ಬಾಗಲಕೋಟೆ: ನಾನು ಈಗಾಗಲೇ 13 ಚುನಾವಣೆಗಳನ್ನು ಎದುರಿಸಿದ್ದೇನೆ, ಈ ಐದು ವರ್ಷ ಪೂರೈಸಿ ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾಜಿ ಸಿಎಂ ಸಿದರಾಮಯ್ಯ ಅವರು ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ.
ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಪುರಸಭಾ ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ನನಗೆ 71 ವರ್ಷ ವಯಸ್ಸಾಗಿದೆ. ಹಾಗಾಗಿ ಇನ್ನು ಮುಂದೆ ಯಾವುದೇ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದರು.
ಅಭಿವೃದ್ಧಿ ಕೆಲಸ ಮಾಡಲು ಚುನಾವಣೆಗೆ ನಿಲ್ಲಲೇ ಬೇಕು ಎಂದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಬಾದಾಮಿ ಶಾಸಕನಾಗಿರುವುದರಿಂದ ನಾನು ಉತ್ತರ ಕರ್ನಾಟಕದವನೇ ಎಂದು ಮುಗುಳು ನಕ್ಕರು. ನಾವು, ನೀವು ಬನ್ನಿ ತಗೊಂಡು ಬಂಗಾರದಿಂದ ಇರೋಣ ಎಂದು ಉತ್ತರ ಕರ್ನಾಟಕ ಶೈಲಿಯಲ್ಲಿ ಕ್ಷೇತ್ರದ ಜನರಿಗೆ ದಸರಾ ಶುಭಾಶಯ ತಿಳಿಸಿದರು. ಅಲ್ಲದೇ ತಮ್ಮ ಭಾಷಣದಲ್ಲೇ ನೂತನವಾಗಿ ಆಯ್ಕೆಯಾದ ಪುರಸಾಭಾ ಸದಸ್ಯರಿಗೆ ಅಭಿವೃದ್ಧಿ ಮಾಡುವ ಬಗ್ಗೆ ನೀತಿ ಪಾಠ ಮಾಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv