ನಂಗೆ ತುಂಬಾ ಹೊಟ್ಟೆ ಹಸಿವಾದಾಗ ಊಟ ಹಾಕಿದ ಮೊದ್ಲ ವ್ಯಕ್ತಿ ಅಂಬರೀಶ್: ಭಾವುಕರಾದ ಸೋನು

Public TV
2 Min Read
SONU AMBI
ಕೃಪೆ: ಕಲರ್ಸ್ ಸೂಪರ್

ಬೆಂಗಳೂರು: ಹಿರಿಯ ನಟ ಅಂಬರೀಶ್ ಸಾವಿನ ಸುದ್ದಿಯಲ್ಲಿ ಹೊರ ಜಗತ್ತಿನ ಸಂಪರ್ಕವಿಲ್ಲದೇ ಇರುವ ಬಿಗ್‍ಬಾಸ್ ಸ್ಪರ್ಧಿಗಳಿಗೇ ಶನಿವಾರದ ಸಂಚಿಕೆಯಲ್ಲಿ ತಿಳಿಸಲಾಗಿತ್ತು. ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.

ಭಾನುವಾರದ ಸಂಚಿಕೆಯಲ್ಲಿ ದಿವಂಗತ ಅಂಬರೀಶ್ ಅವರಿಗೆ ಬಿಗ್‍ಬಾಸ್ ಸ್ಪರ್ಧಿಗಳು ಹಾಡುಗಳನ್ನು ಹೇಳುವ ಮೂಲಕ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದರು. ಈ ವೇಳೆ ಸ್ಪರ್ಧಿಗಳು ಅಂಬರೀಶ್ ಬಗ್ಗೆ ತನ್ನ ಅನಿಸಿಕೆಗಳನ್ನು ಹೇಳಿಕೊಂಡಿದ್ದರು.

ambi darshan

ಸೋನು ಪಾಟೀಲ್ ಮಾತನಾಡಿ, ಈಗಾಗಲೇ ನಾನು ಬೆಂಗಳೂರಿಗೆ ಬಂದು ತುಂಬಾ ಕಷ್ಟ ಪಟ್ಟಿದ್ದೀನಿ ಅಂತ ನಿಮೆಲ್ಲರಿಗೂ ಗೊತ್ತಿದೆ. ನಾನು ಬೆಂಗಳೂರಿಗೆ ಬಂದು ಅಂಬರೀಶ್ ಅವರ ಮನೆಯಲ್ಲಿ ಹೊಟ್ಟೆ ತುಂಬಾ ಊಟ ಮಾಡಿದ್ದೇನೆ. ನಾನು ನಗರಕ್ಕೆ ಬಂದಾಗ ಹಣ ಮತ್ತು ತಿನ್ನಲೂ ಊಟವೂ ಇರಲಿಲ್ಲ. ಕೆಲಸಕ್ಕಾಗಿ ಅಲೆದಾಡುತ್ತಿದ್ದೆ. ಆಗ ಜೆ.ಪಿ ನಗರದಲ್ಲಿ ಯಾವುದೋ ಕೆಲಸ ಇದೆ ಎಂದು ಹೇಳಿದಾಗ ನಾನು ಅಲ್ಲಿಗೆ ಹೋದೆ.

ನಮ್ಮ ತಾಯಿ ಅಂಬರೀಶ್ ಅವರ ಅಭಿಮಾನಿ. ಆದ್ದರಿಂದ ನಾನು ಒಮ್ಮೆ ಅಂಬರೀಶ್ ಅವರನ್ನು ಭೇಟಿ ಮಾಡಬೇಕು ಎಂದು ಅವರ ಮನೆಗೆ ಹೋಗಿದ್ದೆ. ನಾವು ಉತ್ತರ ಕರ್ನಾಟಕದವರು, ನಮ್ಮ ತಂದೆ ಒಬ್ಬ ರೈತರು, ಈಗ ಅವರಿಗೆ ಹೃದಯ ಕಸಿಮಾಡಿಸಬೇಕು ಎಂದು ಹೇಳಿಕೊಂಡೆ. ನಾನು ಉತ್ತರ ಕರ್ನಾಟಕ ಎಂದಾಕ್ಷಣ, ಅವರು ನೀವು ಕಲಾವಿದರಿಗೆ ಬಹಳ ಗೌರವ ಕೊಡುತ್ತೀರಿ. ನಿಮ್ಮನ್ನು ಗೌರವಿಸಬೇಕಾದುದ್ದು ನಮ್ಮ ಕರ್ತವ್ಯ ಎಂದು ಕೂರಿಸಿಕೊಂಡು ಮಾತನಾಡಿಸಿದರು ಅಂತ ಸೋನು ಹೇಳಿಕೊಂಡಿದ್ದಾರೆ.

SONU 2

ಕೃಪೆ: ಕಲರ್ಸ್ ಸೂಪರ್

ಅವರು ನೀನು ಊಟ ಮಾಡಿ ಬಹಳ ದಿನವಾಗಿದೆ ಅನ್ನಿಸುತ್ತಿದೆ, ಊಟ ಮಾಡು ಎಂದು ಹೇಳಿದರು. ನಿಜ ಹೇಳಬೇಕು ಅಂದರೆ ನನಗೆ ತುಂಬಾ ಹೊಟ್ಟೆ ಹಸಿವಾಗುತ್ತಿತ್ತು. ಕೊನೆಗೆ ಅವರ ಪಕ್ಕದಲ್ಲಿಯೇ ಕೂರಿಸಿಕೊಂಡು ಊಟ ಹಾಕಿದರು. ಅದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ ತುಂಬಾ ಹೊಟ್ಟೆ ಹಸಿವಾದಾಗ ನನಗೆ ಊಟ ಹಾಕಿದ ಮೊದಲ ವ್ಯಕ್ತಿ ಅವರಾಗಿದ್ದಾರೆ. ಇಂದು ಅವರು ನಮ್ಮ ಮಧ್ಯೆ ಇಲ್ಲ. ಆದರೆ ನಮ್ಮ ಮನಸ್ಸಿನಲ್ಲಿ ಸದಾ ಇರುತ್ತಾರೆ. ಮತ್ತೆ ಈ ಕನ್ನಡನಾಡಿನಲ್ಲಿ ಹುಟ್ಟಿ ಬರಬೇಕು ಎಂದು ಅಂಬಿ ಜೊತೆಗಿನ ಕ್ಷಣವನ್ನು ಹೇಳಿಕೊಂಡು ಸೋನು ಪಾಟೀಲ್ ಕಣ್ಣೀರು ಹಾಕಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *