Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

Public TV
Last updated: December 9, 2018 7:53 am
Public TV
Share
2 Min Read
suvarna vidhana soudha
SHARE

-ಪ್ರತಿಪಕ್ಷದ ಅಸ್ತ್ರವಾಗಲಿದೆ ಉತ್ತರ ಕರ್ನಾಟಕದ ಕಡೆಗಣನೆ, ಬರ ನಿರ್ವಹಣೆ
-ಶಾಸಕರಿಗೆ ಮಧ್ಯಾಹ್ನದ ಊಟ, ವಸತಿ ವ್ಯವಸ್ಥೆ ಅಷ್ಟೇ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು, ಅನೇಕ ವಿಷಯಗಳ ಚರ್ಚೆಗೆ ಸಾಕ್ಷಿಯಾಗಲಿದೆ. ಈಗಾಗಲೇ ಅಧಿವೇಶನದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.

ರೈತರ ನೂರೆಂಟು ಸಮಸ್ಯೆಗಳ ನಡುವೆ ಅಧಿವೇಶನ ನಡೆಸುತ್ತಿದ್ದು, ಮೈತ್ರಿ ಸರ್ಕಾರ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಅಧಿವೇಶನವು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಭಾರೀ ಚರ್ಚೆಗೆ ವೇದಿಕೆಯಾಗಲಿದೆ. ರೈತರು ಮತ್ತು ಕಬ್ಬು ಬೆಳೆಗಾರರ ಸಮಸ್ಯೆ, ಸಾಲಮನ್ನಾ ವಿಳಂಬ, ಉತ್ತರ ಕರ್ನಾಟಕದ ಕಡೆಗಣನೆ, ಬರ ನಿರ್ವಹಣೆ ಸೇರಿದಂತೆ ಹಲವು ವಿಷಯಗಳನ್ನು ಇಟ್ಟುಕೊಂಡು ಪ್ರತಿಪಕ್ಷ ಬಿಜೆಪಿವು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ತರಾಟೆ ತೆಗೆದುಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ. ಪ್ರತಿಪಕ್ಷ ಬಿಜೆಪಿ ಅಸ್ತ್ರಗಳಿಗೆ ತಕ್ಕ ಪ್ರತಿ ಅಸ್ತ್ರ ಹೂಡಲು ಸರ್ಕಾರವೂ ಸಜ್ಜುಗೊಂಡಿದೆ.

171114kpn79

ಸುವರ್ಣಸೌಧದ ಎದುರು ರೈತರು, ಕಬ್ಬು ಬೆಳೆಗಾರರು ಹಾಗೂ ಉತ್ತರ ಕರ್ನಾಟಕದ ವಿವಿಧ ಮಠಾಧೀಶರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಪಕ್ಷ ಬಿಜೆಪಿ ನಾಯಕರೂ ಈ ಪ್ರತಿಭಟನೆ ಬೆಂಬಲಿಸಿದ್ದಾರೆ. ಹೀಗಾಗಿ ಪ್ರತಿಭಟನಾಕಾರರಿಗೆ ಸರ್ಕಾರವು ಸೂಕ್ತ ವ್ಯವಸ್ಥೆ ಕಲ್ಪಿಸಿದೆ. ಈ ಮೂಲಕ ಮೈತ್ರಿ ಸರ್ಕಾರವು ಮೊದಲ ದಿನವೇ ಭಾರೀ ಪ್ರತಿಭಟನೆಯ ಶಾಕ್ ಎದುರಿಸಬೇಕಾಗುತ್ತದೆ.

ಅಧಿವೇಶನ ನಿರ್ವಹಣೆಗೆ ಸೂಕ್ತ ಭದ್ರತೆ ಒದಗಿಸಿದ್ದು, 4 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ಎದುರಾಗದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತೀವ್ರ ನಿಗಾ ವಹಿಸಲಿದ್ದಾರೆ. ಸುವರ್ಣಸೌಧದ ಸುತ್ತ ಭಾರೀ ಭದ್ರತೆ ಒದಗಿಸಲಾಗಿದೆ.

suvarna vidhana soudha 1

ವಿಶೇಷಾಧಿಕಾರಿ ನೇಮಕ:
ಅಧಿವೇಶನ ಪಾರದರ್ಶಕವಾಗಿರಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಿರಲು ಇದೇ ಮೊದಲ ಬಾರಿಗೆ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರನ್ನು ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಲಾಪ ಹೊರಗಿನ ನಿರ್ವಹಣಾ ಸಮಿತಿಗಳು ಪ್ರತಿಯೊಂದು ಖರ್ಚಿಗೂ ಉಜ್ವಲ್ ಕುಮಾರ್ ಘೋಷ್ ಅವರ ಮೂಲಕವೇ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ.

ದುಂದು ವೆಚ್ಚಕ್ಕೆ ಕತ್ತರಿ:
ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರ ಆಶಯದಂತೆ ಈ ಬಾರಿ ಅಧಿವೇಶನದಲ್ಲಿ ಅನಗತ್ಯ ವೆಚ್ಚ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಯೊಂದು ವೆಚ್ಚದಲ್ಲಿಯೂ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ಮುಂದಾಗಿದೆ. ಅಧಿವೇಶನದಲ್ಲಿ ಶಾಸಕರ ಊಟದ ಮೆನು ಬದಲಾಯಿಸಲಾಗಿದೆ. ಹಿಂದಿನ ಅಧಿವೇಶನಗಳಂತೆ ಇಲ್ಲಿಯ ಊಟದಿಂದ ಆರೋಗ್ಯದಲ್ಲಿ ಏರುಪೇರು ಆಗದಿರಲು ಆಯಾ ಭಾಗದ ಊಟದ ವ್ಯವಸ್ಥೆ ಮಾಡಲಾಗಿದೆ.

suvarna vidhana soudha 2

ಅಧಿವೇಶನದಲ್ಲಿ ಭಾಗವಹಿಸುವ ಶಾಸಕರಿಗೆ ಸರ್ಕಾರ ಈ ಬಾರಿ ಕೇವಲ ಮಧ್ಯಾಹ್ನದ ಊಟಕ್ಕೆ ಮಾತ್ರ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಬೆಳಗಿನ ತಿಂಡಿ ಮತ್ತು ರಾತ್ರಿ ಊಟವನ್ನು ಶಾಸಕರು ತಮಗೆ ಸಿಗುವ ಭತ್ಯೆಯಲ್ಲಿಯೇ ಸೇವಿಸಬೇಕು. ತಮ್ಮ ಪಿಎ, ಗನ್ ಮ್ಯಾನ್ ಗಳು, ಡ್ರೈವರ್ ಗಳ ಊಟಕ್ಕೂ ಶಾಸಕರೇ ಭರಿಸಬೇಕು. ಅಷ್ಟೇ ಅಲ್ಲದೆ ಶಾಸಕರಿಗೆ ಮಾತ್ರ ರೂಂ ವ್ಯವಸ್ಥೆ ಮಾಡಲಾಗಿದೆ.

ಸಚಿವಾಲಯ ಶಿಫ್ಟ್:
ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸಭೆ ಮತ್ತು ಪರಿಷತ್‍ನ ಎರಡೂ ಸಚಿವಾಲಯ ಸುವರ್ಣಸೌಧಕ್ಕೆ ಶಿಫ್ಟ್ ಆಗಿವೆ. ಸುಮಾರು 300 ಸಿಬ್ಬಂದಿ ಶನಿವಾರದಿಂದ ಬೆಳಗಾವಿ ಸುವರ್ಣಸೌಧದಲ್ಲಿ ಕೆಲಸ ಆರಂಭಿಸಿದ್ದಾರೆ. ಅಧಿವೇಶನದಲ್ಲಿ ಸುಮಾರು ಐದು ಸಾವಿರ ಅಧಿಕಾರಿ ವರ್ಗ, ಶಾಸಕರು ಹಾಗೂ ಪತ್ರಕರ್ತರಿಗೆ ವಸತಿ, ಊಟ, ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಭದ್ರತೆಗೆ ನಿಯೋಜಿತರಾಗುವ ಕನಿಷ್ಠ ಪೊಲೀಸ್ ಸಿಬ್ಬಂದಿಗೂ ಈ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಇಡೀ ಅಧಿವೇಶನದ ವೆಚ್ಚವನ್ನು 17.57 ಕೋಟಿ ರೂ. ಗೆ ನಿಗದಿಪಡಿಸಲಾಗಿದೆ.

dks hdk congress jds 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:belagaviMLAPublic TVwinter sessionಅಧಿವೇಶನಪಬ್ಲಿಕ್ ಟಿವಿಬೆಳಗಾವಿವಿಧಾನ ಪರಿಷತ್ವಿಧಾನಸಭೆಶಾಸಕರುಸಚಿವರುಸುವರ್ಣಸೌಧ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Green Girl Cinema
`ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್
Cinema Latest Sandalwood
Darshan Pavithra
ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ
Bengaluru City Cinema Court Districts Karnataka Latest Top Stories
Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories

You Might Also Like

Narendra Modi Dwaraka Expressway Inaugrate
Latest

UER-II ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ

Public TV
By Public TV
7 minutes ago
Star Air
Belgaum

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಭೂಸ್ಪರ್ಶ; ತಪ್ಪಿದ ದುರಂತ

Public TV
By Public TV
21 minutes ago
Trump Modi Putin 1
Latest

2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

Public TV
By Public TV
48 minutes ago
Rubina Shaikh
Crime

ಬಂಧನದಲ್ಲಿದ್ದ ಬಾಂಗ್ಲಾದ ಗರ್ಭಿಣಿ ಮುಂಬೈನ ಜೆಜೆ ಆಸ್ಪತ್ರೆಯಿಂದ ಎಸ್ಕೇಪ್

Public TV
By Public TV
56 minutes ago
Stray Dogs 3
Crime

ಶಾಲಾ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ನಾಯಿ ದಾಳಿ – ಗಾಯಾಳುಗಳು ಆಸ್ಪತ್ರೆಗೆ

Public TV
By Public TV
1 hour ago
KR Market Fire
Bengaluru City

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?