ಬೆಂಗಳೂರು: ಹೊಸ ವರ್ಷದ ಎರಡನೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜನವರಿ 9 ರಂದು ಮೋದಿ ಮತ್ತು ಶಾ ತುಮಕೂರಿಗೆ ಆಗಮಿಸಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಒಂದೇ ದಿನದಲ್ಲಿ ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹೀಗೆ 5 ಲೋಕಸಭೆ ಕ್ಷೇತ್ರಗಳ ಪ್ರಮುಖರ ಜೊತೆ ವಿಶೇಷ ಸಭೆ ನಡೆಸಲಿದ್ದಾರೆ. ಈ 5 ಲೋಕಸಭೆ ಕ್ಷೇತ್ರಗಳ ಬೂತ್ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು ವಿಶೇಷ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 20 ರಿಂದ 30 ಸಾವಿರ ಪ್ರಮುಖ ಕಾರ್ಯಕರ್ತರ ಜೊತೆ ವಿಶೇಷ ಸಭೆ ನಡೆಯಲಿದೆ ಎನ್ನಲಾಗಿದೆ.
ವಿಶೇಷ ಸಭೆ ಮೂಲಕ ರಾಜ್ಯದ ಲೋಕಸಭೆ ಚುನಾವಣೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತುಮಕೂರಿನ ಮಹತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ವಿಶೇಷ ಸಭೆ ನಡೆಯಲಿದ್ದು, ಸಭೆಗೂ ಮುನ್ನ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv