ಕೋಲಾರ: ನೂತನ 2019ರ ವರ್ಷವನ್ನು ಲಕ್ಷಾಂತರ ಜನರು ಶಿವನ ಸನ್ನಿಧಿ ಕೋಟಿಶಿವಲಿಂಗ ಕ್ಷೇತ್ರದಲ್ಲಿ ವಿಶಿಷ್ಠವಾಗಿ ಆಚರಣೆ ಮಾಡಿದ್ರು. ಹೊಸ ವರ್ಷದ ವಿಶೇಷವಾಗಿ ಕ್ಷೇತ್ರದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನೆರೆವೇರಿತು.
ಸೋಮವಾರ ಬೆಳಗ್ಗಿನಿಂದಲೇ ಕೋಲಾರದ ಜನರು ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಹೊಸ ವರ್ಷದ ಸಂಭ್ರಮವನ್ನು ಆಚರಣೆ ಮಾಡಿದರು. ಕೋಲಾರದ ಬಂಗಾರಪೇಟೆ ತಾಲೂಕಿನ ಕಮ್ಮಸಂದ್ರ ಶ್ರೀ ಕೋಟಿ ಶಿವಲಿಂಗ ಕ್ಷೇತ್ರಕ್ಕೆ ಲಕ್ಷಾಂತರ ಸಂಖ್ಯೆಯ ಭಕ್ತರು ಹಾಗೂ ಪ್ರವಾಸಿಗರು ಆಗಮಿಸಿ ಹೊಸ ವರ್ಷವನ್ನ ಬರಮಾಡಿಕೊಂಡರು. ಭಕ್ತರು ಕೋಟಿ ಶಿವಲಿಂಗಗಳ ದರ್ಶನ ಪಡೆದು, ಆ ಶಿವನ ನೆನೆಯುತ್ತಾ ಹೊಸ ವರ್ಷ ಹರುಷ ತರಲಿ ಎಂದು ಬೇಡಿಕೊಂಡಿದ್ದಾರೆ.
ಕರ್ನಾಟಕದ ಜನರು ಮಾತ್ರವಲ್ಲದೆ ನೆರೆಯ ಆಂದ್ರ, ತಮಿಳುನಾಡು ಹಾಗೂ ಕೇರಳದಿಂದಲೂ ಲಕ್ಷಾಂತರ ಸಂಖ್ಯೆಯ ಪ್ರವಾಸಿಗರು ಕೋಟಿಲಿಂಗ ದರ್ಶನ ಪಡೆದು ಪುನೀತರಾದ್ರು. ಈ ಹೊಸ ವರ್ಷದ ನಿಮಿತ ಕ್ಷೇತ್ರದಲ್ಲಿ ನಡೆದ ಶ್ರೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ವೇಳೆ ರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ಉತ್ಸವಕ್ಕೆ ಇನ್ನಷ್ಟು ಮೆರಗನ್ನು ತಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv