ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮದ್ಯದ ಖಾಲಿ ಬಾಟಲಿಗಳು ಹಾಗೂ ಮಹಿಳೆಯರ ಚಪ್ಪಲಿಗಳನ್ನು ಪೋಸ್ಟ್ ಮಾಡುವ ಮೂಲಕ ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಚಾಮರಾಜನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ರಸ್ತೆ ತಡೆದು ಪ್ರತಿಭಟಿಸಿದ ರೈತರು, ಮಣ್ಣಿನ ಮಗ ಎಂದು ಹೇಳಿಕೊಳ್ಳುವ ಸಿಎಂ ಕುಮಾರಸ್ವಾಮಿ ಕುಡಿದ ನಶೆಯಲ್ಲಿ ರೈತ ಮಹಿಳೆಯನ್ನು ಎಲ್ಲಿ ಮಲಗಿದ್ದೆ ಎಂದು ಕೇಳುತ್ತಾರೆ. ಪ್ರತಿಭಟನಾನಿರತ ರೈತರನ್ನು ಗೂಂಡಾಗಳು ಎಂದು ಹೀಯಾಳಿಸುತ್ತಾರೆ. ಇವರ ಹೇಳಿಕೆಯಿಂದ ಇಡೀ ರೈತ ಸಮುದಾಯಕ್ಕೆ ಹಾಗು ರೈತ ಮಹಿಳೆಯರಿಗೆ ಅವಮಾನವಾಗಿದ್ದು, ಕೂಡಲೇ ಅವರು ರೈತರ ಕ್ಷಮೆ ಕೇಳಬೇಕೆಂದು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಕೆ.ಗುರುಪ್ರಸಾದ್ ಆಗ್ರಹಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews