Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೆರೆಮರೆಯಲ್ಲಿ ಶ್ರೀರಾಮುಲುಗೆ ಖೆಡ್ಡಾ ತೋಡಿದ್ರಾ ಕುಚುಕು ಗೆಳೆಯ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತೆರೆಮರೆಯಲ್ಲಿ ಶ್ರೀರಾಮುಲುಗೆ ಖೆಡ್ಡಾ ತೋಡಿದ್ರಾ ಕುಚುಕು ಗೆಳೆಯ?

Bengaluru City

ತೆರೆಮರೆಯಲ್ಲಿ ಶ್ರೀರಾಮುಲುಗೆ ಖೆಡ್ಡಾ ತೋಡಿದ್ರಾ ಕುಚುಕು ಗೆಳೆಯ?

Public TV
Last updated: November 6, 2018 5:12 pm
Public TV
Share
2 Min Read
Reddy SriRamulu 2
SHARE

ಬೆಂಗಳೂರು: ಬಳ್ಳಾರಿ ಉಪಚುನಾವಣೆಯಲ್ಲಿ ಶ್ರೀರಾಮುಲು ಸೋಲಿಗೆ ತೆರೆಮರೆಯಲ್ಲಿ ಕುಚುಕು ಗೆಳೆಯ ಜನಾರ್ದನ ರೆಡ್ಡಿ ಹೇಳಿಕೆಯೇ ಮುಳುವಾಯ್ತಾ ಎನ್ನುವ ಚರ್ಚೆಯೊಂದು ಈಗ ಬಳ್ಳಾರಿಯಲ್ಲಿ ಆರಂಭವಾಗಿದೆ.

ಹೌದು, ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 2.43 ಲಕ್ಷಕ್ಕೂ ಅಧಿಕ ಮತ ಪಡೆಯುವ ಮೂಲಕ ಜೆ.ಶಾಂತಾರನ್ನು ಸೋಲಿಸಿದ್ದಾರೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆ ಶಾಸಕ ಶ್ರೀರಾಮುಲು ಬಿಜೆಪಿ ಅಭ್ಯರ್ಥಿ ಹಾಗು ಸೋದರಿ ಜೆ.ಶಾಂತಾ ಪರವಾಗಿ ಏಕಾಂಗಿಯಾಗಿ ಹೋರಾಟ ನಡೆಸಿದ್ದರು. ತಮ್ಮ ರಾಜೀನಾಮೆಯಿಂದ ತೆರವಾದ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಬೇಕೆಂಬ ಹಠವು ಶ್ರೀರಾಮುಲು ಅವರಲ್ಲಿ ಕಂಡಿತ್ತು. ಫಲಿತಾಂಶಕ್ಕೂ ಮುನ್ನ ಶ್ರೀರಾಮುಲು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಕಡಿಮೆ ಅಂತರದಿಂದ ಗೆಲುವು ಕಾಣುತ್ತೇವೆ ಎಂದು ಸ್ಫರ್ಧೆ ಕಠಿಣವಾಗಿದೆ ಎಂದು ಸೂಚನೆಯನ್ನು ನೀಡಿದ್ದರು.

Reddy SriRamulu 1

ಬಳ್ಳಾರಿಯಲ್ಲಿ ಅಭ್ಯರ್ಥಿಗಳು ನೆಪಕ್ಕೆ ಮಾತ್ರ. ಇಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವರ್ಸಸ್ ಶ್ರೀರಾಮುಲು ನಡುವಿನ ಯುದ್ಧವೆಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಣೆ ಕೇಳಿಬಂದಿತ್ತು. ಚುನಾವಣೆಗೂ ಮುನ್ನ ಮಾಜಿ ಸಚಿವ ಜನಾರ್ದನ ರೆಡ್ಡಿ ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ನನ್ನ ಶಾಪದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯರ ಪುತ್ರ ರಾಕೇಶ್ ನಿಧನರಾಗಿದ್ದು ಎಂದು ಹೇಳುವ ಮೂಲಕ ಸಾವಿನಲ್ಲೂ ರಾಜಕೀಯ ಮಾಡಿದ್ದರು. ಇದೇ ಹೇಳಿಕೆಯನ್ನು ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಬಳ್ಳಾರಿ ಜನತೆಯನ್ನು ಭಾವನಾತ್ಮಕವಾಗಿ ಸೆಳೆದುಕೊಂಡರು. ಅಷ್ಟೇ ಅಲ್ಲದೇ ಸಿದ್ದರಾಮಯ್ಯನವರು ಭಾವನಾತ್ಮಕ ಟ್ವೀಟ್ ಮಾಡಿ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾದರು.

ರೆಡ್ಡಿ ಹೇಳಿಕೆಗೆ ಸ್ವಪಕ್ಷಿಯರಿಂದಲೇ ಖಂಡನೆ ವ್ಯಕ್ತವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಹ ಖಂಡಿಸಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದರು. ಇದಾದ ನಂತರ ರೆಡ್ಡಿ ಕ್ಷಮೆ ಕೇಳಿ ವಿಚಾರವನ್ನು ತಣ್ಣಗೆ ಮಾಡುವ ಪ್ರಯತ್ನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಕಾಣಬೇಕಾಯಿತು ಎಂದು ವಿಶ್ಲೇಷಣೆ ಕೇಳಿಬಂದಿದೆ. ಪ್ರತಿಯೊಂದು ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡುವ ಜನಾರ್ದನ ರೆಡ್ಡಿ ಉದ್ದೇಶ ಪೂರ್ವಕವಾಗಿಯೇ ಈ ರೀತಿ ಹೇಳಿದ್ರಾ ಎನ್ನುವ ಚರ್ಚೆ ಈಗ ಆರಂಭವಾಗಿದೆ.

SIDDU REDDY

ಚರ್ಚೆ ಹುಟ್ಟಿದ್ದು ಹೇಗೆ?
ಶ್ರೀರಾಮುಲು ಬಳ್ಳಾರಿಯಲ್ಲಿ ಮೆರೆಯುತ್ತಿದ್ದಾರೆ. ಆದ್ರೆ ಈ ಅಧಿಕಾರಕ್ಕೆ ಮೂಲ ಕಾರಣವಾದ ಪತಿ ಬಳ್ಳಾರಿಗೆ ಬಾರದೇ ಸಂಕಷ್ಟದಲ್ಲಿದ್ದಾರೆ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣಾ ಅಸಮಾಧಾನಗೊಂಡಿದ್ದರಂತೆ. ಈಗ ಶಾಸಕರಾಗಿರುವ ಶ್ರೀರಾಮುಲು ಗೆಳೆಯನ ಸಂಕಷ್ಟದಲ್ಲಿಯೂ ಭಾಗಿ ಅಗುತ್ತಿಲ್ಲ. ಎಂದು ಅರುಣಾ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರಂತೆ. ಹೀಗಾಗಿ ಮತದಾನಕ್ಕೂ ಮುನ್ನ ಜನಾರ್ದನ ರೆಡ್ಡಿ ಪಕ್ಷಕ್ಕೆ ಹಾನಿಯುಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎನ್ನುವ ಚರ್ಚೆಗಳು ಬಳ್ಳಾರಿಯ ರಾಜಕೀಯ ಅಂಗಳದಲ್ಲಿ ಆರಂಭಗೊಂಡಿವೆ.

ಸೋಲು ಅನಾಥ:
ಫಲಿತಾಂಶ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀರಾಮುಲು, ಸೋಲು ಅನಾಥ, ಸಹೋದರಿ ಶಾಂತ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರಕ್ಕೆ ಬಂದಿದ್ದರು. ಶಾಸಕರಾದ ಸೋಮಣ್ಣ, ಸಿ.ಟಿ.ರವಿ ಸೇರಿದಂತೆ ಅನೇಕ ನಾಯಕರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಆದರೆ ಜಿಲ್ಲೆಯ ಜನರು ನಮ್ಮನ್ನು ತಿರಸ್ಕಾರ ಮಾಡಿದ್ದಾರೆ. ನಮ್ಮ ಕಾರ್ಯಕರ್ತರು ಗೆಲುವಿಗಾಗಿ ಹರಸಾಹಸ ಪಟ್ಟಿದ್ದರು. ಆದರೆ ಭಗವಂತ ನಮಗೆ ಫಲ ಕೊಟ್ಟಿಲ್ಲ. ಆದರೆ ಸರ್ಕಾರವನ್ನು ದುರುಪಯೋಗ ಪಡೆಸಿಕೊಂಡು ವಿ.ಎಸ್.ಉಗ್ರಪ್ಪ ಅವರನ್ನು ಗೆಲ್ಲಿಸಲಾಗಿದೆ. ಜಿಲ್ಲೆಯ ಜನರು ನನಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಈಗ ಕೈ ಬಿಟ್ಟರು ಅಂತಾ ನಾನು ಅವರನ್ನು ದ್ವೇಷಿಸುವುದಿಲ್ಲ ಎಂದು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bellarybjpcongressJanardhan ReddyKarnataka By Election 2018Public TVsriramuluಕರ್ನಾಟಕ ಉಪಚುನಾವಣೆ 2018ಕಾಂಗ್ರೆಸ್ಜನಾರ್ದನ ರೆಡ್ಡಿಪಬ್ಲಿಕ್ ಟಿವಿಬಳ್ಳಾರಿಬಿಜೆಪಿಶ್ರೀರಾಮುಲು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
4 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
4 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
4 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?