1.5 ಕೋಟಿ ರೂ. ಡೀಲಿಂಗ್ – ಶೃತಿ ಹರಿಹರನ್ ಸ್ಪಷ್ಟನೆ

Public TV
1 Min Read
Shruthi Hariharan 5

ಬೆಂಗಳೂರು: ನನ್ನ ಆಪ್ತರು ಯಾರು, ಯಾರಿಗೂ ಕರೆ ಮಾಡಿಲ್ಲ. ನನ್ನ ಆತ್ಮೀಯ ಗೆಳೆಯ ರಾಮ್ ಕರೆ ಮಾಡಿ, ದುಡ್ಡಿಗೆ ಡಿಮ್ಯಾಂಡ್ ಮಾಡಿಲ್ಲ ಎಂದು ನಟಿ ಶೃತಿ ಹರಿಹರನ್ ಸ್ಪಷ್ಟನೆ ನೀಡಿದ್ದಾರೆ.

ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಅನಾಮಿಕರೊಬ್ಬ ಕರೆ ಮಾಡಿರುವ ವಿಚಾರವಾಗಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಶೃತಿ ಹರಿಹರನ್, ಇದು ಸುಳ್ಳು ಆರೋಪ. ನಮ್ಮ ಅಪ್ಪ, ಅಮ್ಮ, ಅಜ್ಜಿ, ತಾತ ಹಾಗೂ ಸಂಬಂಧಿಕರನ್ನು ನಾನು ಕರೆದುಕೊಂಡು ಬಂದಿಲ್ಲ. ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಕುಟುಂಬದವರ ಅಥವಾ ಸ್ನೇಹಿತರ ಸಹಾಯ ಪಡೆಯುವುದಿಲ್ಲ. ಅಷ್ಟೇ ಅಲ್ಲದೆ ನನ್ನ ಆಪ್ತ ರಾಮ್ ಈ ವಿಚಾರದಲ್ಲಿ ತಲೆ ಹಾಕಿಲ್ಲ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಶೃತಿ ಪರ ಬ್ಯಾಟ್ ಬೀಸಿ ಈಗ ಉಲ್ಟಾ ಹೊಡೆದ ನಟ ಪ್ರಕಾಶ್ ರೈ

Sruthi Arjun 1 1024x442 1

ಆಗಿದ್ದೇನು?:
ಮೀ ಟೂ ಆರೋಪ ಮಾಡಿದ ಮರುದಿನವೇ ಅನಾಮಿಕರೊಬ್ಬರು ನಟ ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಕರೆ ಮಾಡಿದ್ದಾನೆ. ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಅಂತಾ ಬೇಡಿಕೆ ಇಟ್ಟಿದ್ದಾನೆ ಎಂದು ಶಿವಾರ್ಜುನ್ ತಿಳಿಸಿದ್ದರು. ಇದನ್ನು ಓದಿ: ಚೇತನ್ ಫೈರ್ ಸಂಸ್ಥೆಯಿಂದ ಪ್ರಿಯಾಂಕ ಉಪೇಂದ್ರ ಎಕ್ಸಿಟ್!

ಕರೆ ಮಾಡಿದ ವ್ಯಕ್ತಿ ಯಾವುದೇ ಪರಿಚಯ ಹೇಳಿಕೊಳ್ಳದೇ ಮಾತಿಗೆ ಇಳಿದಿದ್ದಾನೆ. ತಮ್ಮ ಬೇಡಿಕೆ ತಿಳಿಸುತ್ತಿದ್ದಂತೆ ಫೋನ್ ಕಟ್ ಮಾಡಿದ್ದ. ಇಬ್ಬರ ಆರೋಪ ಪ್ರತ್ಯಾರೋಪದ ಲಾಭ ಪಡೆಯಲು ಮೂರನೇ ವ್ಯಕ್ತಿ ಈ ರೀತಿ ಕರೆ ಮಾಡಿರಬಹುದಾ ಎನ್ನುವ ಶಂಕೆ ವ್ಯಕ್ತವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Sruthi hariharan

Share This Article
Leave a Comment

Leave a Reply

Your email address will not be published. Required fields are marked *