ಮಾಜಿ ಸಿಎಂಗೂ ಬೇಸರತಂತು ಸಚಿವರ ಕಿತ್ತಾಟ!

Public TV
1 Min Read
SIDDU RAMESH JARKIHOLI

-ರಮೇಶ್ ಜಾರಕಿಹೊಳಿ ವಿಚಾರ ಬಿಟ್ಟು ಬಿಡಿ, ಬ್ಯಾರೆ ಏನಾದ್ರು ಕೇಳಿ

ಬಾಗಲಕೋಟೆ: ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ನಡುವಿನ ವೈಮನಸ್ಸು ಇದ್ದದ್ದೆ ಎನ್ನುವ ಮಟ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬದಾಮಿಗೆ ಭೇಟಿ ನೀಡಿ ಕ್ಷೇತ್ರದ ಜನರ ಸಮಸ್ಯೆ ಆಲಿಸಿದರು. ಈ ವೇಳೆ ರಮೇಶ್ ಜಾರಕಿಹೊಳಿ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ಬೇರೆ ವಿಚಾರ ಕೇಳ್ರಿ… ರಮೇಶ್ ಜಾರಕಿಹೊಳಿ ವಿಚಾರ ಬಿಟ್ಟು ಬಿಡಿ. ಬೇರೆ ಇನ್ನೇನಾದರು ಕೇಳ್ರಿ ಅಂತ ಅಮಾಧಾನ ಹೊರಹಾಕಿದ್ದಾರೆ.

RAMESH SATHISH JARKIHOLI

ಸಚಿವರ ಮುನಿಸು ಏಕೆ?
ಬೆಳಗಾವಿ ಜಿಲ್ಲಾ ರಾಜಕೀಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಅಸಮಾಧಾನ ಉಂಟಾಗಿತ್ತು. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪರವಾಗಿ ಸಚಿವ ಡಿ.ಕೆ.ಶಿವಕುಮಾರ್ ಪ್ರವೇಶ ಮಾಡಿದ್ದರು. ಇದರಿಂದ ಕೊಪಗೊಂಡ ರಮೇಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ನಮ್ಮ ಸಮಸ್ಯೆಯನ್ನು ತಾವೇ ಬಗೆಹರಿಸಿಕೊಳ್ಳುತ್ತೇವೆ ಎಂದು ಟಾಂಗ್ ಕೊಟ್ಟಿದ್ದರು.

ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿಯೂ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ಮುನಿಸು ಮತ್ತಷ್ಟು ಹೆಚ್ಚಾಗಿತ್ತು. ಈ ಇಬ್ಬರ ಸಚಿವರ ವೈಮನಸ್ಸು ಹೈಕಮಾಂಡ್ ಮಟ್ಟದಲ್ಲಿ ಭಾರೀ ಚರ್ಚೆಯಾಗಿತ್ತು. ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ಹರಿದಾಡುತ್ತಿದ್ದಂತೆ ಕಾಂಗ್ರೆಸ್ ನಾಯಕರು ತಲ್ಲಣಕ್ಕೆ ಒಳಗಾಗಿದ್ದರು.

LAKSHMI HEBBALKAR RAMESH JARAKIHOLI

ಬೆಳಗಾವಿ ಅಧಿವೇಶದ ವೇಳೆ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಸಹೋದರರು ಶಾಸಕರು ಹಾಗೂ ಸಚಿವರಿಗೆ ಪ್ರತಿವರ್ಷ ಔತಣಕೂಟ ಆಯೋಜಿಸುತ್ತಿದ್ದರು. ಆದರೆ ಈ ಬಾರಿ ಕೈಬಿಟ್ಟಿದ್ದು ಚರ್ಚೆಯಾಗಿತ್ತು. ಇದಕ್ಕೆ ಪ್ರತಿಯಾಗಿ ಸಚಿವ ಡಿ.ಕೆ.ಶಿವಕುಮಾರ್ ಔತಣಕೂಟ ಆಯೋಜಿಸಿ ಎಲ್ಲರಿಗೂ ಆಮಂತ್ರಣ ನೀಡಿದ್ದರು. ನಾನು ಮಾತ್ರ ಅಲ್ಲಿಗೆ ಹೋಗಲ್ಲ, ಹೋಗಲ್ಲ, ಹೋಗಲ್ಲ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *