Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯದಶಮಿಯ ಹಿನ್ನೆಲೆ ಏನು? ರಾಮಾಯಣ, ಮಹಾಭಾರತಕ್ಕೆ ಏನು ಸಂಬಂಧ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ವಿಜಯದಶಮಿಯ ಹಿನ್ನೆಲೆ ಏನು? ರಾಮಾಯಣ, ಮಹಾಭಾರತಕ್ಕೆ ಏನು ಸಂಬಂಧ?

Karnataka

ವಿಜಯದಶಮಿಯ ಹಿನ್ನೆಲೆ ಏನು? ರಾಮಾಯಣ, ಮಹಾಭಾರತಕ್ಕೆ ಏನು ಸಂಬಂಧ?

Public TV
Last updated: October 15, 2021 7:47 am
Public TV
Share
3 Min Read
jambu savari mysuru 6
Arjuna leads Jamboo Savari –Dasara Procession attracts thousands of people in Mysuru on Friday, October 23, 2015 as Navaratri festival ends. –KPN ### Mysuru Jamboo Savari
SHARE

ಅಶ್ವಯುಜ ಶುಕ್ಲಪಾಡ್ಯದಂದು ಆರಂಭಗೊಂಡು ನವರಾತ್ರಿ ಹಬ್ಬದ ಒಂಭತ್ತು ದಿನಗಳು ಕಳೆದ ನಂತರ ಬರುವ ಹತ್ತನೇ ದಿನವೇ ‘ದಶಮಿ’. ಇದನ್ನೇ ವಿಜಯ ದಶಮಿ ಎಂದು ಕರೆಯುತ್ತಾರೆ. ಈ ದಿನ ಸಂತೋಷದ ಸಾಂಸ್ಕೃತಿಕ, ಧಾರ್ಮಿಕ, ವೈಭವದ ಮೆರವಣಿಗೆ ದೇಶದೆಲ್ಲೆಡೆ ನಡೆಯುತ್ತದೆ.

ವಿಜಯದಶಮಿಯ ಹಿನ್ನೆಲೆ ಏನು?
ಕಾಡೆಮ್ಮೆ ರೂಪದ ಮಹಿಷಾಸುರ ದೀರ್ಘ ತಪಸ್ಸು ಮಾಡಿ, ಯಾವುದೇ ಮನುಷ್ಯನಿಂದ, ದೇವರಿಂದ ಅಥವಾ ವಿಶಿಷ್ಟ ಶಕ್ತಿಯಿಂದ ತನ್ನನ್ನು ಸಂಹರಿಸಲು ಸಾಧ್ಯವಾಗಬಾರದು ಎಂದು ಬ್ರಹ್ಮನಿಂದ ವರವನ್ನು ಪಡೆದಿದ್ದನು. ವರ ಸಿಕ್ಕಿದ ಕೂಡಲೇ ಅಹಂಕಾರದಿಂದ ಜನರಿಗೆ ಮತ್ತು ದೇವತೆಗಳಿಗೆ ತೊಂದರೆ ಕೊಡಲು ಆರಂಭಿಸಿದ. ಈತನ ಉಪಟಳವನ್ನು ತಾಳಲಾರದೇ ದೇವತೆಗಳು ಆದಿಶಕ್ತಿಯನ್ನು ಪೂಜಿಸಿ ಮಹಿಷನನ್ನು ಹತ್ಯೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ಪ್ರಾರ್ಥನೆ ಕೇಳಿದ ದೇವಿ ದುರ್ಗೆಯಾಗಿ ಸಿಂಹದ ಮೇಲೆ ಕುಳಿತು, ಹತ್ತು ಕೈಗಳಲ್ಲಿ ಹತ್ತು ಬಗೆಯ ಆಯುಧಗಳನ್ನು ಹಿಡಿದು ಧರೆಗಿಳಿದಳು. ರಾಕ್ಷಸನಾದ ಮಹಿಷಾಸುರನನ್ನು ದಶಮಿಯ ದಿನ ಸಂಹಾರ ಮಾಡಿದಳು. ಅಂದಿನಿಂದ ದಶಮಿಯಂದು ಮಹಿಷಾಸುರನ್ನು ಕೊಂದು ವಿಜಯ ಸಿಕ್ಕಿದ್ದಕ್ಕೆ `ವಿಜಯದಶಮಿ’ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ.

jambu savari mysuru 7

ರಾಮಾಯಣಕ್ಕೆ ಏನು ಸಂಬಂಧ?
ರಾವಣನನ್ನು ಸಂಹಾರ ಮಾಡುವ ಮೊದಲು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು. ‘ದಶಹರ’ದಂದು ದಶಕಂಠನಾಗಿದ್ದ ರಾವಣನನ್ನು ಶ್ರೀರಾಮನು ಸಂಹರಿಸಿದ ಬಳಿಕ ವಿಜಯೋತ್ಸವ ನಡೆಯಿತು ಎನ್ನುವ ಪ್ರತೀತಿ ಇದೆ. ಹೀಗಾಗಿ ಉತ್ತರಭಾರತ ಕಡೆ ದಸರಾ ಸಮಯದಲ್ಲಿ 10 ದಿನಗಳ ಕಾಲ ರಾಮನ ವಿವಿಧ ಘಟನೆಗಳನ್ನು ವಿವರಿಸುವ ರಾಮಲೀಲಾ ಕಥನ ನಡೆಯುತ್ತದೆ. ದಶಮಿಯಂದು ರಾವಣನ ಆಕೃತಿಯನ್ನು ಸುಡಲಾಗುತ್ತದೆ. ದೆಹಲಿಯಲ್ಲಿ ರಾಷ್ಟ್ರೀಯ ಮಹತ್ವ ಇರುವ ಹಬ್ಬ ಎಂಬಂತೆ ಆಚರಿಸಲಾಗುತ್ತದೆ. ರಾಮಲೀಲಾ ಮೈದಾನದಲ್ಲಿ ಈ ಹಬ್ಬಕ್ಕಾಗಿ ಭಾರೀ ಏರ್ಪಾಡು ನಡೆಯುತ್ತದೆ.

Mysuru Dasara Jambu Savari 2017 8

ಪಾಂಡವರಿಗೂ ಏನು ಸಂಬಂಧ?
ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ. ಪಾಂಡವರು ಒಂದು ವರ್ಷದ ಅಜ್ಞಾತವಾಸವನ್ನು ಮತ್ಸ್ಯದೇಶದಲ್ಲಿ ಕಳೆಯಲು ಮುಂದಾಗುತ್ತಾರೆ. ಈ ದೇಶದ ರಾಜನಾದ ವಿರಾಟನ ಆಸ್ಥಾನದಲ್ಲಿ ಆಗ ಧರ್ಮರಾಜ ಕಂಕಭಟ್ಟನಾದರೆ, ಭೀಮ ಬಾಣಸಿಗನಾದ ವಲಲನಾಗಿ ವೇಷ ಬದಲಾಯಿಸುತ್ತಾರೆ. ಅರ್ಜುನ ಬೃಹನ್ನಳೆಯಾಗಿ ನೃತ್ಯ ಶಿಕ್ಷಕಿಯಾಗಿ ನಕುಲ ಸಹದೇವರು ಅನುಕ್ರಮವಾಗಿ ಅಶ್ವಪಾಲಕ-ಗೋಪಾಲಕರಾದರು. ದ್ರೌಪದಿ ಸೈರಂಧ್ರಿಯಾಗಿ ವಿರಾಟನ ಪತ್ನಿಯಾದ ಸುದೇಷ್ಣೆಯ ಸೇವೆಯಲ್ಲಿ ನಿಂತಳು. ಅಜ್ಞಾತವಾಸದ ಕೊನೆಯಲ್ಲಿ ಕುರುಸೇನೆ ವಿರಾಟನ ರಾಜ್ಯದಲ್ಲಿರುವ ಗೋವುಗಳನ್ನು ಅಪಹರಿಸಿತ್ತು. ಈ ಸಮಯದಲ್ಲಿ ವಿರಾಟನ ಪುತ್ರನಾದ ಉತ್ತರಕುಮಾರ ನಾನು ಕುರುಸೇನೆಯನ್ನು ಸೆದೆ ಬಡಿಯುತ್ತೇನೆ ಎಂದು ಹೇಳಿ ಜಂಬ ಕೊಚ್ಚಿಕೊಂಡು ಯುದ್ಧಕ್ಕೆ ಹೊರಟಿದ್ದ. ಬೃಹನ್ನಳೆಯನ್ನು ಸಾರಥಿಯನ್ನಾಗಿ ಮಾಡಿ ಯುದ್ಧಕ್ಕೆ ಕರೆದುಕೊಂಡು ಹೋದ. ಯುದ್ಧದಲ್ಲಿ ಸೋಲು ಸಮೀಪವಾಗುತ್ತಿದೆ ಎಂದಾಗ  ಉತ್ತರ ಕುಮಾರ ಯುದ್ಧದಿಂದ ಹಿಂದಕ್ಕೆ ಸರಿಯುತ್ತೇನೆ. ದಯವಿಟ್ಟು ಇಲ್ಲಿಂದ ತೆರಳೋಣ ಎಂದು ಹೇಳುತ್ತಾನೆ.  ಈ ವೇಳೆ ಬೃಹನ್ನಳೆ ರೂಪದಲ್ಲಿದ್ದ ಅರ್ಜುನ ಅಜ್ಞಾತವಾಸದ ಸಮಯದಲ್ಲಿ ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರವನ್ನು ತೆಗೆದು ವಿರಾಟರಾಜನ ಶತ್ರುಗಳನ್ನು ಸೋಲಿಸುತ್ತಾನೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಕುರುಸೇನೆಯನ್ನು ವಿರಾಟ ಸೇನೆ ಸೋಲಿಸುತ್ತದೆ. ಈ ವಿಜಯದ ಕುರುಹಾಗಿ ಒಂಭತ್ತನೇ ದಿನ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ.

170930kpn80

ಕಲಿಯುಗದಲ್ಲೂ ಆಚರಣೆ:
ನವಮಿಯಂದು ಆಯುಧಗಳಿಗೆ ಪೂಜೆ ಮಾಡಿ ದಶಮಿಯಂದು ದಂಡಯಾತ್ರೆಗೆ ಹೊರಟರೆ ವಿಜಯ ಸಿದ್ಧಿ ಎನ್ನುವ ನಂಬಿಕೆ ಈ ಹಿಂದೆ ರಾಜರಲ್ಲಿತ್ತು. ಹೀಗಾಗಿ ದಶಮಿಯಂದೇ ಪೂಜೆ ಸಲ್ಲಿಸಿ ದಂಡಯಾತ್ರೆಗೆ ಹೊರಡುತ್ತಿದ್ದರು. ಈ ಪದ್ದತಿ ಈಗಲೂ ಉಳಿದುಕೊಂಡಿದ್ದು, ಸಾಂಕೇತಿಕವಾಗಿ ಕೆಲ ರಾಜವಂಶಸ್ಥರು ಸಾಂಕೇತಿಕವಾಗಿ ತಮ್ಮ ರಾಜ್ಯದ ಗಡಿಯನ್ನು ದಾಟಿ ಮತ್ತೆ ಹಿಂದಿರುಗುತ್ತಾರೆ. ವಿಜಯನಗರಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ಈ ಸೀಮೋಲ್ಲಂಘನ ಮೈಸೂರಿನ ಒಡೆಯರ ಕಾಲದಲ್ಲಿ ಮುಂದುವರಿದಿದೆ.

golden ambari 2

 

TAGGED:DasarakannadamysorePublic TVVijayadashamiನವರಾತ್ರಿಪಾಂಡವರುಮಹಾಭಾರತಮಹಿಷಾಸುರರಾಮಾಯಣರಾವಣವಿಜಯದಶಮಿ
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
13 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
14 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
1 hour ago
Elephant 1
Chikkamagaluru

ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ – ಹೈರಾಣಾದ ಸಾಕಾನೆಗಳು!

Public TV
By Public TV
2 hours ago
Elephant Woman Death
Chikkamagaluru

ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
3 hours ago
Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?