ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರಿಂದ ನೀತಿ ಸಂಹಿತೆ ಉಲ್ಲಂಘನೆ

Public TV
1 Min Read
anand nyame gowda

ಬಾಗಲಕೋಟೆ: ಜಮಖಂಡಿ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮ ಗೌಡ ಅವರು ಚುನಾವಣೆಯಂದೇ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಮತಗಟ್ಟೆ ಕೇಂದ್ರದ ಆವರಣದಲ್ಲೆ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಜಮಖಂಡಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಆರತಿ ಬೆಳಗಿದ ಮಹಿಳೆಯ ತಟ್ಟೆಯಲ್ಲಿ 100 ರೂಪಾಯಿ ನೋಟು ಇಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

BGK NYAMAGOWDA AV 1 copy

ಆನಂದ ನ್ಯಾಮಗೌಡ ಅವರು ನಾಗನೂರ ಗ್ರಾಮದ ಮತಗಟ್ಟೆ ಸಂಖ್ಯೆ 97 ಹಾಗೂ 98ಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮತಗಟ್ಟೆ ಕೇಂದ್ರದಲ್ಲಿ ಮಹಿಳೆಯರು ಆರತಿ ಬೆಳಗಿದ್ದಾರೆ. ಇದೇ ಸಂದರ್ಭದಲ್ಲಿ ನ್ಯಾಮಗೌಡ ಆರತಿ ತಟ್ಟೆಯಲ್ಲಿ 100 ರೂಪಾಯಿ ನೋಟು ಇಟ್ಟಿದ್ದಾರೆ.

BGK NYAMAGOWDA AV 2 copy

ಮಹಿಳೆಯರಿಂದ ಮತದಾನ ಜಾಗೃತಿ:
ಜಮಖಂಡಿ ತಾಲೂಕಿನ ನಾಗನೂರಿನಲ್ಲಿ ಆಶಾ ಕಾರ್ಯಕರ್ತೆಯರು ವಿಶಿಷ್ಟವಾಗಿ ಮತದಾರರಲ್ಲಿ ಜಾಗೃತಿ ಮೂಡಿಸಿದ್ದಾರೆ. ನಾಗನೂರ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿರುವ 97 ಹಾಗೂ 98 ಮತಗಟ್ಟೆಯಲ್ಲಿ ಮತದಾರರಿಗೆ ಆರತಿ ಬೆಳಗಿದ್ದಾರೆ. ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತದಾನಕ್ಕೆ ಆಗಮಿಸುತ್ತಿರುವ ಪ್ರತಿಯೊಬ್ಬರಿಗೂ ಕುಂಕುಮ ಹಚ್ಚಿ, ಆರತಿ ಬೆಳಗಿದ್ದಾರೆ.

BGK NYAMAGOWDA AV 3 copy

ಮತದಾನಕ್ಕೆ ಬಂದವರಿಗೆ ಆರತಿ ಎತ್ತಿ ಪೂಜೆ ಸಲ್ಲಿಸುವ ಮೂಲಕ ಆಶಾ ಕರ್ಯಕರ್ತೆಯರ ಮತದಾನದ ಜಾಗೃತಿ ಕೆಲಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

BGK MATHADANA JAGRUTHI AV 2 copy

Share This Article
Leave a Comment

Leave a Reply

Your email address will not be published. Required fields are marked *