ಚಿಕ್ಕಬಳ್ಳಾಪುರ: ಇಂದು ಸಿಎಂ ಕುಮಾರಸ್ವಾಮಿ ಸಾಲಮನ್ನಾ ವ್ಯಾಪ್ತಿಗೆ ಒಳಪಟ್ಟಿರೋ ಫಲಾನುಭವಿ ರೈತರಿಗೆ ಋಣಭಾರ ಮುಕ್ತ ಪತ್ರವನ್ನು ವಿತರಿಸಲಿದ್ದಾರೆ.
ಉತ್ತರ ಕರ್ನಾಟಕದ ಸೇಡಂ ಕ್ಷೇತ್ರದಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ರೈತರಿಗೆ ಋಣಭಾರ ಮುಕ್ತಪತ್ರ ವಿತರಣೆ ನಡೆಯಲಿದೆ.
ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಸಚಿವ ಕೃಷ್ಣ ಭೈರೇಗೌಡ ಹಾಗೂ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ರು. ಮೊದಲ ಹಂತದಲ್ಲಿ ರಾಜ್ಯಾದ್ಯಾಂತ 64 ಸಾವಿರ ಕೋಟಿ ರೂ. ಸಾಲಮನ್ನಾ ವ್ಯಾಪ್ತಿಗೆ ಓಳಪಟ್ಟಿರೋ ಫಲಾನುಭವಿ ರೈತರಿಗೆ ಋಣಭಾರ ಮುಕ್ತ ಪತ್ರ ಸಿಗಲಿದೆ. ಇನ್ನೂ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ 17300 ಮಂದಿ ರೈತರು ಋಣಭಾರ ಮುಕ್ತ ಪತ್ರ ಪಡೆದುಕೊಳ್ಳಲಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡ್ಕೊಳ್ಳಬೇಡಿ, ನಿಮ್ಮ ಕಷ್ಟಕ್ಕೆ ಸ್ಪಂದಿಸ್ತೇವೆ- ರೈತಾಪಿ ವರ್ಗಕ್ಕೆ ಸಿಎಂ ಮನವಿ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv