Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿದ ಕಾವೇರಿ ಮಾತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿದ ಕಾವೇರಿ ಮಾತೆ

Districts

ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿದ ಕಾವೇರಿ ಮಾತೆ

Public TV
Last updated: October 17, 2018 8:01 pm
Public TV
Share
2 Min Read
MDK CAUVERY
SHARE

ಮಡಿಕೇರಿ: ನಾಡಿನ ಜೀವನದಿಯಾಗಿರುವ ಕಾವೇರಿ ತಾಯಿಯ ಉಗಮಸ್ಥಾನವಾಗಿರುವ ತಲಕಾವೇರಿಯಲ್ಲಿ ಸಂಜೆ ಸರಿಯಾಗಿ 6.43ರ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿ ಬಂದಿದ್ದಾಳೆ.

ಇಂದು ಸಂಜೆ ಮಹಾಮಂಗಳಾರತಿಯ ನಂತರ ಕಾವೇರಿ ತಾಯಿಯು ತೀರ್ಥ ರೂಪದಲ್ಲಿ ಕಾವೇರಿ ಬ್ರಹ್ಮ ಕುಂಡಿಕೆಯಿಂದ ಹರಿದಿದ್ದಾಳೆ. ಉಗಮದ ನಂತರ ಭಕ್ತರ ದಂಡು ಕಾವೇರಿ ತೀರ್ಥವನ್ನು ಪಡೆಯಲು ಮುಗಿಬಿದ್ದಿದ್ದರು. ವರ್ಷಕ್ಕೊಮ್ಮೆ ನಡೆಯುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಲ್ಲದೇ ಈ ಬಾರಿ ಸಿಎಂ ಕುಮಾರಸ್ವಾಮಿಯವರು ಆಗಮಿಸಿದ್ದು ವಿಶೇಷವಾಗಿತ್ತು.

vlcsnap 2018 10 17 19h58m33s286

ಸಿಎಂ ಕುಮಾರಸ್ವಾಮಿಯವರಿಗೆ, ಸಚಿವರಾದ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹಾಗೂ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯ ಸಾಥ್ ನೀಡಿದ್ದರು. ಇವರಲ್ಲದೇ ಸಂಸದ ಪ್ರತಾಪ್ ಸಿಂಹ ಕೂಡ ಕಾವೇರಿ ತಾಯಿಯ ದರ್ಶನ ಪಡೆದುಕೊಂಡಿದ್ದಾರೆ.

ಬ್ರಹ್ಮಗಿರಿಯ ಮಡಿಲಿನಲ್ಲಿ ಹುಟ್ಟುವ ಕಾವೇರಿ ಮಾತೆ ರಾಜ್ಯದಲ್ಲಿ ಹರಿದು ರೈತರ ಹೊಲಗದ್ದೆಗಳನ್ನು ಹಸಿರಾಗಿಸಿ, ಅನ್ನದಾತೆಯಾಗಿ ಹರಿಯುತ್ತಾಳೆ. ಹಾಗಾಗಿ ಕಾವೇರಿ ನೀರನ್ನು ಬಳಸುವ ಮಂಡ್ಯ, ಮೈಸೂರು, ಬೆಂಗಳೂರು, ಹಾಸನ ಜಿಲ್ಲೆಗಳಿಂದ ಸೇರಿದಂತೆ ದೇಶದ ಹಲವೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

vlcsnap 2018 10 17 19h52m26s050

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಅಲ್ಲಿ ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ಕಾವೇರಿ ಮಾತೆಯ ದರ್ಶನ ಪಡೆಯುತ್ತಾರೆ. ತೀರ್ಥೋದ್ಭವವಾಗುತ್ತಿದ್ದಂತೆ ತೀರ್ಥ ಸಂಗ್ರಹಿಸಲು ಮುಗಿಬೀಳುವ ಜನರು ತೀರ್ಥವನ್ನು ಸಂಗ್ರಹಿಸಿ ಮನೆಗೆ ಕೊಂಡೊಯ್ಯುತ್ತಾರೆ.

ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಹಿನ್ನೆಲೆಯಲ್ಲಿ 12 ಕಿಲೋಮೀಟರ್ ದೂರದಿಂದಲೇ ಬೆಳಕಿನ ವ್ಯವಸ್ಥೆಗಾಗಿ 1,500 ಕ್ಕೂ ಹೆಚ್ಚು ಟ್ಯೂಬ್ ಲೈಟ್ ಗಳು, ತಾತ್ಕಾಲಿಕ ಶೌಚಾಲಯ, ಅನ್ನದಾನಕ್ಕೆ ವ್ಯವಸ್ಥೆ, ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಸೇರಿದಂತೆ 400 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು.

vlcsnap 2018 10 17 19h53m32s280

ಸಂಪ್ರದಾಯಕ್ಕೆ ಸೆಡ್ಡು ಹೊಡೆದ ಸಿಎಂ ಎಚ್‍ಡಿಕೆ?
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಿಎಂ ಕುಮಾರಸ್ವಾಮಿ ಸಂಪ್ರದಾಯಕ್ಕೆ ಸೆಡ್ಡು ಹೊಡೆದು, ಕಾವೇರಿ ತಾಯಿಯ ತೀರ್ಥೋದ್ಭವದಲ್ಲಿ ಭಾಗವಹಿಸಿದ್ದಾರೆ. ವಾಡಿಕೆಯ ಪ್ರಕಾರ ಉನ್ನತ ಸ್ಥಾನದಲ್ಲಿರುವವರು, ಕಾವೇರಿ ತಾಯಿಯ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಾಗಿಯಾದರೆ, ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎನ್ನುವ ಸಂಪ್ರದಾಯ ರೂಢಿಯಲ್ಲಿದೆ. ಹೀಗಾಗಿ ಇದುವರೆಗೂ ಯಾವೊಬ್ಬ ಮುಖ್ಯಮಂತ್ರಿಯೂ ಸಹ ತೀರ್ಥೋದ್ಭವ ಕಾರ್ಯದಲ್ಲಿ ಪಾಲ್ಗೊಂಡಿರಲಿಲ್ಲ.

ಸಿಎಂ ಕುಮಾರಸ್ವಾಮಿ ತೀರ್ಥೋದ್ಭವಕ್ಕೆ ಆಗಮಿಸುತ್ತಾರೆ ಎನ್ನುವ ಬೆನ್ನಲ್ಲೇ, 3 ಕೆಎಸ್‍ಆರ್ ಪಿ ತುಕಡಿ, 8 ಡಿಎಆರ್, 2 ಎಎಎನ್‍ಎಫ್, 5 ಡಿವೈಎಸ್‍ಪಿ, 15 ಸಿಸಿಐ, 25 ಪಿಎಸ್‍ಐ, 80 ಎಎಸ್‍ಐ, 600 ಪಿಸಿ, 100 ಮಹಿಳಾ ಪಿಸಿ, 200 ಜನ ಗೃಹರಕ್ಷ ಕದಳ ಸಿಬ್ಬಂದಿ ಹಾಗೂ ಸುಮಾರು 20ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=Xorj0NG_ABk

TAGGED:cauveryCM KumaraswamymadikeriPublic TVThirthodbhavaಕಾವೇರಿತೀರ್ಥೋದ್ಭವಪಬ್ಲಿಕ್ ಟಿವಿಮಡಿಕೇರಿಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
18 seconds ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
20 minutes ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
20 minutes ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
47 minutes ago
ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
1 hour ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?