Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿವಾಹಿತ ಮಹಿಳೆಗೆ ಐ ಲವ್ ಯೂ ಅಂತಾ ಮೆಸೇಜ್ ಕಳುಹಿಸಿ ಬಲಿಯಾದ ಪ್ರೇಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿವಾಹಿತ ಮಹಿಳೆಗೆ ಐ ಲವ್ ಯೂ ಅಂತಾ ಮೆಸೇಜ್ ಕಳುಹಿಸಿ ಬಲಿಯಾದ ಪ್ರೇಮಿ

Bengaluru City

ವಿವಾಹಿತ ಮಹಿಳೆಗೆ ಐ ಲವ್ ಯೂ ಅಂತಾ ಮೆಸೇಜ್ ಕಳುಹಿಸಿ ಬಲಿಯಾದ ಪ್ರೇಮಿ

Public TV
Last updated: October 31, 2018 10:51 pm
Public TV
Share
2 Min Read
ELECTRONIC CITY POLICE ARREST copy
SHARE

– ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಂದು ಸಿಕ್ಕಿಬಿದ್ದ ಪತಿ!

ಬೆಂಗಳೂರು: ಒಪ್ಪಿತ ಅಕ್ರಮ ಸಂಬಂಧ ಅಪರಾಧವಲ್ಲ ಅಂತ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದರೆ ಪತಿಯೊಬ್ಬ ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡು ಸಿನಿಮಿ ರೀತಿಯಲ್ಲಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿ ಪತಿ ಹಾಗೂ ಕೃತ್ಯಕ್ಕೆ ಸಹಾಯ ಮಾಡಿದ್ದ ಆತನ ಸ್ನೇಹಿತನ್ನು ಪೊಲೀಸರು ಬಂಧಿಸಿದ್ದಾರೆ.

ಪತಿ ಗಂಗರಾಜ್ (28) ಹಾಗೂ ಆತನ ಸ್ನೇಹಿತ ಕೃಷ್ಣ ಬಂಧಿತ ಆರೋಪಿಗಳು. ಆಂಧ್ರಪ್ರದೇಶ ಮೂಲದ ಚಕ್ರಾಧರ (28) ಕೊಲೆಯಾದ ದುರ್ದೈವಿ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯ ಚಿಕ್ಕ ತೋಗೂರಿನಲ್ಲಿ ಇದೇ ತಿಂಗಳ 25ರಂದು ಅರೆನಗ್ನ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ತನಿಖೆ ಆರಂಭಿಸಿದ್ದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?:
ಕೊಲೆಯಾದ ಚಕ್ರಾಧರ ಖಾಸಗಿ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದು, ದೊಡ್ಡ ತೋಗೂರಿನಲ್ಲಿ ವಾಸವಾಗಿದ್ದ. ತಾನು ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಹೀಗೆ ಸುಮಾರು ದಿನಗಳಿಂದ ಇಬ್ಬರ ಮಧ್ಯ ಸಂಬಂಧ ನಡೆದಿತ್ತು. ಒಂದು ದಿನ ಚಕ್ರಾಧರ ಆಕೆಯ ಮೊಬೈಲ್‍ಗೆ ಐ ಲವ್ ಯೂ ಎಂದು ಮೆಸೇಜ್ ಮಾಡಿದ್ದ. ಇದನ್ನು ನೋಡಿದ್ದ ಮಹಿಳೆಯ ಪತಿ ಗಂಗರಾಜ್ ಕೆಂಡಾಮಂಡಲನಾಗಿ, ಪ್ರತೀಕಾರ ತೀರಿಸಿಕೊಳ್ಳಲು ನಿರ್ಧರಿಸಿದ್ದ.

ಗಂಗರಾಜ್ ತನ್ನ ಪತ್ನಿಯ ಮೊಬೈಲ್‍ನಿಂದ ಚಕ್ರಾಧರನಿಗೆ ರಿಪ್ಲೈ ಮಾಡಿ ಮನೆಗೆ ಕರೆಸಿಕೊಂಡಿದ್ದ. ಕೊಲೆಗೆ ಸಂಚು ರೂಪಿಸಿದ್ದ ಗಂಗರಾಜ್ ತನ್ನ ಸ್ನೇಹಿತ ಕೃಷ್ಣ ಎಂಬವನನ್ನು ಮನೆಗೆ ಕರೆಸಿಕೊಂಡಿದ್ದ. ಇತ್ತ ಚಕ್ರಾಧರ ಪ್ರಿಯತಮೆಯ ಮೆಸೇಜ್ ನೋಡಿ ಖುಷಿಯಿಂದ ಮನೆಯತ್ತ ಓಡೋಡಿ ಬಂದಿದ್ದ. ಆದರೆ ಚಕ್ರಧರ ಮನೆ ಒಳಗೆ ಬರುತ್ತಿದ್ದಂತೆ ಆತನಿಗೆ ಆಘಾತವೇ ಕಾದಿತ್ತು.

ಪ್ರಿಯತಮೆ ಬದಲಾಗಿ ಆಕೆಯ ಪತಿಯನ್ನು ಕಂಡ ಚಕ್ರಾಧರ ಒಂದು ಕ್ಷಣ ಕಕ್ಕಾಬಿಕ್ಕಿಯಾಗಿದ್ದ. ತಕ್ಷಣವೇ ಆತನ್ನು ಮನೆಯ ಒಳಗಡೆ ಎಳೆದುಕೊಂಡ ಗಂಗರಾಜ್ ಹಾಗೂ ಕೃಷ್ಣಾ ಹಿಗ್ಗಾಮುಗ್ಗಾ ಥಳಿಸಿ, ಗುಪ್ತಾಂಗಕ್ಕೆ ಹೊಡೆದು ಕೊಲೆಗೈದಿದ್ದರು. ಬಳಿಕ ಮೃತ ಚಕ್ರಾಧರ ದೇಹವನ್ನು ಚಿಕ್ಕತೋಗೂರಿನ ರಸ್ತೆಯಲ್ಲಿ ಬಿಸಾಡಿ ಹೋಗಿದ್ದರು. ಅರೆನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಕ್ಕಿಬಿದ್ದಿದ್ದು ಹೇಗೆ?:
ಅರೆನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಚಕ್ರಾಧರನನ್ನು ಪರಿಶೀಲನೆ ನಡೆಸಿದಾಗ, ಆತನ ಬಳಿ ಇದ್ದ ವಸ್ತುಗಳನ್ನು ಹಾಗೂ ಮೊಬೈಲ್ ವಶಕ್ಕೆ ಪಡೆದಿದ್ದರು. ಚಕ್ರಾಧರ ಬಳಿ ಸಿಕ್ಕ ದಾಖಲೆಗಳ ಪ್ರಕಾರ ಆತ, ಆಂಧ್ರಪ್ರದೇಶ ಯುವಕ ಹಾಗೂ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಬಳಿಕ ಆತನ ಮೊಬೈಲ್ ನಲ್ಲಿ ಕಾಲ್ ಹಾಗೂ ಮೆಸೇಜ್ ಮಾಹಿತಿ ಪಡೆದ ಪೊಲೀಸರು, ಗಂಗರಾಜ್ ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಕೆಯ ಪತಿಯೇ ಈ ಕೃತ್ಯ ಎಸಗಿದ್ದಾನೆ ಅಂತ ಪೊಲೀಸರಿಗೆ ಶಂಕೆ ವ್ಯಕ್ತವಾಗಿದ್ದು, ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆರೋಪಿ ನಡೆದ ಘಟನೆ ಹೇಳಿಕೊಂಡಿದ್ದಾನೆ. ಕೃತ್ಯಕ್ಕೆ ಸಹಾಯ ಮಾಡಿದ್ದ ಗಂಗರಾಜ್ ಸ್ನೇಹಿತ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengaluruhusbandillegal relationshipMurderpolicePublic TVWifeಅಕ್ರಮ ಸಂಬಂಧಕೊಲೆಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

mlc c t ravi has been elected as the president and dinesh hosur as the vice president of the chikkamagaluru district central cooperative bank
Chikkamagaluru

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Public TV
By Public TV
12 minutes ago
Ayatollah Ali Khamenei 1
Latest

ಈ ಬಾರಿ ಪ್ರಾದೇಶಿಕ ಯುದ್ಧವಾಗಿರುತ್ತೆ – ಅಮೆರಿಕಕ್ಕೆ ಖಮೇನಿ ಎಚ್ಚರಿಕೆ

Public TV
By Public TV
24 minutes ago
Siddaramaiah 2
Districts

ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡ್ತೀವಿ: ಸಿದ್ದರಾಮಯ್ಯ

Public TV
By Public TV
25 minutes ago
BY Vijayendra 1
Districts

ದೇಶದ ಬಡವರು, ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯ ಬಜೆಟ್ ಮಂಡನೆಯಾಗಿದೆ: ಬಿವೈವಿ

Public TV
By Public TV
40 minutes ago
Rahul Gandhi Mallikarjun Kharge
Latest

ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ

Public TV
By Public TV
1 hour ago
Budget 2026 1
Bengaluru City

Union Budget 2026 | ಏ.1 ರಿಂದ ಹೊಸ ಆದಾಯ ತೆರಿಗೆ ನೀತಿ, 7 ಅಪರೂಪದ ಕಾಯಿಲೆಗಳ ಔಷಧಿ ಅಗ್ಗ – ಯಾವುದು ದುಬಾರಿ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?