ಡಿ.ಕೆ.ಶಿವಕುಮಾರ್ ಆಪರೇಷನ್ ಕಮಲಕ್ಕೆ ಒಳಗಾಗಿಲ್ಲ: ಸಚಿವ ಕೃಷ್ಣಬೈರೇಗೌಡ

Public TV
2 Min Read
D.K.Shivakumar Krishna Byre Gowda

ಬಾಗಲಕೋಟೆ: ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆ ಬಗ್ಗೆ ಚರ್ಚಿಸಲು ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಇಂದು ನಗರಕ್ಕೆ ಆಗಮಿಸಿ ಮಾತನಾಡಿದ ಸಚಿವರು, ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದ ಜಿಲ್ಲೆಯ ಜನಪ್ರತಿನಿಧಿ. ಹೀಗಾಗಿ ನೀರಾವರಿ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ಮಾಡಲಾಗು ಡಿ.ಕೆ.ಶಿವಕುಮಾರ್ ಅವರನ್ನು ಭೇಡಿ ಮಾಡಿದ್ದಾರೆ. ಏನೋ ಆಗೋದಿದ್ದರೆ ಆಗುತ್ತದೆ. ಅಂತಹ ವಿಶೇಷತೆ ಏನು ನಡೆದಿಲ್ಲ ಎಂದು ನಗುತ್ತಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

Krishna Byre Gowda

ಆಪರೇಷನ್ ಕಮಲದ ವಿಚಾರವಾಗಿ ಮಾತನಾಡಿ ಸಚಿವರು, ಬಿಜೆಪಿ-ಮಾಧ್ಯಮಗಳು ಆಪರೇಷನ್ ಕಮಲವನ್ನು ಆಕಾಶದ ಮಟ್ಟಕ್ಕೆ ಬೆಳಿಸಿದ್ದೀರಿ. ಸಮ್ಮಿಶ್ರ ಸರ್ಕಾರ ಬಂದಾಗಿನಿಂದಲೂ ಕ್ಷಣಗಣನೆ ನಡೆಯುತ್ತಲಿದೆ. ಬಿಜೆಪಿ ಗಂಟೆ, ಈ ದಿನಾಂಕ, ಈ ಘಳಿಗೆ ಸಹಿತ ಗಡುವು ಕೊಡುತ್ತಾ ಬಂದಿವೆ. ಸರ್ಕಾರ ಆರು ತಿಂಗಳು ಪೂರೈಸಿದೆ. ಅದೇ ರೀತಿ ನಮ್ಮ ಕೆಲಸವನ್ನು ಐದು ವರ್ಷ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಪ್ರಯತ್ನ ಮಾಡಬೇಕಿದೆ. ಆಡಳಿತ ಸಹ ಚುರುಕು ಗೊಳಿಸಬೇಕಾಗಿದೆ. ಬರಗಾಲ ಎದುರಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದ ಸಚಿವರು, ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡುವ ಪ್ರಯತ್ನ ನಡೆದಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕಾಂಗ ಪಕ್ಷದ ನಾಯಕರು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಿದರು.

Krishna Byre Gowda 1

ನನ್ನ ಪದ ಬಳಕೆಗೆ ಬೇರೆ ಅರ್ಥವನ್ನು ಮಾಧ್ಯಮಗಳು ಕಲ್ಪಿಸಿದರೆ ಅದಕ್ಕೆ ನಾನು ಜವಾಬ್ದಾರನಲ್ಲ. ಸಿಎಂ ಕುಮಾರಸ್ವಾಮಿ ಎರಡು ದಿನಗಳ ಹಿಂದೆ ಎಲ್ಲ ಸಿಇಓ, ಜಿಲ್ಲಾಧಿಕಾರಿಗಳ ಸಭೆ ನಡೆಸಿದ್ದಾರೆ. ಜನಗಳ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಸೂಚನೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ನಾನು ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಪ್ರವಾಸ ಮಾಡುತ್ತಿರುವೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *