ಚಿಕ್ಕಮಗಳೂರು: ತಾಲೂಕಿನ ಇಳೇಖಾನ್ ಗ್ರಾಮದಲ್ಲಿ ಚಿಪ್ಪು ಹಂದಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಫಿ ತೋಟದ ಮಾಲೀಕ ಮೋಹನ್, ರಾಜಶೇಖರ್, ಮಲ್ಲೇಶ್ ಮತ್ತು ಗಣೇಶ್ ಬಂಧಿತ ಆರೋಪಿಗಳು. ಚಿಕ್ಕಮಗಳೂರು ವಲಯ ಆರ್.ಎಫ್.ಓ ಶಿಲ್ಪಾ ನೇತೃತ್ವದಲ್ಲಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಂದು ಜೀವಂತ ಚಿಪ್ಪು ಹಂದಿ, ಒಂದು ಬೈಕ್ ಮತ್ತು ಒಂದು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
20 ಕೆ.ಜಿ. ತೂಕದ ಚಿಪ್ಪು ಹಂದಿ ಇದಾಗಿದ್ದು, ಇಷ್ಟು ತೂಕದ ಚಿಪ್ಪು ಹಂದಿ ತುಂಬಾ ಅಪರೂಪವಾಗಿ ಕಂಡು ಬರುತ್ತವೆ ಎಂದು ಹೇಳಲಾಗುತ್ತಿದೆ. ಬಂಧಿತರು 40 ಲಕ್ಷ ಬೆಲೆ ಬಾಳುವ ಚಿಪ್ಪು ಹಂದಿಯನ್ನ ಬೇಟೆಯಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಬಳಿಕ ಖಚಿತ ಮಾಹಿತಿ ಮೇರೆಗೆ ಆರ್.ಎಫ್.ಓ ಶಿಲ್ಪಾ ದಾಳಿ ಮಾಡಿದ್ದಾರೆ
ಈ ಚಿಪ್ಪು ಹಂದಿಗೆ ವಿದೇಶದಲ್ಲಿ ಭಾರೀ ಬೇಡಿಕೆ ಇದೆ. ಸದ್ಯಕ್ಕೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 40 ಲಕ್ಷ ಬೆಲೆ ಬಾಳುವ ಜೀವಂತ ಚಿಪ್ಪು ಹಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv