Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆ- ಅಣ್ಣಾ ಹಜಾರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆ- ಅಣ್ಣಾ ಹಜಾರೆ

Latest

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆ- ಅಣ್ಣಾ ಹಜಾರೆ

Public TV
Last updated: December 13, 2018 1:03 pm
Public TV
Share
2 Min Read
ANNA HAZARE PM NARENDRA MODI
SHARE

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಇನ್ನಾದರೂ ಮೋದಿ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆಂದು ಹಿರಿಯ ಸಾಮಾಜಿಕ ಹೋರಾಟಗಾರ ಹಾಗೂ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ.

ಪಂಚರಾಜ್ಯಗಳ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಚುನವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಪ್ರಧಾನಿ ಮೋದಿಯೂ ಸೇರಿದಂತೆ ಬಿಜೆಪಿ ನಾಯಕರು ಮರೆತಿದ್ದಾರೆ. ಹೀಗಾಗಿ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತನ್ನ ಹಿಡಿತದಲ್ಲಿದ್ದ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಗಡ ರಾಜ್ಯಗಳಲ್ಲಿ ಬಿಜೆಪಿ ಸೋತಿದೆ. ಈ ಮೂಲಕ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

Anna Hazare l pti

ಮೋದಿ ಸರ್ಕಾರ ಚುನಾವಣೆಗೂ ಮುನ್ನ ಕಪ್ಪುಹಣವನ್ನು ದೇಶಕ್ಕೆ ವಾಪಾಸ್ ತರುವ ವಿಚಾರ, ರೈತರ ಬೆಳೆಗೆ ಬೆಂಬಲ ಬೆಲೆ, ಕೃಷಿ ಉತ್ಪಾದನೆಗಳಿಗೆ ಪ್ರೋತ್ಸಾಹ, ಅಧಿಕಾರದಲ್ಲಿ ಜನರ ಭಾಗವಹಿಸುವಿಕೆ ಸೇರಿದಂತೆ ಇನ್ನೂ ಮುಂತಾದ ಆಶ್ವಾಸನೆಗಳನ್ನು ನೀಡಿದ್ದರು. ಆದರೆ ಇದೂವರೆಗೂ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಕೊಟ್ಟ ಮಾತನ್ನು ಅವರು ಮರೆತಿರಬಹುದು. ಆದರೆ ಮೋದಿಯವರ ಮೇಲೆ ಭರವಸೆ ಇಟ್ಟು ಮತ ಹಾಕಿದ್ದ ಜನ ಎಂದಿಗೂ ಅದನ್ನು ಮರೆಯುವುದಿಲ್ಲ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮೋದಿ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಮುಂಬರುವ ಲೋಕಸಭಾ ಚುನಾವಣಾ ವೇಳೆಗೆ ತಾನು ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸದಿದ್ದರೇ, ಇದೇ ರೀತಿಯ ಫಲಿತಾಂಶ ಮತ್ತೆ ಮರುಕಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

98246761 gettyimages 621556810

ಪ್ರಧಾನಿ ಮೋದಿಯವರ ನೋಟು ನಿಷೇಧ ನಿರ್ಧಾರದ ಕುರಿತು ಮಾತನಾಡಿ, ನೋಟು ನಿಷೇಧ ಮೋದಿ ಸರ್ಕಾರದ ತಪ್ಪು ನಡೆಯಾಗಿದೆ. ಅದನ್ನು ಯಾವ ಉದ್ದೇಶದಿಂದ ಜಾರಿಗೆ ತಂದರೋ, ಅದು ಇದೂವರೆಗೂ ಈಡೇರಿಲ್ಲ. ಕಪ್ಪುಹಣವನ್ನು ಬಯಲಿಗೆಳೆಯುವ ಅವರ ಉದ್ದೇಶ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದೆ? ಆರ್‍ಬಿಐ ಮಾಹಿತಿಗಳ ಪ್ರಕಾರ ನೋಟು ಅಮಾನ್ಯೀಕರಣದ ಬಳಿಕ ಶೇ.99ರಷ್ಟು ನಿಷೇಧಿತ ನೋಟುಗಳು ಬ್ಯಾಂಕುಗಳಲ್ಲಿ ಸಂಗ್ರಹವಾಗಿದೆ. ಹಾಗಾದರೆ ಕಪ್ಪುಹಣ ಎಲ್ಲಿಗೆ ಹೋಯಿತು? ಪ್ರಜಾಪ್ರಭುತ್ವದಲ್ಲಿ ಇಂತಹ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನುರಿತ ತಜ್ಞರೊಂದಿಗೆ ಪ್ರಧಾನಿ ಚರ್ಚೆ ನಡೆಸಬೇಕಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

BJP FLAG

ಇದೇ ವೇಳೆ ರಾಮಮಂದಿರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ರಾಮಮಂದಿರ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಏಕೆಂದರೆ ರಾಮಮಂದಿರಕ್ಕಿಂತಲೂ ಗಂಭೀರ ಸಮಸ್ಯೆಗಳು ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿವೆ. ಶ್ರೀರಾಮ ಮಂದಿರದಲ್ಲಿ ಇಲ್ಲ. ಬಡವರ ಮನಸ್ಸಿನಲ್ಲಿದ್ದಾನೆ. ಬಡವರನ್ನು ಉದ್ಧಾರ ಮಾಡಿದಾಗ ಮಾತ್ರ, ರಾಮನಿಗೆ ತೃಪ್ತಿ ಸಿಗುತ್ತದೆ. ನಾವು ಮಾಡುವ ಒಳ್ಳೆಯ ಕೆಲಸದಲ್ಲೇ, ಶ್ರೀರಾಮನನ್ನು ಕಾಣಬೇಕು. ಇದನ್ನೇ ಶ್ರೀರಾಮ ಕೂಡ ಹೇಳಿದ್ದಾನೆಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:anna hazareFive StatesNew Delhipm narendra modiPublic TVresultSocial Reformerಅಣ್ಣಾ ಹಜಾರೆನವದೆಹಲಿಪಂಚರಾಜ್ಯಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಫಲಿತಾಂಶಸಾಮಾಜಿಕ ಹೋರಾಟಗಾರ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

supreme Court 1
Belgaum

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

Public TV
By Public TV
2 hours ago
01 20
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-1

Public TV
By Public TV
2 hours ago
02 17
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-2

Public TV
By Public TV
2 hours ago
03 14
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-3

Public TV
By Public TV
2 hours ago
Rink Singh Abhishek Sharma
Cricket

ಅಭಿಷೇಕ್‌, ರಿಂಕು ಸಿಡಿಲಬ್ಬರದ ಬ್ಯಾಟಿಂಗ್‌ – ಸಿಕ್ಸರ್‌, ಬೌಂಡರಿ ಆಟದಲ್ಲಿ ಭಾರತಕ್ಕೆ 48 ರನ್‌ ಜಯ

Public TV
By Public TV
2 hours ago
Thawar Chand Gehlot Siddaramaiah
Bengaluru City

ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಸಿದ್ಧ – ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?