿದಂತೆ ಹಲವು ಸಚಿವರು ಹಾಗೂ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಸುಧಾಮೂರ್ತಿ ಕುಟುಂಬ ಸಮೇತರಾಗಿ ಚಾಮುಂಡಿ ದೇವಿಗೆ ಬಾಗೀನ ಅರ್ಪಿಸಿದ್ದರು. ನಿನ್ನೆ ಬೆಳಗ್ಗೆ 11 ಗಂಟೆಗೆ ಖಾಸಗಿ ದರ್ಬಾರ್ ನಡೆಯಿತು.

DASARA 3

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *