Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಂಗನ ಕಾಯಿಲೆಗೆ 7 ಬಲಿ – ಏನಿದು ಮಂಗನ ಕಾಯಿಲೆ-ಹೇಗೆ ಬರುತ್ತೆ..?

Public TV
Last updated: January 6, 2019 7:30 am
Public TV
Share
2 Min Read
SVM DEATH
SHARE

ಶಿವಮೊಗ್ಗ: ಮಲೆನಾಡಿನ ಜಿಲ್ಲೆಗಳನ್ನು ಬೇಸಿಗೆಯಲ್ಲಿ ಕಾಡುವ ಕ್ಯಾಸನೂರು ಫಾರೆಸ್ಟ್ ಡೀಸಿಸ್ ಈ ವರ್ಷ ಮುಂಚಿತವಾಗಿ ಕಾಣಿಸಿಕೊಂಡು ಏಳು ಜನರನ್ನು ಬಲಿ ತೆಗೆದುಕೊಂಡಿದೆ. ಮಂಗನ ಜ್ವರ ಎಂದು ಕರೆಯಲಾಗುವ ಈ ಮಹಾಮಾರಿಗೆ ಮಲೆನಾಡಿನ ಜನ ತತ್ತರಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ತಾಲೂಕುಗಳಲ್ಲಿ ಪ್ರತೀ ವರ್ಷ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಂಗನ ಜ್ವರ ಈ ವರ್ಷ ಮೂರು ತಿಂಗಳು ಮೊದಲೇ ಕಾಣಿಸಿಕೊಂಡು ಏಳು ಜನರನ್ನು ಬಲಿ ತೆಗೆದುಕೊಂಡಿದೆ. ತೀರ್ಥಹಳ್ಳಿಯಲ್ಲಿ ಒಬ್ಬರು ಮತ್ತು ಸಾಗರದಲ್ಲಿ ಇಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ.

svm

ಸಾಗರದ ಮಂಡವಳ್ಳಿಯ ಪಾರ್ಶ್ವನಾಥ ಜೈನ್, ವಾಟೆಮಕ್ಕಿಯ ಕೃಷ್ಣಪ್ಪ, ಕಂಚಿಕಾಯಿ ಮಂಜುನಾಥ್ ಮತ್ತು ತೀರ್ಥಹಳ್ಳಿಯ ಗಂಟೆ ಜಾನಗಲು ಗ್ರಾಮದ ಸುಂದರಿ, ಕಂಚಿಕಾಯಿ ರಾಮಕ್ಕ, ಅರಕಲಗೋಡು ಗ್ರಾಮದ ಶ್ವೇತ ಎಂಬವರು ಮಂಗನ ಜ್ವರಕ್ಕೆ ತುತ್ತಾದ ದುರ್ದೈವಿಗಳು. ಈ ಜ್ವರದಿಂದ ಪೀಡಿತರಾಗಿರುವ ಐವತ್ತಕ್ಕೂ ಹೆಚ್ಚು ಜನ ಸಾಗರ, ಮಣಿಪಾಲ ಹಾಗೂ ಶಿವಮೊಗ್ಗದ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವರನ್ನು ನಾವು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದೇವೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಏನಿದು ಮಂಗನ ಕಾಯಿಲೆ?
ಕಾಡಿನಲ್ಲಿ ಮಂಗಗಳು ಸತ್ತು ಬಿದ್ದಿರುತ್ತವೆ. ಹೀಗೆ ಸತ್ತ ಮಂಗಗಳಿಂದ ಹರಡುವ ಉಣ್ಣೆಗಳು ಜಾನುವಾರು, ಕಾಡು-ತೋಟಕ್ಕೆ ಹೋದ ಮನುಷ್ಯರನ್ನು ಸೇರಿಕೊಳ್ಳುತ್ತವೆ. ಈ ಉಣ್ಣೆಯಿಂದ ಕಂಡು ಬರುವ ಜ್ವರವೇ ಮಂಗನಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್ ಡೀಸಿಸ್ ಎಂದು ಕರೆಯಲಾಗುತ್ತಿದೆ. ನಾಲ್ಕು ದಶಕಗಳ ಹಿಂದೆ ಮೊದಲಿಗೆ ಸೊರಬ ತಾಲೂಕಿನ ಕ್ಯಾಸನೂರಿನಲ್ಲಿ ಈ ರೋಗ ಕಾಣಿಸಿಕೊಂಡಿತ್ತು. ಬಳಿಕ ತೀರ್ಥಹಳ್ಳಿ ತಾಲೂಕಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಈ ಬಾರಿ ಸಾಗರ ತಾಲೂಕಿಗೂ ವ್ಯಾಪಿಸಿದೆ ಎಂದು ಸ್ಥಳೀಯ ಬಸವರಾಜ್ ತಿಳಿಸಿದ್ದಾರೆ.

svm 2

ಪ್ರತಿವರ್ಷ ಬೇಸಿಗೆ ಕಾಲದಲ್ಲಿ ಮಂಗನ ಕಾಯಿಲೆ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಚುಚ್ಚುಮದ್ದು ನೀಡಲಾಗುತ್ತಿತ್ತು. ಈ ಜ್ವರ ನಿಯಂತ್ರಣಕ್ಕೆ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಪಶುಸಂಗೋಪನಾ ಇಲಾಖೆ ಹಾಗೂ ರೆವಿನ್ಯೂ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕಿದೆ. ಈ ಸಮನ್ವಯತೆಯ ಕೊರತೆಯಿಂದಾಗಿ ಈ ಬಾರಿ ಏಳು ಜನ ಬಲಿಯಾಗಿದ್ದಾರೆ. ಸಮರೋಪಾದಿಯಲ್ಲಿ ಕೆಲಸ ಮಾಡಿದರೆ ಮಾತ್ರ ಮಲೆನಾಡಿನ ಜನರ ಜೀವ ರಕ್ಷಣೆ ಮಾಡಲು ಸಾಧ್ಯ ಎಂದು ಹೇಳಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:deathhospitalMonkey feverPublic TVshivamoggatreatmentಆಸ್ಪತ್ರೆಚಿಕಿತ್ಸೆಪಬ್ಲಿಕ್ ಟಿವಿಮಂಗನ ಜ್ವರಶಿವಮೊಗ್ಗಸಾವು
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
24 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
16 minutes ago
Akash Family
Crime

ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

Public TV
By Public TV
20 minutes ago
Maithili Patil
Latest

Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

Public TV
By Public TV
23 minutes ago
Ahmedabad Plane Crash Bhagavad Gita
Latest

ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

Public TV
By Public TV
44 minutes ago
Lawrence Daniels
Latest

Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

Public TV
By Public TV
1 hour ago
Lone Survivor Ramesh
Latest

ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ: ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?