Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಾವಿನ ಜ್ವರಕ್ಕೆ ಬೆಚ್ಚಿಬಿದ್ದ ಮಲೆನಾಡು ಮಂದಿ- 7 ಜನರ ಸಾವಿನ ಬಳಿಕ ಎಚ್ಚೆತ್ತ ಸರ್ಕಾರ..!

Public TV
Last updated: January 7, 2019 7:19 am
Public TV
Share
2 Min Read
SVM DEATH
SHARE

ಶಿವಮೊಗ್ಗ: ಜಿಲ್ಲೆಗೆ ಮಹಾಮಾರಿಯಂತೆ ದಾಳಿ ಮಾಡಿರುವ ಮಂಗನ ಜ್ವರಕ್ಕೆ ಏಳು ಜನ ಬಲಿಯಾದ ಮೇಲೆ ಸರ್ಕಾರ ಎಚ್ಚೆತ್ತಿದೆ.

ಮಲೆನಾಡಿನಲ್ಲಿ ಮಂಗನಜ್ವರ ಅಥವಾ ಕ್ಯಾಸನೂರು ಡಿಸೀಸ್ ಅಂತ ಕರೆಯಲಾಗುವ ಸಾವಿನ ಜ್ವರಕ್ಕೆ 7 ದಶಕಗಳ ನಂಟಿದೆ. 1957ರಲ್ಲಿ ಮೊಟ್ಟಮೊದಲು ಸೊರಬ ತಾಲೂಕಿನ ಕ್ಯಾಸನೂರಿನಲ್ಲಿ ಕಾಣಿಸಿಕೊಂಡಿತು. ಅಲ್ಲಿನ ಕಾಡಿನಲ್ಲಿ ಮಂಗಗಳು ಸತ್ತು ಬೀಳತೊಡಗಿದವು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಜ್ವರ ಕಾಣಿಸುತ್ತಲೇ ಇದೆ. ಈ ವರ್ಷ ನೂರಕ್ಕೂ ಹೆಚ್ಚು ಜನ ಜ್ವರದಿಂದ ಬಳಲುತ್ತಿದ್ದು, ಏಳು ಜನ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಜನ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

svg

ಸೊರಬ ತಾಲೂಕಿನ ಕ್ಯಾಸನೂರು ಬಳಿಯ ಗುಡವಿ ಪಕ್ಷಿಧಾಮಕ್ಕೆ ರಷ್ಯಾದಿಂದ ಇಲ್ಲಿಗೆ ಪಕ್ಷಿಗಳು ವಲಸೆ ಬರುತ್ತವೆ. ಈ ಪಕ್ಷಿಗಳ ಮೂಲಕ ಜೈವಿಕ ಅಸ್ತ್ರವಾಗಿ ಭಾರತಕ್ಕೆ ಕಾಯಿಲೆಯನ್ನು ಕಳುಹಿಸಿಲಾಗಿದೆ ಅಂತ ಪಕ್ಷಿತಜ್ಞ ಸಲೀಂ ಅಲಿ ದಶಕಗಳ ಮುಂಚೆಯೇ ಹೇಳಿದ್ದರು. ಈ ಕುರಿತ ಸಂಶೋಧನೆಗಳು ಸರ್ಕಾರಗಳ ನಿರ್ಲಕ್ಷ್ಯದಿಂದ ಸ್ಥಗಿತಗೊಂಡಿವೆ. ಈಗ 7 ಮಂದಿ ಬಲಿಯಾಗಿದ್ದು, ಇದರಲ್ಲಿ ಸರ್ಕಾರದ ನಿರ್ಲಕ್ಷ್ಯ ಇರುವುದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಬಗ್ಗೆ ತನಿಖೆಗೆ ಸಮಿತಿ ರಚಿಸಲಾಗುವುದು. ಮೃತ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಈ ಜ್ವರಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಸರ್ಕಾರ ಸಂಪೂರ್ಣ ವಿಫಲಗೊಂಡಿದೆ. ಪ್ರತೀ ವರ್ಷ ಜನ ಸಾಯುತ್ತಲೇ ಇದ್ದಾರೆ. ಜನ ಸತ್ತಾಗ ಸಚಿವರು ಬಂದು ಸಾಂತ್ವನ ಹೇಳುತ್ತಿದ್ದಾರೆ. ಆದರೆ ಅಮಾಯಕರು ಮಾತ್ರ ನರಳುತ್ತಲೇ ಇದ್ದಾರೆ ಎಂದು ಸ್ಥಳೀಯ ಶಾಂತಮ್ಮ ತಿಳಿಸಿದ್ದಾರೆ.

svm

ಸಾಗರದ ಮಂಡವಳ್ಳಿಯ ಪಾರ್ಶ್ವನಾಥ ಜೈನ್, ವಾಟೆಮಕ್ಕಿಯ ಕೃಷ್ಣಪ್ಪ, ಕಂಚಿಕಾಯಿ ಮಂಜುನಾಥ್ ಮತ್ತು ತೀರ್ಥಹಳ್ಳಿಯ ಗಂಟೆ ಜಾನಗಲು ಗ್ರಾಮದ ಸುಂದರಿ, ಕಂಚಿಕಾಯಿ ರಾಮಕ್ಕ, ಅರಕಲಗೋಡು ಗ್ರಾಮದ ಶ್ವೇತ ಎಂಬವರು ಮಂಗನ ಜ್ವರಕ್ಕೆ ತುತ್ತಾದ ದುರ್ದೈವಿಗಳು. ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ತಾಲೂಕುಗಳಲ್ಲಿ ಪ್ರತೀ ವರ್ಷ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಂಗನ ಜ್ವರ ಈ ವರ್ಷ ಮೂರು ತಿಂಗಳು ಮೊದಲೇ ಕಾಣಿಸಿಕೊಂಡು ಏಳು ಜನರನ್ನು ಬಲಿ ತೆಗೆದುಕೊಂಡಿದೆ.

ಸಾವಿನ ಕೂಪಕ್ಕೆ ತಳ್ಳವ ಮಂಗನ ಕಾಯಿಲೆಯಿಂದ ಸಾವು ಸಂಭವಿಸಿದ ವೇಳೆ ಸರ್ಕಾರ ಕೇವಲ ಭರವಸೆ ನೀಡಲು ಸೀಮಿತವಾಗದೇ ಶಾಶ್ವತ ಪರಿಹಾರ ಹುಡುಕಲು ಮುಂದಾಗಬೇಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:deathgovernmenthealth departmentMonkey feverPublic TVshivamoggaಆರೋಗ್ಯ ಇಲಾಖೆಪಬ್ಲಿಕ್ ಟಿವಿಮಂಗನ ಜ್ವರಶಿವಮೊಗ್ಗಸರ್ಕಾರಸಾವು
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
15 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
16 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
18 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
5 minutes ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
7 minutes ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
29 minutes ago
Sumeet Sabharwal Clive Kundar
Latest

Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

Public TV
By Public TV
30 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
51 minutes ago
Madikeri Auto Driver
Districts

40 ರೂ. ಬದಲಿಗೆ 34,000 ರೂ. ಪೇ ಮಾಡಿದ ಪ್ರಯಾಣಿಕ – ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?