Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ನಟ ಲೋಕನಾಥ್ ನಿಧನ – ಗಣ್ಯರು, ಸ್ಟಾರ್ ನಟರಿಂದ ಕಂಬನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಿರಿಯ ನಟ ಲೋಕನಾಥ್ ನಿಧನ – ಗಣ್ಯರು, ಸ್ಟಾರ್ ನಟರಿಂದ ಕಂಬನಿ

Cinema

ಹಿರಿಯ ನಟ ಲೋಕನಾಥ್ ನಿಧನ – ಗಣ್ಯರು, ಸ್ಟಾರ್ ನಟರಿಂದ ಕಂಬನಿ

Public TV
Last updated: December 31, 2018 12:06 pm
Public TV
Share
2 Min Read
loknath
SHARE

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್(90) ಇಂದು ಬೆಳಗಿನ ಜಾವ ನಿಧನರಾಗಿದ್ದು, ಗಣ್ಯರು ಮತ್ತು ಸಿನಿಮಾ ಕಲಾವಿದರು ಕಂಬನಿ ಮಿಡಿದಿದ್ದಾರೆ.

35 ವರ್ಷದಿಂದ ವೈಯಕ್ತಿಕವಾಗಿ ಬಲ್ಲೆ ಈ ಶಿಸ್ತಿನ ಕಲಾಬಂಧುವನ್ನ. ಅಂಬರೀಶ್ ಅವರ ಸ್ಮರಣಾರ್ಥ ಸಂದರ್ಭದಲ್ಲಿ ನನ್ನ ಪಕ್ಕ ಕೂತು ಆತ್ಮೀಯವಾಗಿ ಮಾತಾಡಿಸಿದ್ದರು. ಪೂರ್ಣ ಆಯುಷ್ಯ ಶ್ರೇಷ್ಠವಾಗಿ ಬದುಕಿ ನಿರ್ಗಮಿಸಿದ ಶ್ರೇಷ್ಠ ಮನುಜ. ಅವರಲ್ಲಿ ತಂದೆ, ತಾತ, ಬಂಧುವನ್ನು ಕಾಣುತ್ತಿದ್ದೆ. ಅಲ್ಲಿತ್ತು ಅವರ ಮನೆ ಬಂದಿದ್ದರು ಸುಮ್ಮನೆ. ಹೋದರು ಮತ್ತೆ ಅವರ ಮನೆಗೆ. ಓಂ ಶಾಂತಿ ಎಂದು ನವರಸನಾಯಕ ಜಗ್ಗೇಶ್ ಕಂಬನಿ ಮಿಡಿದಿದ್ದಾರೆ.

35ವರ್ಷದಿಂದ ವೈಯಕ್ತಿಕವಾಗಿ ಬಲ್ಲೆ ಈ ಶಿಸ್ತಿನ ಕಲಾಬಂಧುವನ್ನ!
ಅಂಬರೀಶ ರವರ ಸ್ಮರಣಾರ್ಥ ಸಂದರ್ಭದಲ್ಲಿ ನನ್ನಪಕ್ಕಕೂತು ಆತ್ಮೀಯ ವಾಗಿ ಮಾತಾಡಿಸಿದ್ದರು!ಪೂರ್ಣ ಆಯುಷ್ಯ ಶ್ರೇಷ್ಠವಾಗಿ ಬದುಕಿ ನಿರ್ಗಮಿಸಿದ ಶ್ರೇಷ್ಠ ಮನುಜ!ಅವರಲ್ಲಿ ತಂದೆ ತಾತ ಬಂಧು ಕಾಣುತ್ತಿದ್ದೆ!ಅಲ್ಲಿತ್ತು ಅವರಮನೆ ಬಂದಿದ್ದರು ಸುಮ್ಮನೆ!ಹೋದರು ಮತ್ತೆ ಅವರ ಮನೆಗೆ!ಓಂಶಾಂತಿ. pic.twitter.com/2b3Gz9iKD5

— ನವರಸನಾಯಕ ಜಗ್ಗೇಶ್ (@Jaggesh2) December 31, 2018

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಲೋಕನಾಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗಕ್ಕಾಗಿ 5 ದಶಕಗಳಿಂದ ದುಡಿದ ಹಿರಿಯ ನಟರಾದ ಉಪ್ಪಿನಕಾಯಿ ಲೋಕನಾಥ್ ಅಂಕಲ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅವರೊಡನೆ ನನಗೂ ಸಹ ಕೆಲ ಚಿತ್ರಗಳಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯವೆಂದು ಭಾವಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರರಂಗಕ್ಕಾಗಿ ೫ ದಶಕಗಳಿಂದ ದುಡಿದ ಹಿರಿಯ ನಟರಾದ ಉಪ್ಪಿನಕಾಯಿ ಲೋಕನಾಥ್ ಅಂಕಲ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅವರೊಡನೆ ನನಗೂ ಸಹ ಕೆಲ ಚಿತ್ರಗಳಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯವೆಂದು ಭಾವಿಸುತ್ತೇನೆ

— Darshan Thoogudeepa (@dasadarshan) December 31, 2018

ನಾನು ನೋಡಿದ ವ್ಯಕ್ತಿಗಳಲ್ಲಿ ಲೋಕನಾಥ್ ಅವರು ಸರಳವಾಗಿದ್ದರು. ತಮ್ಮ ಜೀವನವನ್ನು ಶಿಸ್ತು ಹಾಗೂ ನೈತಿಕತೆಯಿಂದ ನಡೆಸಿದ್ದಾರೆ. ಇವರು ನಮಗೆ ಬ್ಲಾಕ್ ಆಂಡ್ ವೈಟ್ ಕಾಲದಿಂದ ಈ ಕಾಲದವರೆಗೂ ಎಲ್ಲರನ್ನೂ ಮನರಂಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ಕೂಡ ಲೋಕನಾಥ್ ಅವರ ಫೋಟೋ ಹಾಕಿ ಸಂತಾಪ ಸೂಚಿಸಿದ್ದಾರೆ.

A very down to earth humble human I have known. Lived life with great discipline n ethics. A very versatile actor industry has witnessed for decades,,entertaining us from the B&W era, until now.
My prayers for his soul to rest in peace. 🙏🙏@ https://t.co/tt1i1FOuHh

— Kichcha Sudeepa (@KicchaSudeep) December 31, 2018

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ. ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ, ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ. ಲೋಕನಾಥ್ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ.ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ , ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ.ಲೋಕನಾಥ್ ಆತ್ಮಕ್ಕೆ ಶಾಂತಿ ಸಿಗಲಿ,ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದೊರೆಯಲಿ pic.twitter.com/NAnCZ7j1an

— CM of Karnataka (@CMofKarnataka) December 31, 2018

ಚಿತ್ರರಂಗದ ಹಿರಿಯ ನಟ ಲೋಕನಾಥ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. 650ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಇವರು ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ, ಬಂಧುಮಿತ್ರರಿಗೆ, ಅಭಿಮಾನಿಗಳಿಗೆ ದೇವರು ನೀಡಲಿ. ಇವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ.

ಚಿತ್ರರಂಗದ ಹಿರಿಯ ನಟ ಲೋಕನಾಥ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. 650ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಇವರು ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ, ಬಂಧುಮಿತ್ರರಿಗೆ, ಅಭಿಮಾನಿಗಳಿಗೆ ದೇವರು ನೀಡಲಿ. ಇವರ ಆತ್ಮಕ್ಕೆ ಶಾಂತಿ ದೊರಕಲಿ. pic.twitter.com/cz1sMaiVQD

— B.S.Yediyurappa (@BSYBJP) December 31, 2018

ಲೋಕನಾಥ್ ಅವರು ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, 5 ದಶಕಗಳ ಕಾಲ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಲೋಕನಾಥ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿ ಬಾರದ ಲೋಕಕ್ಕೆ ಲೋಕನಾಥ್ ಪಯಣ ಬೆಳೆಸಿದ್ದಾರೆ. ಭೂತಯ್ಯನ ಮಗ ಅಯ್ಯು, ನಾಗರಹಾವು, ಶರಪಂಜರ, ಮಿಂಚಿನ ಓಟ, ಬಂಗಾರದ ಪಂಜರ, ಕಾಕನಕೋಟೆ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

RIP 🙏🙏🙏 pic.twitter.com/1FBiUZopSd

— Ganesh (@Official_Ganesh) December 31, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:CelebritiesloknathNomorePublic TVsandalwoodಗಣ್ಯರುನಿಧನಪಬ್ಲಿಕ್ ಟಿವಿಲೋಕನಾಥ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
7 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?