Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಂಪಿ ಉತ್ಸವ ಕೈಬಿಟ್ಟ ದೋಸ್ತಿ ಸರ್ಕಾರಕ್ಕೆ ಜನಾರ್ದನ ರೆಡ್ಡಿ ನೇರ ಸವಾಲು

Public TV
Last updated: December 3, 2018 5:40 pm
Public TV
Share
4 Min Read
REDDY
SHARE

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಸವಾಲು ಹಾಕಿದ್ದಾರೆ. ಹಂಪಿ ಉತ್ಸವ ಕೈಬಿಡುವ ನಿಲುವಿಗೆ ಜನಾರ್ದನ ರೆಡ್ಡಿ ಫೇಸ್‍ಬುಕ್‍ನಲ್ಲಿ ಕಿಡಿಕಾರಿದ್ದಾರೆ.

ಕೋಟಿ ಕೋಟಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ಮಾಡ್ತೀರಿ. ಉಪ ಚುನಾವಣೆ ಗೆಲ್ಲೋದಕ್ಕೆ ನೀರಿನಂತೆ ಹಣ ಖರ್ಚು ಮಾಡ್ತೀರಿ. ಅವೆಲ್ಲದಕ್ಕೂ ಇರದ ಬರ, ಹಂಪಿ ಉತ್ಸವದ ವಿಚಾರಕ್ಕೆ ಏಕೆ ಬರುತ್ತೆ ಅಂತ ಪ್ರಶ್ನಿಸಿದ್ದಾರೆ. ಅಲ್ಲದೇ ಹಂಪಿ ಉತ್ಸವ ಮಾಡಲು ನಿಮ್ಮ ಕೈಲಿ ಆಗಲಿಲ್ಲ ಅಂದ್ರೆ ಹೇಳಿ. ನಾನು ದುಡ್ಡು ಕೊಡ್ತೇನೆ. ಹಂಪಿ ಉತ್ಸವ ನಡೆಸಿ ಅಂತ ದೋಸ್ತಿ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ.

ಬಳ್ಳಾರಿಗೆ ನಾನು ಬರಲು ಸಾಧ್ಯವಾಗದಿದ್ದರೂ ಕೂಡ ಜಿಲ್ಲೆಯ ಜನರಿಗೋಸ್ಕರ ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದಾರೆ.

HAMPI 3

ರೆಡ್ಡಿ ಪೋಸ್ಟ್ ನಲ್ಲೇನಿದೆ?:
ಹಂಪಿ ಉತ್ಸವ 3 ದಿನ ಅದ್ಧೂರಿಯಾಗಿಯೇ ನಡೆಯಲಿ. ನಾಡಿನಲ್ಲಿ ವಿವಿಧೆಡೆ ಉತ್ಸವಗಳನ್ನು ಆಚರಿಸಲು ಉತ್ಸುಕತೆ ತೋರುತ್ತಿರುವ ರಾಜ್ಯ ಸರ್ಕಾರ, ಕೇವಲ 3 ದಿನ ನಡೆಯುವ ಹಂಪಿ ಉತ್ಸವ ವಿಷಯದಲ್ಲಿ ಏನಾದರೂ ಒಂದು ಕುಂಟು ನೆಪ ಹೇಳುತ್ತಿರುವುದು ದುರಾದೃಷ್ಟಕರ. ನಾಡಿನ ವಿವಿಧ ಉತ್ಸವಗಳನ್ನು ನಡೆಸುವ ಸರ್ಕಾರ ಹಂಪಿ ಉತ್ಸವ ಆಚರಿಸಲು ಏನಾದರೊಂದು ನೆಪ ಹೇಳುತ್ತಲೇ ಬರುತ್ತಿದೆ. ಇಡೀ ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿರುವ ಹಂಪಿ ಉತ್ಸವ ರಾಜ್ಯದ ಜನತೆಗೆ ಅದರಲ್ಲೂ ಉತ್ತರ ಕರ್ನಾಟಕದ ಜನತೆಗೆ ಭಾವನಾತ್ಮಕವಾದ ಬೆಸುಗೆಯನ್ನು ಬೆಸೆಯುವಂಥದ್ದಾಗಿದೆ.

ಇದು ವ್ಯವಸ್ಥಿತವಾಗಿ ಸರ್ಕಾರದಿಂದ ಮತ್ತು ಕೆಲ ಸಚಿವರಿಂದ ಬಳ್ಳಾರಿಗರನ್ನು ಅದರಲ್ಲೂ ಉತ್ತರ ಕರ್ನಾಟಕದ ಜನರನ್ನು ಕಡೆಗಣಿಸುವ ಪ್ರಯತ್ನವಾಗಿದೆ. ನವೆಂಬರ್ 3 ರಂದು ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ?. ಬಿಜೆಪಿಯ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಭಿನ್ನವಿಸಿಕೊಂಡರೂ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ?

vlcsnap 2018 12 03 17h33m55s195

ಉಪಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ?. ಹಂಪಿ ಉತ್ಸವಕ್ಕೆ ತನ್ನದೇ ಆದ ಇತಿಹಾಸವಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಎಂ.ಪಿ. ಪ್ರಕಾಶ್ ಅವರು ಹಂಪಿ ಉತ್ಸವವನ್ನು ಮೊಟ್ಟ ಮೊದಲ ಬಾರಿಗೆ 1988ರಲ್ಲಿ ಆಚರಿಸಲು ಅವಕಾಶ ನೀಡಿದ್ದರು. ಇದಕ್ಕೂ ಮುನ್ನ ದಾಸಶ್ರೇಷ್ಠರೂ, ಮನುಕುಲದ ಸಾಮಾಜಿಕ ಚಿಕಿತ್ಸಕರೂ ಆದ ಕನಕ-ಪುರಂದರರ ಉತ್ಸವ ನಡೆಯುತ್ತಿತ್ತು. ಹಂಪಿ ಉತ್ಸವದ ವ್ಯಾಪ್ತಿಯನ್ನು ದೇಶದುದ್ದಕ್ಕೂ ಪಸರಿಸುವಂತೆ ಮಾಡಿದ ಕೀರ್ತಿ ಎಂ.ಪಿ.ಪ್ರಕಾಶ್ ಅವರಿಗೆ ಸಲ್ಲುತ್ತದೆ.

ಜನರ ಭಾವನೆಗಳನ್ನು ಪರಸ್ಪರ ಪ್ರೀತಿ, ಪ್ರೇಮ, ಸಾಮರಸ್ಯದೊಂದಿಗೆ ಸಮೀಕರಿಸುವ ಈ ಸಾಂಸ್ಕೃತಿಕ ಹಬ್ಬವನ್ನು ಕಡೆಗಣಿಸುವ ಮೂಲಕ ಸರ್ಕಾರ ಜನರ, ಕಲಾವಿದರ, ರೈತರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಸರ್ಕಾರದ ಈ ಕ್ರಮದಿಂದ ಬೇಸತ್ತಿರುವ ಮಠಾಧೀಶರೇ ಇಂದು ಬೀದಿಗೆ ಇಳಿದು ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯ ದ್ಯೋತಕವಾದ ಹಂಪಿ ಉತ್ಸವ ಆಚರಿಸಲು ಭಿಕ್ಷೆ ಯಾಚಿಸುತ್ತಿದ್ದಾರೆ. ಮಾಗಳ ಗ್ರಾಮದ ಶ್ರೀ ಮಳೆಯೋಗೀಶ್ವರ ಸ್ವಾಮಿಗಳು ಭಿಕ್ಷೆ ಬೇಡುವ ಮೂಲಕ ಕಲಾವಿದರ ಬೆನ್ನಿಗೆ ನಿಂತಿದ್ದಾರೆ. ಹಂಪಿ ಉತ್ಸವ ಆಚರಿಸಲು ಸ್ವಾಮೀಜಿಗಳು ಭಿಕ್ಷೆ ಬೇಡುತ್ತಿದ್ದಾರೆಂದರೆ ಏನು ಅರ್ಥ?

HAMPI 2

ಸರ್ಕಾರ ನಡೆಸುವವರು ಇಲ್ಲಿನ ಜನರನ್ನು, ಇಲ್ಲಿನ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಗತಕಾಲದ ಇತಿಹಾಸವನ್ನು ಕಡೆಗಣಿಸುತ್ತಿದ್ದಾರೆಂದೇ ಅರ್ಥವಲ್ಲವೇ? ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಂಪಿ ಉತ್ಸವವನ್ನು ಇಡೀ ಜಗತ್ತೇ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಉತ್ಸವ ಆಚರಿಸಿದ್ದೆವು. ನಾನಾಗ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದೆ. ತದನಂತರ ಉತ್ಸವ ಅದ್ಧೂರಿಯಾಗಿ ನಡೆಯಲೇ ಇಲ್ಲ. ಈಗ ಬರಗಾಲದ ನೆಪ ಹೇಳಿ ಉತ್ಸವ ರದ್ದುಗೊಳಿಸುವುದು ಸರಿಯೇ? ಎಂ.ಪಿ.ಪ್ರಕಾಶರು 3 ದಿನ ನಡೆಸಿದ್ದ ಹಂಪಿ ಉತ್ಸವವನ್ನು ಎರಡು ದಿನ ಆಚರಿಸುವುದು ಸರಿಯೇ? ಕಾಟಾಚಾರಕ್ಕೆ ಹಂಪಿ ಉತ್ಸವ ನಡೆಸದೇ ಅದ್ಧೂರಿಯಾಗಿ ಉತ್ಸವ ನಡೆಸಲಿ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನಾನು ನೀಡುತ್ತೇನೆ.

ಹಂಪಿ ಉತ್ಸವ ನಮ್ಮ ಹೆಮ್ಮೆಯ ಹಬ್ಬ. ಈ ಉತ್ಸವ ಜನರಲ್ಲಿ ಪ್ರೀತಿ, ಬಾಂಧವ್ಯ, ಉಲ್ಲಾಸಗಳ ಜೊತೆ ಸಾಮರಸ್ಯಗಳನ್ನು ಹೆಚ್ಚಿಸುತ್ತಿದೆ. ಅಷ್ಟೇ ಅಲ್ಲ ಗತವೈಭವದ ಮೆರಗು, ನೆನಪು, ಸ್ಮರಣೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಒಂದು ಪ್ರತೀಕವಾಗಿದೆ. ಹಂಪಿ ಉತ್ಸವ ಯಾವುದೇ ಕಾರಣಕ್ಕೂ ಕಾಟಾಚಾರಕ್ಕೆ ನಡೆಯಬಾರದು. 3 ದಿನವೂ ಅದ್ಧೂರಿಯಾಗಿಯೇ ನಡೆಯಬೇಕು. ಬಳ್ಳಾರಿಗೆ ನಾನು ಬರಲು ಸಾಧ್ಯವಾಗದೇ ಇರುವುದರಿಂದ ನನ್ನ ಸಹಪಾಠಿಗಳ ಜಿಲ್ಲೆಯ ಜನತೆಯ ಕಲಾರಾಧನೆಯ ಉತ್ಸವಕ್ಕೆ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ನೆರವು ಮತ್ತು ಸಹಕಾರ ನೀಡಲು ಬದ್ಧನಾಗಿದ್ದೇನೆ.

Hampi Utsava DKShi

ಬಳ್ಳಾರಿ ಜಿಲ್ಲೆಯ ಜನರೂ ಸೇರಿದಂತೆ ನೆರೆಯ ವಿವಿಧ ಜಿಲ್ಲೆಗಳ ಜನರು ವರ್ಷದಿಂದ ವರ್ಷಕ್ಕೆ ಕಣ್ಣಲ್ಲಿ ಕಣ್ಣಿಟ್ಟು ಹಂಪಿ ಉತ್ಸವ ಸಡಗರಕ್ಕೆ ಕಾದು ಕುಳಿತಿರುತ್ತಾರೆ. ಅವರಿಗೆಲ್ಲ ನಿರಾಶೆಯಾಗಬಾರದು. ಒಟ್ಟಿನಲ್ಲಿ, ಹಂಪಿ ಉತ್ಸವ 3 ದಿನಗಳ ಕಾಲ ಸಡಗರ, ಸಂಭ್ರಮಗಳಿಂದ ಜರುಗಬೇಕೆನ್ನುವುದೇ ನನ್ನ ಇಚ್ಛೆಯಾಗಿದೆ ಅಂತ ರೆಡ್ಡಿ ಬರೆದುಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurucongressformer ministerhampi utsavJanardhan ReddyjdsPublic TVಕಾಂಗ್ರೆಸ್ಜನಾರ್ದನ ರೆಡ್ಡಿಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮಾಜಿ ಸಚಿವಹಂಪಿ ಉತ್ಸವ
Share This Article
Facebook Whatsapp Whatsapp Telegram

You Might Also Like

Tree branch falls in Basanavgudi bengaluru Rider injured
Bengaluru City

ಬಸನವಗುಡಿಯಲ್ಲಿ ಮರದ ಕೊಂಬೆ ಬಿದ್ದು ಸವಾರ ಗಂಭೀರ

Public TV
By Public TV
17 minutes ago
Elephant
Crime

ಹಾಸನ | ವಿದ್ಯುತ್‌ ಶಾಕ್‌ಗೆ ತಾಯಿ, ಮರಿ ಆನೆ ಬಲಿ

Public TV
By Public TV
22 minutes ago
Housefull 6
Bollywood

ಕುಂಟುತ್ತಲೇ 100 ಕೋಟಿ ಕ್ಲಬ್‌ ಸೇರಿದ ಹೌಸ್‌ಫುಲ್-5; 8ನೇ ದಿನ ಕೇವಲ 6 ಕೋಟಿ ಕಲೆಕ್ಷನ್‌

Public TV
By Public TV
34 minutes ago
Karwar Child Falls Into Canal
Districts

Uttara Kannada | ಪೋಷಕರ ನಿರ್ಲಕ್ಷ್ಯ – 2 ವರ್ಷದ ಮಗು ನಾಲೆಗೆ ಬಿದ್ದು ಸಾವು

Public TV
By Public TV
47 minutes ago
Israel Iran War Kannadigas
Latest

Israel-Iran Conflict | ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು

Public TV
By Public TV
53 minutes ago
Kids Remove Nuts And Bolts From Rs 422 Crore Patna Flyover Like Its A Toy Bihar Social Mida Viral Video
Latest

422 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಫ್ಲೈಓವರ್‌ನ ನಟ್‌, ಬೋಲ್ಟ್‌ ತೆಗೆದ ಮಕ್ಕಳು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?