Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

2018ರ ಸಿನಿ ಲೋಕದ ಸುಂದರ ಪ್ರೇಮ ಕಹಾನಿಗಳು

Public TV
Last updated: December 29, 2018 1:22 pm
Public TV
Share
9 Min Read
Sandalwood Marriage
SHARE

ಸಿನಿ ಲೋಕ ಅಂದ್ರೆ ಸಾಕು ತೆರೆಯ ಮೇಲೆ ಅದೆಷ್ಟೂ ಪ್ರೇಮ ಕಹಾನಿಗಳು ಬರುತ್ತವೋ ಹಾಗೆಯೇ ತೆರೆಯ ಹಿಂದೆ ಸಹ ಲವ್ ಸ್ಟೋರಿಗಳು ಕೇಳಿರುತ್ತೇವೆ. ಕೆಲವರು ಅಧಿಕೃತವಾಗಿ ಹೇಳಿಕೊಂಡ್ರೆ, ಬಹುತೇಕರು ನಾವು ಜಸ್ಟ್ ಫ್ರೆಂಡ್ಸ್ ಅಂತಾನೇ ಹೇಳಿಕೊಂಡು ಬಂದು ಕೊನೆಗೆ ಒಂದು ದಿನ ಮದುವೆಯಾಗುವ ಮೂಲಕ ಸಿಹಿಸುದ್ದಿ ನೀಡುತ್ತಾರೆ. 2018ರ ಆರಂಭದಿಂದಲೂ ಸಿನಿ ಅಂಗಳದಲ್ಲಿ ಗಟ್ಟಿಮೇಳದ ಸದ್ದು ಕೇಳಿ ಬಂದಿದೆ.

ಈ ಬಾರಿ ಅತಿ ಹೆಚ್ಚು ಸುದ್ದಿ ಮಾಡಿದ್ದು ಗುಳಿಕೆನ್ನೆ ಬೆಡಗಿ ದೀಪಿಕಾ ಪಡುಕೋಣೆ. ನಂತರ ಪ್ರಿಯಾಂಕ ಚೋಪ್ರಾ, ಕನ್ನಡದ ಸ್ಟಾರ್ ಗಳಾದ ಚಿರಂಜೀವಿ ಸರ್ಜಾ, ದಿಗಂತ್ ಕಲ್ಯಾಣ ಸುದ್ದಿಗಳು ಅತಿ ಹೆಚ್ಚು ಸುದ್ದಿಯಾಗಿತ್ತು. ಜನವರಿ ಯಿಂದ ಡಿಸೆಂಬರ್ ವರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಲಾವಿದರ ಸಂಪೂರ್ಣ ವಿವರ ಇಲ್ಲಿದೆ.

marriagess

ಭಾವನಾ:
ಬಹುಭಾಷಾ ಚಿತ್ರ ತಾರೆ, ಮಲೆಯಾಳಂ ಬೆಡಗಿ ನಟಿ ಭಾವನಾ ಮೆನನ್ ಕನ್ನಡದ ಹುಡುಗ ನವೀನ್ ಅವರ ಜತೆ ಜನವರಿ 22 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೇರಳದ ತ್ರಿಶೂರಿನ ಜವರ್ಲಾಲ್ ಕನ್ವೇಷನ್ ಹಾಲ್‍ನಲ್ಲಿ ಕೇರಳ ಸಂಪ್ರದಾಯದಂತೆ ಮದುವೆ ನೆರವೇರಿತ್ತು. ಕೇರಳ ಮೂಲದವರಾದ ಭಾವನಾ ಅವರು ಮಲೆಯಾಳಂ, ತಮಿಳು, ತೆಲಗು, ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ `ಜಾಕಿ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಫೇಮಸ್ ಆಗಿದ್ದರು.

ಗೊಂಬೆ ಖ್ಯಾತಿಯ ನೇಹಾ ಗೌಡ:
ಲಕ್ಷ್ಮಿ ಬಾರಮ್ಮ ಧಾರಾವಾಹಿ ಮೂಲಕ ಗೊಂಬೆ ಎಂದೇ ಪ್ರಖ್ಯಾತಿ ಪಡೆದುಕೊಂಡಿರುವ ನೇಹಾ ಗೌಡ ತಮ್ಮ ಬಾಲ್ಯದ ಗೆಳೆಯ ಚಂದನ್ ಅವರನ್ನು ವಿವಾಹವಾಗಿದ್ದಾರೆ. ನಟಿ ಸೋನುಗೌಡ ಅವರ ಸಹೋದರಿ ಆಗಿರುವ ನೇಹಾಗೌಡ ಮೈಸೂರು ರಸ್ತೆಯಲ್ಲಿರುವ ಸಾಯಿ ಪ್ಯಾಲೆಸ್ ನಲ್ಲಿ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. ಚಂದನ್ ಬ್ಯಾಂಕಾಕ್ ನಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

Bhavana Neha

ನಿರ್ದೇಶಕ ಸಂತೋಷ್ ಆನಂದ್ ರಾಮ್:
ರಾಜಕುಮಾರ’ ಚಿತ್ರ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ಬಳ್ಳಾರಿ ಮೂಲದ ಸುರಭಿ ಹತ್ವಾರ್ ಜೊತೆ ಫೆಬ್ರವರಿ 21ರಂದು ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಜೆ.ಪಿ ನಗರದ ಸಿಂಧೂರಿ ಕನ್ವೆಂಷನ್ ಸೆಂಟರ್ ನಲ್ಲಿ ಆರತಕ್ಷತೆ ನಡೆದಿತ್ತು. ಸ್ಯಾಂಡಲ್ ವುಡ್ ನಲ್ಲಿ `ಮಿಸ್ಟರ್ ಆಂಡ್ ಮಿಸಸ್ ರಾಮಚಾರಿ’ ಚಿತ್ರದ ಮೂಲಕ ನಿರ್ದೇಶನಕ್ಕೆ ಎಂಟ್ರಿ ಕೊಟ್ಟ ಸಂತೋಷ್ ಆನಂದ್ ರಾಮ್ ಅವರ ಮೊದಲ ಚಿತ್ರವೇ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಎರಡನೇ ಚಿತ್ರ `ರಾಜಕುಮಾರ’ ಕೂಡ ಅದ್ಧೂರಿ ಹಿಟ್ ಕಂಡಿದೆ.

ಶ್ರೇಯಾ ಸರಣ್:
ಬಾಲಿವುಡ್ ನಟಿ ಶ್ರೇಯಾ ಸರಣ್ ಮದುವೆಯನ್ನು ನಿರಾಕರಿಸುತ್ತಲೇ ಮಾರ್ಚ್ 12, 2018ರಂದು ಆಪ್ತರ ಸಮ್ಮುಖದಲ್ಲಿ ರಷ್ಯಾದ ಗೆಳೆಯನನ್ನು ವರಿಸಿದ್ದರು. 2017ರಲ್ಲಿಯೇ ಮಾಧ್ಯಮಗಳು ಇಬ್ಬರ ಪ್ರೀತಿಯ ವಿಷಯವನ್ನು ಪ್ರಸ್ತಾಪಿಸಿದಾಗ ನಾವಿಬ್ಬರು ಒಳ್ಳೆಯ ಗೆಳೆಯರು ಅಂತಾ ಹೇಳಿಕೊಂಡಿದ್ದರು. ಮುಂಬೈ ನಿವಾಸದಲ್ಲಿ ರಷ್ಯಾದ ಟೆನ್ನಿಸ್ ಆಟಗಾರ ಆ್ಯಂಡ್ರಿ ಕೋಸ್ಟವೆವ್ ರನ್ನು ಮದುವೆ ಆಗುವ ಸಾಂಸರಿಕ ಜೀವನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪುನೀತ್ ರಾಜ್‍ಕುಮಾರ್ ಅಭಿನಯದ ‘ಅರಸು’, ರಜಿನಿಕಾಂತ್ ನಟನೆ ‘ಶಿವಾಜಿ’ ಸಿನಿಮಾದಲ್ಲಿ ಶ್ರೇಯಾ ನಟಿಸಿದ್ದಾರೆ.

Sreya

ಸುಂದರ್ ಗೌಡ:
ಮಾರ್ಚ್ 9 ಮಾಸ್ತಿಗುಡಿ ಚಿತ್ರದ ನಿರ್ದೇಶಕ ಸುಂದರ್ ಗೌಡ ಕಾಂಗ್ರೆಸ್ ನಾಯಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿಯನ್ನು ರಹಸ್ಯವಾಗಿ ಮದುವೆಯಾಗಿ ಮಾಧ್ಯಮಗಳ ಮುಂದೆ ಬಂದಿದ್ದರು. ಇವರಿಬ್ಬರ ಮದುವೆಗೆ ನಟ ದುನಿಯಾ ವಿಜಯ್ ಸಾಕ್ಷಿಯಾಗಿದ್ದರು. ಮದುವೆ ಬಳಿಕ ನೇರವಾಗಿ ದುನಿಯಾ ವಿಜಯ್ ಜೊತೆ ಪೊಲೀಸ್ ಠಾಣೆಗೆ ಬಂದು ಸುದ್ದಿಗೋಷ್ಠಿ ನಡೆಸಿದ್ದರು.

ಕಾಮಿಡಿ ಕಿಲಾಡಿ ನಯನ:
ಖಾಸಗಿ ವಾಹಿನಿಯ ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದಿದ್ದ ಕಾಮಿಡಿ ಕಿಲಾಡಿ ನಯನ, ಬೆಂಗಳೂರಿನ ಉದ್ಯಮಿ ಶರತ್ ಜೊತೆ ಏಪ್ರಿಲ್ 22ರಂದು ಸಪ್ತಪದಿ ತುಳಿದಿದ್ದರು. ನಯನ ತಂದೆಯ ವಿರೋಧದ ನಡುವೆಯೂ ಅಭಿನಯ ಮಾಡಬೇಕೆಂದು ಕನಸು ಇಟ್ಟುಕೊಂಡು ಕಾಮಿಡಿ ಕಿಲಾಡಿಗಳು ತಂಡಕ್ಕೆ ಸೇರಿಕೊಂಡಿದ್ದರು. ಇಂದು ಆ ಕಾರ್ಯಕ್ರಮದ ಮೂಲಕವೇ ಖ್ಯಾತಿ ಪಡೆದಿದ್ದಾರೆ.

nayana sundar

ಮೇಘನಾ ರಾಜ್-ಚಿರಂಜೀವಿ ಸರ್ಜಾ:
ಸ್ಯಾಂಡಲ್‍ವುಡ್ ತಾರೆಯರಾದ ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ಏಪ್ರಿಲ್ 29ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಿದ್ದರು. ಮೇ 2ರಂದು ಮತ್ತೊಮ್ಮೆ ಹಿಂದೂ ಸಂಪ್ರದಾಯದಂತೆ ಮದುವೆ ಆಗಿದ್ದರು. ತಾರಾ ಕುಟುಂಬದ ಹಿನ್ನೆಲೆಯುಳ್ಳ ಜೋಡಿ ಆಗಿದ್ದರಿಂದ ಮದುವೆಗೆ ಚಂದನವನದ ಗಣ್ಯರೆಲ್ಲರು ಭಾಗವಹಿಸಿ ನವದಂಪತಿಗೆ ಶುಭಕೋರಿದ್ದರು.

ಬಿಗ್‍ಬಾಸ್ ಸ್ಪರ್ಧಿ ಗೌತಮಿ ನಿಶ್ಚಿತಾರ್ಥ:
ರಿಯಾಲಿಟಿ ಶೋ ಬಿಗ್ ಬಾಸ್ 3ನೇ ಸೀಸನ್ ನಲ್ಲಿ ಸ್ಪರ್ಧಿಯಾಗಿದ್ದ ನಟಿ ಗೌತಮಿ ಗೌಡ ತಾವು ಪ್ರೀತಿಸುತ್ತಿದ್ದ ಹುಡುಗನ ಜೊತೆ ಮೇ 1ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗೌತಮಿ ಕೆಲವು ವರ್ಷಗಳಿಂದ ಜಾರ್ಜ್ ಕ್ರಿಸ್ಟಿ ಅವರನ್ನು ಪ್ರೀತಿಸುತ್ತಿದ್ದರು. ನಂತರ ಎರಡು ಕುಟುಂಬದವರು ಒಪ್ಪಿ ಗುರು-ಹಿರಿಯರು ಸೇರಿ ಇತ್ತೀಚೆಗೆಷ್ಟೆ ಗೌತಮಿ ಗೌಡ ಹಾಗು ಜಾರ್ಜ್ ಕ್ರಿಸ್ಟಿ ಅವರ ನಿಶ್ಚಿತಾರ್ಥವನ್ನು ಮಾಡಿದ್ದಾರೆ. ಗೌತಮಿಗೌಡ ಅವರು ಕಿರುತೆರೆ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

meghana gauthami

ಸೋನಂ ಕಪೂರ್:
ಬಾಲಿವುಡ್ ಮೋಸ್ಟ್ ಹ್ಯಾಂಡ್‍ಸಮ್ ಸ್ಟಾರ್ ಅನಿಲ್ ಕಪೂರ್ ಪುತ್ರಿ ಸೋನಮ್ ಕಪೂರ್ ಬಹು ದಿನಗಳ ಗೆಳೆಯ ದೆಹಲಿ ಮೂಲದ ಉದ್ಯಮಿ ಆನಂದ್ ಅಹುಜಾ ಜೊತೆ ಮೇ 8ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋನಮ್ ಬಾಂದ್ರಾದಲ್ಲಿರುವ ತನ್ನ ಆಂಟಿಯ ಬಂಗಲೆಯಲ್ಲಿ ಸಿಖ್ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಸೋನಮ್ ಕಪೂರ್ ಮದುವೆಗೆ ಬಾಲಿವುಡ್‍ನ ಗಣ್ಯಾತಿಗಣ್ಯರು ಹಾಜರಾಗಿದ್ದರು.

ನೇಹಾ ಧುಪಿಯಾ:
ಬಾಲಿವುಡ್‍ನ ರೌಡಿ ನಟಿ ಅಂತಾನೇ ಕರೆಸಿಕೊಳ್ಳುವ ನೇಹಾ ಧುಪಿಯಾ ಬಹುದಿನಗಳ ಗೆಳೆಯ ಅಂಗದ್ ಬೇಡಿ ಜೊತೆಗೆ ಮೇ 10ರಂದು ನೇಹಾ ಸಾಂಸರಿಕ ಜೀವನಕ್ಕೆ ಕಾಲಿರಿಸಿದ್ದಾರೆ. ನವದೆಹಲಿಯಲ್ಲಿ ತುಂಬಾ ಸರಳವಾಗಿ ಪೋಷಕರು ಮತ್ತು ಆಪ್ತ ಬಂಧುಗಳು ಸಮ್ಮುಖದಲ್ಲಿ ಮದುವೆ ನಡೆದಿದೆ. ಅಂಗದ್ ಬೇಡಿ ಹಿರಿತೆರೆ ಮತ್ತು ಕಿರುತೆರೆ ಎರೆಡರಲ್ಲೂ ಮಿಂಚುತ್ತಿದ್ದಾರೆ. ನೇಹಾ ಸಹ ಹಿರಿತೆರೆ ಮತ್ತು ಕಿರುತೆರೆಗಳಲ್ಲಿ ಗುರುತಿಸಿಕೊಂಡಿದ್ದಾರೆ. 2004ರಲ್ಲಿ ತೆರೆಕಂಡ ಖಯಾಮತ್: ಸಿಟಿ ಅಂಡರ್ ಥ್ರೀಟ್ ಸಿನಿಮಾ ಮೂಲಕ ಬಾಲಿವುಡ್‍ಗೆ ಪಾದಾರ್ಪಣೆ ಮಾಡಿದ್ದರು.

sonamneha

ಅಯ್ಯಪ್ಪ ನಿಶ್ಚಿತಾರ್ಥ:
ಬಿಗ್ ಬಾಸ್ ಸೀಸನ್-3 ಖ್ಯಾತಿಯ ಕ್ರಿಕೆಟರ್ ಎನ್.ಸಿ ಅಯ್ಯಪ್ಪ ಕನ್ನಡದ ನಟಿ ಅನು ಪೂವಮ್ಮ ಜೊತೆ ಮೇ 18ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವಸಂತ ನಗರದಲ್ಲಿರುವ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ಮುಂದಿನ ವರ್ಷ ಕೊಡಗಿನ ವಿರಾಜಪೇಟೆಯಲ್ಲಿ ಅಯ್ಯಪ್ಪ ಹಾಗೂ ಅನು ಮದುವೆಯಾಗಲಿದ್ದಾರೆ. ಅನು ಪೂವಮ್ಮ ಕನ್ನಡದ ಕರ್ವ, ಕಥಾವಿಚಿತ್ರ, ಲೈಫ್ ಸೂಪರ್, ಪಾನಿಪೂರಿ ಚಿತ್ರಗಳಲ್ಲಿ ನಟಿಸಿದ್ದಾರೆ.

ನಟ ರಮಣ್: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಾಧಾ ರಮಣ ಧಾರಾವಾಹಿಯ ನಟ ಸ್ಕಂದ ಆಶೋಕ್ 4 ವರ್ಷಗಳಿಂದ ಪ್ರೀತಿಸುತ್ತಿದ್ದ ತನ್ನ ಪ್ರೇಯಸಿ ಶಿಖಾ ಪ್ರಸಾದ್ ಜೊತೆ ಮೇ 31ರಂದು ಮದುವೆಯಾಗಿದ್ದಾರೆ. ಈ ಜೋಡಿಯ ಮದುವೆ ಆರು ದಿನಗಳ ಕಾಲ ನಡೆದಿದೆ. ಮೇ 25ರಿಂದ ಮೇ 31 ವರೆಗೂ ಮದುವೆ ಕಾರ್ಯಕ್ರಮಗಳು ನಡೆದಿದ್ದು, ಬೆಂಗಳೂರು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

raman ayyappa

ಸುನೀಲ್ ರಾವ್: ಸ್ಯಾಂಡಲ್‍ವುಡ್ ಖ್ಯಾತ ಗಾಯಕಿ ಬಿ.ಕೆ ಸುಮಿತ್ರ ಅವರ ಪುತ್ರ ನಟ ಹಾಗೂ ಗಾಯಕ ಸುನೀಲ್ ರಾವ್ ತನ್ನ ಪ್ರೇಯಸಿ ಶ್ರೇಯಾ ಐಯ್ಯರ್ ಜೊತೆ ಜೂನ್ 26ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸುನೀಲ್ ಹಾಗೂ ಶ್ರೇಯಾ ಅವರ ಮದುವೆ ನಡೆದಿದೆ. ಸುನೀಲ್ ರಾವ್ ಅವರ ಪತ್ನಿ ಶ್ರೇಯಾ ಐಯ್ಯರ್ ವೃತ್ತಿಯಲ್ಲಿ ಕಾಸ್ಟ್ಯೂಮ್ ಡಿಸೈನರ್ ಆಗಿದ್ದು, ಸುನಿಲ್ ಅಭಿನಯಿಸಿದ ವೆಬ್ ಸೀರಿಸ್‍ಗೆ ಡಿಸೈನರ್ ಆಗಿ ಕೆಲಸ ಮಾಡಿದ್ದಾರೆ.

ರಾಘವೇಂದ್ರ ರಾಜ್‍ಕುಮಾರ್ ಪುತ್ರನ ನಿಶ್ಚಿತಾರ್ಥ: ಸ್ಯಾಂಡಲ್‍ವುಡ್ ದೊಡ್ಮನೆಯ ರಾಘವೇಂದ್ರ ರಾಜ್‍ಕುಮಾರ್ ಪುತ್ರ ಯುವರಾಜ್‍ಕುಮಾರ್ ಹಾಗೂ ಶ್ರೀದೇವಿಯು ನಿಶ್ಚಿತಾರ್ಥ ಜುಲೈ 5ರಂದು ನಡೆದಿದೆ. ಖಾಸಗಿ ಹೊಟೇಲ್‍ನಲ್ಲಿ ಎಂಗೇಜ್‍ಮೆಂಟ್ ಮಾಡಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ರಾಜ್ ಕುಟುಂಬಸ್ಥರು ಕೇವಲ ಆಪ್ತರಿಗಷ್ಟೆ ಆಹ್ವಾನ ನೀಡಲಾಗಿತ್ತು.

suni

ಪವನ್ ಒಡೆಯರ್ ಮದುವೆ: ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ನಿರ್ದೇಶಕ ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರನ್ನು ಆಗಸ್ಟ್ 20ರಂದು ಮದುವೆಯಾದರು. ನಿರ್ದೇಶಕ ಪವನ್ ಒಡೆಯರ್ `ರಣವಿಕ್ರಮ’, `ನಟರಾಜ ಸರ್ವಿಸ್’, `ಗೂಗ್ಲಿ’ ಹಾಗೂ `ಗೋವಿಂದಾಯ ನಮಃ’ ಸಿನಿಮಾಗಳನ್ನು ಮಾಡಿದ್ದಾರೆ. ನಟಿ ಅಪೇಕ್ಷಾ ಟಿಎನ್ ಸೀತಾರಾಮ್ ಅವರ `ಕಾಫೀ ತೋಟ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಹರ್ಷವರ್ಧನ್: ರಾಜಾಹುಲಿ ಸಿನಿಮಾ ಖ್ಯಾತಿಯ, ಯಶ್ ಗೆಳೆಯ ಹರ್ಷವರ್ಧನ್ ಡಿಸೆಂಬರ್ 3ರಂದು ತಿರುಮಲದಲ್ಲಿ ಸಾಂಸರಿಕ ಜೀವನಕ್ಕೆ ಕಾಲಿರಿಸಿದ್ದರು. ರೂಪದರ್ಶಿ ಐಶ್ವರ್ಯ ಜೊತೆ ಸಪ್ತಪದಿ ತುಳಿದರು. ಮೇ ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಹರ್ಷವರ್ಧನ್ ಮತ್ತು ಮಾಡೆಲ್ ಐಶ್ವರ್ಯ ಅವರ ನಿಶ್ಚಿತಾರ್ಥ ನೆರವೇರಿತ್ತು.

harsha pawan

ದೀಪಿಕಾ ಪಡುಕೋಣೆ: ಬಾಲಿವುಡ್‍ನ ಹಾಟ್ ಜೋಡಿ ಎಂದೇ ಗುರುತಿಸಿಕೊಂಡಿದ್ದ ದೀಪಿಕಾ ಪಡುಕೋಣೆ ಮತ್ತು ರಣ್‍ವೀರ್ ಸಿಂಗ್ ಇಟಲಿಯ ಕೋಮೋ ಸಿಟಿಯಲ್ಲಿ ನವೆಂಬರ್ 14 ಮತ್ತು 15ರಂದು ಅದ್ಧೂರಿಯಾಗಿ ಮದುವೆಯಾದರು. ಮದುವೆ ಬಳಿಕ ಸ್ವದೇಶಕ್ಕೆ ಮರಳಿದ ಬಳಿಕ ಬೆಂಗಳೂರು ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ಇಟಲಿಯಲ್ಲಿ ನಡೆದ ಮದುವೆಯ ಒಂದು ಫೋಟೋ ಸಹ ಲೀಕ್ ಆಗದಂತೆ ಜೋಡಿ ಎಚ್ಚರಿಕೆ ವಹಿಸಿತ್ತು.

ಪ್ರಿಯಾಂಕ ಚೋಪ್ರಾ: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ, ವಿದೇಶಿ ಗೆಳೆಯ ನಿಕ್ ಜೋನ್ಸ್ ರನ್ನು ಡಿಸೆಂಬರ್ 1 ಮತ್ತು 2ರಂದು ಹಿಂದೂ ಹಾಗು ಕ್ರೈಸ್ತ ಧರ್ಮದಂತೆ ಮದುವೆಯಾದರು. ಜೋಧ್‍ಪುರದ ಉಮೈದ್ ಭವನದಲ್ಲಿ ನಡೆದ ಮದುವೆಗೆ ಕೇವಲ ಆಪ್ತ ಬಂಧುಗಳಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಡಿಸೆಂಬರ್ 4ರಂದು ದೆಹಲಿಯಲ್ಲಿ ನಡೆದ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದ್ದರು.

priyanka deepika

ಧೃವ ಸರ್ಜಾ ನಿಶ್ಚಿತಾರ್ಥ: ಬೆಂಗಳೂರಿನ ಬನಶಂಕರಿ ಬಳಿಯ ಧರ್ಮಗಿರಿ ದೇವಾಲಯದ ಆವರಣದಲ್ಲಿ ಡಿಸೆಂಬರ್ 9 ರಂದು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿಶ್ಚಿತಾರ್ಥ ಶಾಸ್ತ್ರಕ್ಕೆ ಅದ್ಧೂರಿಯಾಗಿ ನಡೆಯಿತು. ಧ್ರುವ ಸರ್ಜಾ ತಮ್ಮ ಬಾಲ್ಯದ ಗೆಳತಿ ಪ್ರೇರಣಾ ರಿಂಗ್ ತೊಡಿಸುವ ಮೂಲಕ ಭಾನುವಾರ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಧ್ರುವ ಮತ್ತು ಪ್ರೇರಣಾ ಅವರ ಮದುವೆಯನ್ನು ಗುರು-ಹಿರಿಯರು ಮುಂದಿನ ವರ್ಷ ಏಪ್ರಿಲ್ ನಲ್ಲಿ ಫಿಕ್ಸ್ ಮಾಡಿದ್ದಾರೆ. ಆದರೆ ಇನ್ನೂ ದಿನಾಂಕವನ್ನು ನಿಗದಿ ಮಾಡಿಲ್ಲ. ಏಪ್ರಿಲ್ ಕೊನೆಯ ವಾರದಲ್ಲಿ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ.

ಸುಮಂತ್ ಶೈಲೇಂದ್ರ: ನಟ ಸುಮಂತ್ ಶೈಲೇಂದ್ರ ಡಿಸೆಂಬರ 12ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಮಂತ್ ಶೈಲೇಂದ್ರ ಅವರು ಖ್ಯಾತ ನಿರ್ಮಾಪಕ ಶೈಲೇಂದ್ರ ಬಾಬು ಅವರ ಮಗನಾಗಿದ್ದು, ಶ್ರೀನಿವಾಸ್ ಮತ್ತು ಚಂದ್ರಕಲಾ ಅವರ ಪುತ್ರಿ ಅನಿತಾ ಅವರನ್ನು ಸುಮಂತ್ ಮದುವೆಯಾಗಿದ್ದಾರೆ. ಸುಮಂತ್ `ಆಟ’ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ನೀಡಿದ್ದು, ನಂತರ ರಾಧಿಕಾ ಪಂಡಿತ್ ಅವರ ಜೊತೆ `ದಿಲ್‍ವಾಲಾ’ ಹಾಗೂ ಕೃತಿ ಕರಬಂಧ ಜೊತೆ `ತಿರುಪತಿ ಎಕ್ಸ್‍ಪ್ರೆಸ್’ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ.

sumanath dhruva

ದಿಗಂತ್-ಐಂದ್ರಿತಾ: ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ದೂದ್‍ಪೇಡ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಡಿಸೆಂಬರ್ 12 ಮತ್ತು 13ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರು. ಚಿಕ್ಕಬಳ್ಳಾಪುರದ ನಂದಿಬೆಟ್ಟದ ಸಮೀಪವಿರುವ ಡಿಸ್ಕವರಿ ವಿಲೇಜ್ ರೆಸಾರ್ಟ್ ನಲ್ಲಿ ಕ್ಯೂಟ್ ಕಪಲ್ ಮದುವೆಯಾದ್ರು. ನಿಸರ್ಗಧಾಮದಲ್ಲಿ ಸತಿ-ಪತಿಗಳಾದ ದಿಗಂತ್ ಮತ್ತು ಐಂದ್ರಿತಾ ಡಿಸೆಂಬರ್ 15ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಿದ್ದರು.

ಕಪಿಲ್ ಶರ್ಮಾ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ `ಕಪಿಲ್ ಶರ್ಮಾ ಶೋ’ ಮೂಲಕ ಖ್ಯಾತರಾಗಿರುವ ಹಾಸ್ಯನಟ, ನಿರೂಪಕ ಕಪಿಲ್ ಶರ್ಮಾ ತಮ್ಮ ಬಹುಕಾಲದ ಗೆಳತಿ ಗಿನ್ನಿ ಚಾತ್ರಥ್ ಜೊತೆ ಡಿಸೆಂಬರ್ 14ರಂದು ಆಕೆಯ ಮನೆಯಲ್ಲೇ ಸಿಖ್ ಸಂಪ್ರದಾಯದ ಪ್ರಕಾರ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

diganth kapil

ರಾಖಿ ಸಾವಂತ್ ಮದುವೆ ಡ್ರಾಮಾ:
ನವೆಂಬರ್ ನಲ್ಲಿ ಬಾಲಿವುಡ್ ನಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಡ್ರಾಮಾ ಕ್ವೀನ್ ಅಂತಾನೇ ಗುರುತಿಸಿಕೊಳ್ಳುವ ಹಾಟ್ ಬೆಡಗಿ ರಾಖಿ ಸಾವಂತ್ ತಾನು ಮದುವೆ ಆಗುತ್ತಿದ್ದೇನೆಂದು ಘೋಷಿಸಿಕೊಂಡರು. ದೀಪಕ್ ಕಲಾಲ್ ಎಂಬತಾನೊಂದಿಗೆ ಮದುವೆ ಆಗುತ್ತಿದ್ದು, ಅದಕ್ಕಾಗಿ ಕನ್ಯತ್ವ ಪರೀಕ್ಷೆ ಮಾಡಿಸಿಕೊಂಡಿದ್ದೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡರು. ಇದಾದ ಕೆಲ ದಿನಗಳ ಬಳಿಕ ನಾನು ಮದುವೆ ಆಗುತ್ತಿಲ್ಲ. ದೀಪಕ್ ವರ್ತನೆ ಸರಿ ಇಲ್ಲ. ಆತನ ನಡವಳಿಕೆ ಸರಿಯಾಗಿಲ್ಲ. ಆತನಿಂದ ನಾನು ದೂರವಾಗುತ್ತಿದ್ದೇನೆ ಕಣ್ಣೀರು ಹಾಕುತ್ತ ವಿಡಿಯೋ ಹಾಕಿಕೊಂಡಿದ್ದರು.

DtKwYQ4VYAUCZa1

ಮದುವೆ ಶಾಪಿಂಗ್‍ಗಾ ದೀಪಕ್ 1 ಕೋಟಿ ನೀಡಿದ್ದ ಎಲ್ಲವೂ ಖರ್ಚು ಅಗಿದೆ. 20 ಲಕ್ಷ ಉಳಿದಿದ್ದು, ಅದನ್ನು ನಾನು ಕೊಡಲ್ಲ. ನಿಶ್ಚಿತಾರ್ಥಕ್ಕೆ ತೊಡೆಸಿದ್ದ ವಜ್ರದ ಉಂಗುರು ಹಿಂದಿರುಗಿ ನೀಡಲ್ಲ ಎಂದು ಸಾಲು ಸಾಲು ವಿಡಿಯೋ ಹಾಕಿಕೊಂಡು ಕಣ್ಣೀರು ಹಾಕಿದ್ದರು. ಮತ್ತೆ ವಿಡಿಯೋ ಹಾಕಿಕೊಂಡ ರಾಖಿ, ನನಗೆ ಹಿಂದಿರುಗಿಸಲು ಆಗ್ತಿಲ್ಲ. ಹಾಗಾಗಿ ಅನಿವಾರ್ಯವಾಗಿ ಆತನನ್ನೇ ಮದುವೆ ಆಗುತ್ತಿದ್ದೇನೆ ಅಂತಾ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:2018 Cinema2018 ಸಿನಿಮಾbollywoodcinemalovemarriagePublic TVsandalwoodಪಬ್ಲಿಕ್ ಟಿವಿಬಾಲಿವುಡ್ಮದುವೆಲವ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
7 hours ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
7 hours ago
big bulletin 06 August 2025 part 1
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-1

Public TV
By Public TV
7 hours ago
big bulletin 06 August 2025 part 2
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-2

Public TV
By Public TV
7 hours ago
big bulletin 06 August 2025 part 3
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-3

Public TV
By Public TV
7 hours ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?