ಕೊಪ್ಪಳ: ಇದೇ ತಿಂಗಳ 6ರಂದು ಜಿಲ್ಲೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಲ್ಲು ಗಣಿಗಾರಿಕೆಯ ಪರಿಶೀಲನೆಗೆ ತೆರಳಿದಾಗ ಡೀಸೆಲ್ ಬ್ಯಾರಲ್ ಸ್ಫೋಟಗೊಂಡು ಗಾಯಗೊಂಡಿದಂತಹ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಿನೇಶ್ ಭಾನುವಾರ ಸಂಜೆ ಮೃತಪಟ್ಟಿದ್ದಾರೆ.
ಅಕ್ರಮ ಕಲ್ಲುಗಣಿಗಾರಿಕೆಯ ಮಾಹಿತಿ ಮೇರೆಗೆ ದಿನೇಶ್ ಹಾಗೂ ನವೀನ್ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಲಿಂಗನಬಂಡಿಯಲ್ಲಿ ಇರುವ ಕಲ್ಲು ಕ್ವಾರೆಗೆ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಪರಿಶೀಲನೆ ನಡೆಸುವ ಸಂಧರ್ಭದಲ್ಲಿ ಇದ್ದಕ್ಕಿದ್ದ ಹಾಗೆ ಅಲ್ಲಿದ್ದ ಡೀಸೆಲ್ ಬ್ಯಾರಲ್ ಸ್ಫೋಟಗೊಂಡಿತ್ತು. ಆಗ ದಿನೇಶ್ ಹಾಗೂ ನವೀನ್ ತೀವ್ರವಾಗಿ ಗಾಯಗೊಂಡಿದ್ದರು.
ಸ್ಫೋಟದ ತೀವ್ರತೆಗೆ ಇಬ್ಬರಿಗೂ ಮೈ ಹಾಗೂ ಕೈ ಭಾಗಗಳಲ್ಲಿ ವಿಪರೀತವಾದ ಗಾಯವಾಗಿತ್ತು. ಆದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತಕ್ಷಣ ಬೆಂಗಳೂರಿನ ಕೋರಮಂಗಲದಲ್ಲಿರುವ ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ದಿನೇಶ್ ಅವರಿಗೆ ಶ್ವಾಸಕೋಶದಲ್ಲಿ ಹೊಗೆ ತುಂಬಿದ್ದರಿಂದ ಹಾಗೂ ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ನವೀನ್ ಅವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv